Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುರೇಶ್ ಪೂಜಾರಿ ಬಂಧನಕ್ಕೆ ಪೊಲೀಸ್ ಬಲೆ
    ಅಪರಾಧ

    ಸುರೇಶ್ ಪೂಜಾರಿ ಬಂಧನಕ್ಕೆ ಪೊಲೀಸ್ ಬಲೆ

    vartha chakraBy vartha chakraSeptember 18, 2022Updated:September 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.18- ನಗರದಲ್ಲಿ ನಡೆದಿದ್ದ 2007ರ ಶಬನಂ ಡೆವಲಪ​ರ್ಸ್ ಸಿಬ್ಬಂದಿ ಕೊಲೆ ಪ್ರಕರಣ ಸಂಬಂಧ ಕುಖ್ಯಾತ ಪಾತಕಿ ರವಿಪೂಜಾರಿ ಸಹಚರ ಸುರೇಶ್‌ ಪೂಜಾರಿಯನ್ನು ವಶಕ್ಕೆ ಪಡೆಯಲು ಮುಂಬೈಗೆ ನಗರದ ಸಿಸಿಬಿ ಅಧಿಕಾರಿಗಳು ತೆರಳಿದ್ದಾರೆ..
    ಕಳೆದ ಡಿಸೆಂಬರ್‌ನಲ್ಲಿ ವಿದೇಶದಲ್ಲಿ ನೆಲೆಸಿದ್ದ ಪೂಜಾರಿ ಶಿಷ್ಯ ಸುರೇಶ್‌ ಪೂಜಾರಿಯನ್ನು ಮುಂಬೈ ಪೊಲೀಸರು ಬಂಧಿಸಿ ಕರೆತಂದಿದ್ದರು.ಮುಂಬೈ ಮಹಾನಗರದಲ್ಲಿ ನಡೆದಿದ್ದ ಹಲವು ಅಪರಾಧ ಕೃತ್ಯಗಳಲ್ಲಿ ಪಾತ್ರದ ಹಿನ್ನಲೆಯಲ್ಲಿ ಆತನನನ್ನು ಮುಂಬೈ ಪೊಲೀಸರು ಸುದೀರ್ಘ ತನಿಖೆಗೊಳಪಡಿಸಿದ್ದರು. ಈಗ ಅವರ ಬಹುತೇಕ ತನಿಖೆ ಪೂರ್ಣಗೊಂಡಿದೆ. ಹೀಗಾಗಿ ಬೆಂಗಳೂರಿನ ಕೊಲೆ ಪ್ರಕರಣಗಳ ಸಂಬಂಧ ಸುರೇಶ್‌ ಪೂಜಾರಿಯನ್ನು ವಶಕ್ಕೆ ಪಡೆಯಲು ಸಿಸಿಬಿ ತಂಡ, ನ್ಯಾಯಾಲಯದಿಂದ ಬಾಡಿ ವಾರೆಂಟ್‌ ಪಡೆದು ತೆರಳಿದೆ. ದಶಕಗಳಿಂದ ರವಿ ಪೂಜಾರಿ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದ ಸುರೇಶ್‌, ವಿದೇಶದಲ್ಲಿದ್ದ ರವಿ ಸೂಚನೆ ಮೇರೆಗೆ ಬೆಂಗಳೂರು, ಮಂಗಳೂರು ಹಾಗೂ ಮುಂಬೈ ಸೇರಿದಂತೆ ವಿವಿಧೆಡೆ ಅಪರಾಧ ಕೃತ್ಯಗಳನ್ನು ಎಸಗಿದ್ದ.2007ರ ಫೆಬ್ರವರಿ 15 ರಂದು ರವಿಪೂಜಾರಿ ಸೂಚನೆ ಮೇರೆಗೆ ಬೆಂಗಳೂರಿನ ಶಬನಂ ಡೆವಲಪ​ರ್‍ಸ್ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ಕೃತ್ಯದಲ್ಲಿ ಇಬ್ಬರು ಸಿಬ್ಬಂದಿ ಹತ್ಯೆಗೀಡಾಗಿದ್ದರು. ಆ ದಿನ ನಗರದ ಹೋಟೆಲ್‌ವೊಂದರಲ್ಲಿ ಪ್ರವೀಣ್‌ ರಾವ್‌ ಹೆಸರಿನ ನಕಲಿ ದಾಖಲೆ ನೀಡಿ ವಾಸ್ತವ್ಯ ಹೂಡಿ ಗುಂಡಿನ ದಾಳಿಯನ್ನು ಸುರೇಶ್‌ ಉಸ್ತುವಾರಿ ವಹಿಸಿದ್ದ. ಈ ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆತನ ಪತ್ತೆ ಬೆಂಗಳೂರು ಪೊಲೀಸರು ಹುಡುಕಾಟ ನಡೆಸಿದ್ದರು ಪ್ರಯೋಜನವಾಗಿರಲಿಲ್ಲ.
    ಈಗ ಮುಂಬೈ ಪೊಲೀಸರ ವಶದಲ್ಲಿರುವ ಆರೋಪಿಯನ್ನು ಹಳೆಯ ಕೊಲೆ ಪ್ರಕರಣದಲ್ಲಿ ವಶಕ್ಕೆ ಪಡೆದು ತನಿಖೆ ನಡೆಸಲು ಸಿಸಿಬಿ ನಿರ್ಧರಿಸಿದೆ. ಇದೇ ಪ್ರಕರಣದಲ್ಲಿ ಈಗಾಗಲೇ ರವಿಪೂಜಾರಿ ವಿರುದ್ಧ ಪೊಲೀಸರು ಆರೋಪ ಪಟ್ಟಿಸಲ್ಲಿಸಿದ್ದಾರೆ. ನ್ಯಾಯಾಲಯದ ಬಾಡಿ ವಾರೆಂಟ್‌ ಪಡೆದು ಮುಂಬೈಗೆ ತೆರಳಿದ ಸಿಸಿಬಿ ತಂಡವು, ಸುರೇಶ್‌ ಪೂಜಾರಿ ವಶಕ್ಕೆ ನೀಡುವಂತೆ ಮುಂಬೈ ಪೊಲೀಸರಿಗೆ ಮನವಿ ಮಾಡಿದ್ದಾರೆ. ಮುಂದಿನ ವಾರದಲ್ಲಿ ಆರೋಪಿಯನ್ನು ಕರೆ ತರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleನಕಲಿ ವೆಬ್ ಸೈಟ್ ತೆರೆದು ವಂಚನೆ
    Next Article ಆಂಧ್ರದ ಹಲವೆಡೆ NIA ದಾಳಿ
    vartha chakra
    • Website

    Related Posts

    ಭದ್ರತಾ ಆಯೋಗ ಅಸ್ತಿತ್ವಕ್ಕೆ.

    June 19, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    June 17, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • Chriswot on ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    • oxzndzjzp on 65 ಜನರ ಪ್ರಾಣ ಉಳಿಸಿದ ಲಾರಿ ಚಾಲಕ | Lorry Driver
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe