Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ವರಿಗೂ ಆರೋಗ್ಯ-ಸರ್ಕಾರದ ಆದ್ಯತೆ.
    ಸುದ್ದಿ

    ಸರ್ವರಿಗೂ ಆರೋಗ್ಯ-ಸರ್ಕಾರದ ಆದ್ಯತೆ.

    vartha chakraBy vartha chakraJanuary 26, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.26-
    ‘ರಾಜ್ಯದ ಸರ್ವರಿಗೂ ತಮ್ಮ ಮನೆಯ ಮುಂದೆ ಸುಲಭವಾಗಿ ಅತ್ಯುನ್ನುತ ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕೆನ್ನುವುದು ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಒಂದು ಸಾವಿರ ಕೋಟಿ ರೂ. ವೆಚ್ಚದಲ್ಲಿ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 30 ಹಾಸಿಗೆಗಳುಳ್ಳ ಮಾದರಿ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು’ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ. 74ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನಾರೋಗ್ಯ, ಆರೋಗ್ಯ ಕರ್ನಾಟಕ ಕಾರ್ಡ್‍ಗಳಿಗೆ 1.22 ಕೋಟಿ ಫಲಾನುಭವಿಗಳನ್ನು ನೊಂದಾಯಿಸಿದ್ದು, BPL ಕುಟುಂಬಗಳಿಗೆ 5 ಲಕ್ಷ ರೂ.ವರೆಗಿನ ಉಚಿತ ವೈದ್ಯಕೀಯ ರಕ್ಷಣೆ ಒದಗಿಸುತ್ತದೆ’ ಎಂದರು.

    ‘ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವು 83ರಿಂದ 69ಕ್ಕೆ ಇಳಿದಿದೆ. ನಗರ ಪ್ರದೇಶಗಳಲ್ಲಿ 438 ನಮ್ಮ ಕ್ಲಿನಿಕ್‍ಗಳನ್ನು, 128 ಮಹಿಳಾ ಸ್ವಾಸ್ಥ್ಯ ಚಿಕಿತ್ಸಾಲಯಗಳನ್ನು ಮತ್ತು ಪಾಲಿ ಕ್ಲಿನಿಕ್‍ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಅವರು ತಿಳಿಸಿದರು.
    ಕರ್ನಾಟಕ ದೇಶದ ಪ್ರಗತಿಪರ ರಾಜ್ಯಗಳಲ್ಲಿ ಒಂದಾಗಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ಜನತೆಗೆ ಮೂಲಭೂತ ಸೌಕರ್ಯ, ಸೇವೆ, ಸರ್ವರ ಅಭಿವೃದ್ಧಿಯನ್ನು ಒಳಗೊಂಡ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಗಣ್ಯ ಸ್ಥಾನದಲ್ಲಿದೆ’ ಎಂದರು.
    ‘ನವ ಭಾರತಕ್ಕಾಗಿ ನವ ಕರ್ನಾಟಕ ಎಂಬ ಆಶಯದೊಂದಿಗೆ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಶಿಕ್ಷಣ, ಆರೋಗ್ಯ, ಕೃಷಿ, ಮೂಲ ಸೌಕರ್ಯಗಳ ಉನ್ನತೀಕರಣ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಹದಿನಾಲ್ಕು ಅಮೃತ ಮಹೋತ್ಸವ ಯೋಜನೆಗಳು ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿವೆ’ ಎಂದು ಹೇಳಿದರು. ‘ರಾಜ್ಯಾದ್ಯಂತ ಇರುವ ಸಣ್ಣ, ಅತಿ ಸಣ್ಣ , ಮಧ್ಯಮ ಹಾಗೂ ದೊಡ್ಡ ಹಿಡುವಳಿದಾರರನ್ನು ಗುರುತಿಸಲು ಕಳೆದ ಅಕ್ಟೋಬರ್‌ನಿಂದ ಕೃಷಿ ಗಣತಿ ಕಾರ್ಯವೂ ಆರಂಭವಾಗಿದೆ’ ಎಂದರು.

    ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಖಾತ್ರಿ ಯೋಜನೆಯಡಿ ಸುಮಾರು 6 ಸಾವಿರ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತವನ್ನು ವೆಚ್ಚ ಮಾಡಲಾಗಿದೆ. ಕಳೆದ ಜನವರಿಯಿಂದ ಡಿಸೆಂಬರ್ ತಿಂಗಳವರೆಗೆ ಒಟ್ಟು 13.47 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡಿ 29.02 ಲಕ್ಷ ಕುಟುಂಬಗಳ 52.71 ಲಕ್ಷ ಜನರಿಗೆ ಉದ್ಯೋಗ ಒದಗಿಸಲಾಗಿದೆ. ಒಟ್ಟು 4110 ಕೋಟಿ ರೂ.ಗಳ ಕೂಲಿ ಮೊತ್ತವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಜಮಾ ಮಾಡಲಾಗಿದೆ’ ಎಂದರು.
    ‘ಬಾಲ್ಯವಿವಾಹ ತಡೆಗಟ್ಟುವ ಸ್ಫೂರ್ತಿ ಯೋಜನೆ ಕೊಪ್ಪಳ ಜಿಲ್ಲೆಯಲ್ಲಿ ಯಶಸ್ವಿಯಾಗಿದ್ದು, ವಿಜಯಪುರ, ರಾಯಚೂರು, ಬೆಳಗಾವಿ, ಕಲ್ಬುರ್ಗಿ ಜಿಲ್ಲೆಗಳ 11 ತಾಲ್ಲೂಕುಗಳಲ್ಲಿ ಈ ಯೋಜನೆ ವಿಸ್ತರಿಸಲಾಗುತ್ತಿದೆ. 12.51 ಕೋಟಿ ರೂ. ವೆಚ್ಚ ಮಾಡಲಾಗುವುದು’ ಎಂದರು. ‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಚಾಮರಾಜನಗರ, ಕೊಡಗು, ಬೀದರ್, ಹಾವೇರಿ, ಕೊಪ್ಪಳ, ಬಾಗಲಕೋಟೆ, ಹಾಸನ ಸೇರಿದಂತೆ ಏಳು ಸ್ವಾಯತ್ತ ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದ್ದೇವೆ. IIT ಮಾದರಿಯಲ್ಲಿ 7 ಎಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ’ಎಂದು ಅವರು ತಿಳಿಸಿದರು.

    News Politics Republic Day ಆರೋಗ್ಯ ಕಾಲೇಜು ಶಿಕ್ಷಣ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleNaxal ಕಮಾಂಡರ್ Surrender..
    Next Article D K Shivakumar, Dr. G Parameshwar ಕ್ಷೇತ್ರ ಬದಲಾವಣೆ..?
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kcm12 on ಸಚಿವ ಜಾರ್ಜ್ ಅವರಲ್ಲಿ ಕ್ಷಮೆ ಕೇಳಿ.
    • RonaldClore on ರಾಜ್ಯದಲ್ಲಿರುವುದು ಶೇ.60‌ ಪರ್ಸೆಂಟ್ ಸರ್ಕಾರವಂತೆ | R Ashok
    • d87n4 on ಸಂಚಾರ ನಿಯಮ ಉಲ್ಲಂಘನೆ – 45 ಕೋಟಿಗೂ ಅಧಿಕ ದಂಡ ಸಂಗ್ರಹ!
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe