Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾವೇರಿ ಕಣ್ಣೀರಿನ ಕತೆ, ಕರ್ನಾಟಕದ ವ್ಯಥೆ! | Cauvery
    Trending

    ಕಾವೇರಿ ಕಣ್ಣೀರಿನ ಕತೆ, ಕರ್ನಾಟಕದ ವ್ಯಥೆ! | Cauvery

    vartha chakraBy vartha chakraSeptember 22, 2023Updated:September 27, 2023No Comments6 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾವೇರಿ (Cauvery) ನದಿ ಕರ್ನಾಟಕದ ಜೀವನದಿ.ಮಂಡ್ಯ, ಮೈಸೂರು, ಹಾಸನ,ತುಮಕೂರು, ಕೊಡಗು,ರಾಮನಗರ ಜನರ ಜೀವನಾಡಿ, ಮಹಾನಗರಿ ಬೆಂಗಳೂರಿನ ಜೀವಜಲ.
    ಕೊಡಗಿನ ಬ್ರಹ್ಮಗಿರಿ ತಪ್ಪಲಿನಲ್ಲಿ ಲೋಪಮುದ್ರೆಯಾಗಿ ಜನಿಸಿ,ಕಾವೇರಿಯಾಗಿ ಮೈದುಂಬಿ ಹರಿಯುವ ಈ ನದಿ ನೆರೆಯ ತಮಿಳುನಾಡು, ಕೇರಳ ಮತ್ತು ಪಾಂಡಿಚೇರಿ ರಾಜ್ಯಗಳ ಪಾಲಿಗೆ ವರ ದೇವತೆ.ಒಟ್ಟಾರೆ ದಕ್ಷಿಣ ಭಾರತದ ಈ ರಾಜ್ಯಗಳ ಗಂಗೆಯಾದ ಕಾವೇರಿ ನದಿ ನೀರು ಹಂಚಿಕೆ ಈ ರಾಜ್ಯಗಳ ನಡುವೆ ಬಿಡಿಸಲಾಗದ ಕಗ್ಗಂಟು.
    ಈ ನೀರು ಹಂಚಿಕೆ ಕುರಿತಾದ ವಿವಾದಕ್ಕೆ ಶತಮಾನಗಳ ಇತಿಹಾಸವಿದೆ.ಲಕ್ಷಾಂತರ ಸಂಧಾನ ಮಾತುಕತೆಗಳು ನಡೆದಿವೆ‌. ನ್ಯಾಯಾಲಯದ ತೀರ್ಪುಗಳು ಹೊರಬಿದ್ದಿವೆ.ಆದರೆ,ವಿವಾದ ಮಾತ್ರ ಬಗೆಹರಿದಿಲ್ಲ.ಕಾಲನ ತೆರೆ ಸರಿದಂತೆ ವಿವಾದದ ಸ್ವರೂಪ ಕೂಡಾ ಬದಲಾಗುತ್ತಾ ಬರುತ್ತಿದೆ.

    ಸಾಮಾನ್ಯ ಜಲ ವರ್ಷಗಳ ಸಮಯದಲ್ಲಿ ಇದು ಯಾವುದೇ ರೀತಿಯ ವಿವಾದ ಹಾಗೂ ಕಲಹಕ್ಕೆ ಅವಕಾಶವಿರುವುದಿಲ್ಲ.ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾದರೆ,
    ಯಾವುದೇ ಸಮಸ್ಯೆ ಇರುವುದಿಲ್ಲ ನೀರು ಸಾಕಷ್ಟು ಹರಿದು ಸಮುದ್ರನ ಒಡಲನ್ನು ತಲುಪುತ್ತದೆ. ಆದರೆ, ಮಳೆ ಕಡಿಮೆಯಾದ ವರ್ಷದಲ್ಲಿ ವಿವಾದ,ಜಗಳ, ರಾಜ್ಯ-ರಾಜ್ಯಗಳ ನಡುವೆ ಸಂಘರ್ಷ, ಬಿಕ್ಕಟ್ಟು ಕಟ್ಟಿಟ್ಟ ಬುತ್ತಿ.
    ಇಡೀ ವಿವಾದದತ್ತ ಒಮ್ಮೆ ಇಣುಕಿ ನೋಡಿದರೆ
    ಕಾವೇರಿ ನದಿ (Cauvery) ನೀರು ಹಂಚಿಕೆ ವಿಚಾರದಲ್ಲಿ ದಶಕಗಳಿಂದ ಬಂದಿರುವ ನ್ಯಾಯತೀರ್ಮಾನಗಳು ಕರ್ನಾಟಕಕ್ಕೆ ನಿರಾಶೆ ತರುತ್ತಲೇ ಇವೆ. ನ್ಯಾಯಾಲಯದಲ್ಲಿ ಕರ್ನಾಟಕದ ಪರವಾಗಿ ಯಾಕೆ ಒಂದೂ ತೀರ್ಪು ಬರಲಿಲ್ಲ ಎಂಬುದು ಜನಸಾಮಾನ್ಯರ ಪ್ರಶ್ನೆಯಾದರೆ,ರಾಜಕೀಯವಾಗಿ ತೀರ್ಮಾನ ಹೊರಬಿದ್ದ ಸಮಯದಲ್ಲೂ ಕರ್ನಾಟಕಕ್ಕೆ ಮಲತಾಯಿ ಧೋರಣೆ ಇದ್ದದ್ದೆ. ಇದಕ್ಕೆ ಪ್ರಮುಖ ಕಾರಣ ಕರ್ನಾಟಕದಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆ.

    ಬ್ರಿಟಿಷರ ಅವಧಿಯಿಂದಲೂ ಇದು ಅನೂಚಾನವಾಗಿ ನಡೆದುಕೊಂಡು ಬಂದಿದೆ. ಅಂದು ಮದ್ರಾಸ್ ಪ್ರೆಸಿಡೆನ್ಸಿಯಲ್ಲಿದ್ದ ಬ್ರಿಟಿಷರ ಮರ್ಜಿಯಲ್ಲಿ ಮೈಸೂರಿನ ಅರಸರ ಆಳ್ವಿಕೆಯಿತ್ತು.ಇದರ ಪರಿಣಾಮ ಮದ್ರಾಸ್ ನಲ್ಲಿನ ಬ್ರಿಟಿಷ್ ವೈಸರಾಯ್ ಗಳು ನದಿ ನೀರಿನ ಹಂಚಿಕೆ ವಿಷಯದಲ್ಲಿ ಪ್ರಭಾವ ಬೀರುತ್ತಿದ್ದರು ಇದಾದ ನಂತರ ಪ್ರಜಾಪ್ರಭುತ್ವ ವ್ಯವಸ್ಥೆ ಅಸ್ತಿತ್ವಕ್ಕೆ ಬಂದರೂ ಸಂಕಷ್ಟ ನಿವಾರಣೆಯಾಗಲಿಲ್ಲ.ದೆಹಲಿಯ ಆಡಳಿತ ಚುಕ್ಕಾಣಿ ಹಿಡಿದವರ ಮೇಲೆ ತಮಿಳುನಾಡಿನ ರಾಜಕೀಯದ ಪ್ರಭಾವ ಹೆಚ್ಚಾಗಿತ್ತು. ಕೇಂದ್ರದ ಅಡಳಿತ ‌ರೂಡ ಸರ್ಕಾರ ಅದು ಕಾಂಗ್ರೆಸ್, ಬಿಜೆಪಿ ಅಥವಾ ತೃತೀಯ ರಂಗವಾಗಿರಲಿ ತಮಿಳು ನಾಡು ಪ್ರಮುಖ ಪಾತ್ರ ನಿರ್ವಹಣೆ ಮಾಡುತಿತ್ತು. ಇದರ ಪರಿಣಾಮವಾಗಿ ಜಲ ವಿವಾದದಲ್ಲಿ ತಮಿಳು ನಾಡಿನ ಪರವಾದ ನಿರ್ಧಾರ ಹೊರ ಬೀಳುತ್ತಿದ್ದವು.

    ರಾಜಕೀಯವಾಗಿ ತಮಿಳು ನಾಡಿನ ಪಕ್ಷಗಳು ಜಿದ್ದಾಜಿದ್ದಿನ ಕಲಹಕ್ಕೆ ಇಡೀ ದೇಶದಲ್ಲಿ ಹೆಸರುವಾಸಿ. ಆದರೆ ಕಾವೇರಿ ನದಿ (Cauvery) ನೀರು ಹಂಚಿಕೆಯಂತಹ ವಿಷಯ ಬಂದಾಗ ರಾಜಕೀಯವನ್ನು ಮೀರಿ ಇಲ್ಲಿನ ಪಕ್ಷಗಳು ಒಗ್ಗಟ್ಟು ಮೆರೆಯುತ್ತವೆ.ರಾಜ್ಯದ ಹಿತಾಸಕ್ತಿಯ ವಿಷಯ ಬಂದಾಗ ರಾಜಕೀಯ ದ್ವೇಷ ಮರೆತು ಒಂದಾಗುತ್ತವೆ ಆದರೆ ಮೊಟ್ಟಮೊದಲ ಬಾರಿಗೆ 2014 ರಿಂದ ಇಲ್ಲಿಯವರೆಗೆ ತಮಿಳುನಾಡಿನ ರಾಜಕೀಯ ಮರ್ಜಿ ಬೇಕಿಲ್ಲದ ಸ್ಪಷ್ಟ ಬಹುಮತದ ಬಿಜೆಪಿ ನೇತೃತ್ವದ ಎನ್.ಡಿ.ಎ.ಸರ್ಕಾರಕ್ಕೆ ಲಭಿಸಿತು. ಕರ್ನಾಟಕದಿಂದ ಅತ್ಯಧಿಕ ಸಂಖ್ಯೆಯ ಬಿಜೆಪಿ ಸಂಸದರು ಆಯ್ಕೆಯಾದರು. ಈ ಹಿನ್ನೆಲೆಯಲ್ಲಿ ಬಿಕ್ಕಟ್ಟಿಗೆ ತಾರ್ಕಿಕ ಅಂತ್ಯ ಸಿಗಲಿದೆ.ರಾಜ್ಯದ ಬಹುದಿನದ ಅನ್ಯಾಯದ ಅಧ್ಯಾಯ ಕೊನೆಯಾಗಲಿದೆ ಎಂದು ಭಾವಿಸಲಾಗಿತ್ತು.ಇದಕ್ಕೆ ಪೂರಕವೆಂಬಂತೆ ನ್ಯಾಯಮಂಡಳಿಯ ಅಂತಿಮ ತೀರ್ಪು ಹಾಗೂ ರಾಜ್ಯದಲ್ಲೂ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿತ್ತು.
    ಆದರೆ ಏನೇ ಅಗಲಿ ಕುಂತಿ ಮಕ್ಕಳಿಗೆ ರಾಜ್ಯದ ಆಡಳಿತ ಸಿಗಲಿಲ್ಲ ಎಂಬ ಲೋಕಾರೂಡಿಯ ನಾಣ್ನುಡಿಯಂತೆ ಕಾವೇರಿ ನದಿ ನೀರಿನ ಹಂಚಿಕೆಯ ವಿಚಾರದಲ್ಲಿ ಕರ್ನಾಟಕದ ಅನ್ಯಾಯದ ಅಧ್ಯಾಯಕ್ಕೆ ತೆರೆ ಬೀಳಲೇ ಇಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಈ ಬಗ್ಗೆ ದೃಢವಾದ ನಿರ್ಧಾರ ತೆಗೆದುಕೊಳ್ಳಲಿಲ್ಲ.ಅತಿ ಹೆಚ್ಚಿನ ಸಂಖ್ಯೆಯ ಸಂಸದರಿದ್ದರೂ ಇವರಾರೂ ಈ ವಿಚಾರವಾಗಿ ಪ್ರಧಾನಿ ಮೋದಿ ಅವರ ಮುಂದೆ ಮಾತನಾಡಲು ಸಾಧ್ಯವಾಗಲಿಲ್ಲ.

    ಕೇಂದ್ರ ಸರ್ಕಾರದ ಈ ಅನಾಧರಣೆ,ರಾಜ್ಯದ ಬಿಜೆಪಿ ಸಂಸದರ ಪುಕ್ಕಲುತನದ ಪರಿಣಾಮವಾಗಿ ಕಾವೇರಿ ವಿವಾದ ಎಂಬ ಕರಾಳ ಅಧ್ಯಾಯಕ್ಕೆ ತೆರೆ‌ ಬೀಳಲಿಲ್ಲ. ಇದರ ಪರಿಣಾಮವಾಗಿ ಬಿಕ್ಕಟ್ಟು ಮುಂದುವರೆದಿದೆ. ಈಗ ಮುಂಗಾರು ನಿರೀಕ್ಷಿತ ಮಟ್ಟದಲ್ಲಿ ಮಳೆ ಸುರಿಸದ ಪರಿಣಾಮ ಕಾವೇರಿ ಮೈದುಂಬಿ ಹರಿಯಲೇ ಇಲ್ಲ. ಇದರಿಂದಾಗಿ ರಾಜ್ಯದ ಜಲಾಶಯಗಳ ಒಡಲು ಬರಿದಾಗಿದೆ.ಅಳಿದುಳಿದ ನೀರು ಬೆಂಗಳೂರು-ಮೈಸೂರು ನಗರವಷ್ಟೇ ಅಲ್ಲದೆ ದೂರದ ತುಮಕೂರಿನ ಶಿರಾ ತಾಲ್ಲೂಕಿನ ಜನರ ಬಾಯಾರಿಕೆ ತಣಿಸಬೇಕಿದೆ.
    ಇಂತಹ ಸಂಕಷ್ಟದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ತಮಿಳುನಾಡಿಗೆ ನೀರು ಬಿಡಬೇಕಾದ ಪರಿಸ್ಥಿತಿ ಬಂದೊದಗಿದೆ. ಅಂತಿಮ ತೀರ್ಪು ಪ್ರಕಟಿಸಿದ ನ್ಯಾಯಮಂಡಳಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಅಧರಿಸಿ,ರಾಜ್ಯಗಳಿಗೆ ನೀರಿನ ಹಂಚಿಕೆ ಮಾಡಿದೆ.ಈ ವೇಳೆ ನ್ಯಾಯಮಂಡಳಿ ಅಂತರ್ಜಲ,ಹಾಗೂ ತಮಿಳುನಾಡಿನಲ್ಲಿ ಸುರಿಯುವ ಹಿಂಗಾರು ಮಳೆಯ ಲೆಕ್ಕಾಚಾರ ಮಾಡಿಲ್ಲ ಎಂಬ ದೊಡ್ಡ ಲೋಪದ ನಡುವೆಯೂ ಮಳೆ ಅಭಾವದ ಸಮಯದಲ್ಲಿ ಬೇಕಾದ ಸಂಕಷ್ಟ ಸೂತ್ರದ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಿಲ್ಲ.

    ಇಂತಹ ಲೋಪದ ನಡುವೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದೆ.ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನೆರೆಯ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಜೊತೆಗಿನ ಮೈತ್ರಿ ಮೇಲೆ ಹೆಚ್ಚು ಅವಲಂಬಿತವಾಗಿದೆ.ಅದೇ ರೀತಿಯಲ್ಲಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತಮಿಳುನಾಡಿನ ಪ್ರಮುಖ ಪ್ರತಿಪಕ್ಷ ಅಣ್ಣಾ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ಇದನ್ನು ಬಹುವಾಗಿ ನೆಚ್ಚಿಕೊಂಡಿದೆ.ಹೀಗಾಗಿ ಸದ್ಯ ಉದ್ಭವಿಸಿರುವ ಪರಿಸ್ಥಿತಿಯಲ್ಲಿ ಯಾವ ರೀತಿಯ ತೀರ್ಮಾನ ಹೊರಬೀಳುತ್ತದೆ. ಇದು ರಾಜ್ಯದ ಅನ್ನದಾತರ ಪಾಲಿಗೆ ಏನಾಗಲಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ.
    ಒಟ್ಟಾರೆಯಾಗಿ ರಾಜಕೀಯ ಚದುರಂಗದಾಟದಲ್ಲಿ ರಾಜ್ಯದ ‌ಜನತೆಗೆ ಸೋಲು‌ ಕಟ್ಟಿಟ್ಟ ಬುತ್ತಿ ಎನ್ನುವುದು ಹಲವಾರು ಉದಾಹರಣೆಗಳಿಂದ ನೋಡಬಹುದು.

    ಕರ್ನಾಟಕದಲ್ಲಿ ಅರವತ್ತರ ದಶಕದಲ್ಲಿ ಕೈಗೊಂಡ ಹಾರಂಗಿ, ಕಬಿನಿ ಮತ್ತು ಹೇಮಾವತಿ ಜಲಾಶಯಗಳ ನಿರ್ಮಾಣದ ಬಗ್ಗೆ ಅಸಮಾಧಾನಗೊಂಡಿದ್ದ ತಮಿಳುನಾಡು ಸರ್ಕಾರವು 1971ರ ಆಗಸ್ಟ್‌ನಲ್ಲಿ ಸುಪ್ರೀಂ ಕೊರ್ಟ್‌ನಲ್ಲಿ ತಕರಾರು ಸಲ್ಲಿಸಿತು
    ಆದರೆ ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವ ದೃಷ್ಟಿಯಿಂದ ಅಂದಿನ ಪ್ರಧಾನ ಮಂತ್ರಿಗಳು ನೀಡಿದ ಭರವಸೆಯನ್ವಯ 1972ರಲ್ಲಿ ತಮಿಳುನಾಡು ಸರ್ಕಾರವು ದಾವೆಯನ್ನು ಹಿಂಪಡೆಯಿತು.
    ಈ ಮಧ್ಯೆ ತಮಿಳುನಾಡಿನ ಕಾವೇರಿ  ನೀರ್ಪಾಸಾನ ವಿಳಯ ಪೊಂಗಲ್’ ಎಂಬ ಸಂಸ್ಥೆಯು 1983ರಲ್ಲಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ,ಕರ್ನಾಟಕ ಈ ಜಲಾಶಯಗಳ ಮೂಲಕ ತನ್ನ ಪಾಲಿನ ನೀರು ಕಬಳಿಸುತ್ತಿದೆ.ಇದರಿಂದ ತಮಿಳುನಾಡು ಬರ ಪೀಡಿತ ರಾಜ್ಯವಾಗಲಿದೆ ಎಂದು ಅಳಲು ತೋಡಿಕೊಂಡಿತು. ಜಲಾನಯನ ಪ್ರದೇಶವನ್ನು ಆಧರಿಸಿ ನೀರು ಹಂಚಿಕೆ ಮಾಡಬೇಕು ಇದಕ್ಕಾಗಿ ನ್ಯಾಯ ಮಂಡಳಿ ರಚಿಸಬೇಕು ಎಂದು ಮನವಿ ಸಲ್ಲಿಸಿತು.ಇಂತಹ ಅರ್ಜಿ ಸಲ್ಲಿಸಿದ ಸಂಸ್ಥೆಯ ಜೊತೆಗೆ ಅಂದಿನ ರಾಜ್ಯ ಸರ್ಕಾರ ತೆರೆಮರೆಯಲ್ಲಿ ಸಹಕಾರ ನೀಡಿದ್ದು ಗುಟ್ಟಾಗೇನೂ ಇರಲಿಲ್ಲ.
    ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯ ಮಂಡಳಿ ರಚನೆಗೆ ಆದೇಶಿಸಿತು.ಅದರಂತೆ 1990ರಲ್ಲಿ ಕಾವೇರಿ ನ್ಯಾಯಮಂಡಳಿ ರಚನೆಯಾಯಿತು. ಈ ನ್ಯಾಯಮಂಡಳಿ ಮುಂದೆ ಕರ್ನಾಟಕ 465 ಟಿ.ಎಂ.ಸಿ, ಕೇರಳ 99.8 ಟಿ.ಎಂ.ಸಿ, ತಮಿಳುನಾಡು 573.5 ಟಿ.ಎಂ.ಸಿ ಮತ್ತು ಪಾಂಡಿಚೇರಿ 9.35 ಟಿ.ಎಂ.ಸಿ ನೀರನ್ನು ತಮಗೆ ಹಂಚಿಕೆ ಮಾಡಬೇಕು ಎಂದು ಮನವಿ ಸಲ್ಲಿಸಿದವು. ಈ ಮೂಲಕ ಒಟ್ಟಾರೆ 1,150 ಟಿ.ಎಂ.ಸಿ ನೀರಿನ ಬೇಡಿಕೆ ಸಲ್ಲಿಸಲಾಯಿತು. ವಿಶೇಷವೆಂದರೆ ಕಾವೇರಿಯಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಸುಮಾರು 740 ರಿಂದ 850 ಟಿ.ಎಂ.ಸಿ.ಮಾತ್ರ ಎಂದು ಅಂದಾಜು ಮಾಡಲಾಗಿದೆ.

    ನೀರು ಹಂಚಿಕೆಯ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಮಂಡಳಿ 25/06/1991
    ರಂದು ಮಧ್ಯಂತರ ಆದೇಶ ನೀಡಿತು. ಇದನ್ನು ಕರ್ನಾಟಕದ ಪಾಲಿಗೆ ಮರಣಶಾಸನವೆಂದು ಬಣ್ಣಿಸಲಾಯಿತು.ಈ ಆದೇಶದ ವಿರುದ್ಧ ಕರ್ನಾಟಕದಲ್ಲಿ ಭುಗಿಲೆದ್ದ ಆಕ್ರೋಶ ಹಲವು ಮನೆ-ಮನಗಳನ್ನು ಸುಟ್ಟು ಧ್ವಂಸ ಮಾಡಿತು.
    ಅಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಸ್.ಬಂಗಾರಪ್ಪ ಕೈಗೊಂಡ ತೀರ್ಮಾನ ಅಂದಿನ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರವನ್ನು ಬೆಚ್ಚುವಂತೆ ಮಾಡಿತು. ಇದು ನಂತರದಲ್ಲಿ ರಾಜ್ಯ ಸರ್ಕಾರದ ಮೇಲಿರುವ ಅಭಿಪ್ರಾಯವನ್ನೇ ಬದಲಾಯಿಸಿತು ಎಂಬ ಆರೋಪಗಳಿವೆ.ಇದು ಅಷ್ಟು ಸುಲಭವಾಗಿ ಒಪ್ಪಬಹುದಾದ ವಿಷಯವಲ್ಲ ಒದೊಂದು ಚರ್ಚಾಸ್ಪದ ವಿಷಯ.ಆದರೆ ಅಂದಿನ ಮುಖ್ಯಮಂತ್ರಿ ತೋರಿದ ಧೋರಣೆ ರಾಜ್ಯದ ಮನೋಬಲ ಹೆಚ್ಚಿಸದ್ದಂತೂ ನಿಜ.
    ಈ ಕುರಿತಂತೆ ನ್ಯಾಯಾಂಗ,ರಾಜಕೀಯ ಹೋರಾಟವೂ ನಡೆಯಿತು. ಅಂತಿಮವಾಗಿ
    ಕಾವೇರಿ ನ್ಯಾಯಮಂಡಳಿ ದಿನಾಂಕ: 05/02/2007 ರಂದು ಅಂತಿಮ ಆದೇಶವನ್ನು ಹೊರಡಿಸಿತು.ಈ ತೀರ್ಪಿನಿಂದ ಕರ್ನಾಟಕಕ್ಕೆ ಸ್ವಲ್ಪ ಅನುಕೂಲ ಮತ್ತು ಅನಾನುಕೂಲವೂ ಆಗಿದೆ. ಅನುಕೂಲವೆಂದರೆ, ನ್ಯಾಯಮಂಡಳಿ ಮಧ್ಯಂತರ ತೀರ್ಪಿನಲ್ಲಿ ಪ್ರತಿ ವರ್ಷ 205 ಟಿ.ಎಂ.ಸಿ ಬಿಡಬೇಕೆಂದು ಆದೇಶಿಸಿರುವುದನ್ನು ಮಾರ್ಪಡಿಸಿ ಅಂತಿಮ ತೀರ್ಪಿನಲ್ಲಿ 192 ಟಿ.ಎಂ.ಸಿ.ಗೆ ಇಳಿಸಿದೆ. ಹಾಗೂ ಮಧ್ಯಂತರ ತೀರ್ಪಿನಲ್ಲಿ ಮಿತಿಗೊಳಿಸಿದ್ದ 11.2 ಲಕ್ಷ ನೀರಾವರಿ ಪ್ರದೇಶವನ್ನು 18.85 ಲಕ್ಷ ಎಕರೆಗಳಿಗೆ ವಿಸ್ತರಿಸಬಹುದಾಗಿದೆ. ಆದರೆ, ಕರ್ನಾಟಕವು ಕೈಗೊಂಡಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ ಈಗ ಹಂಚಿಕೆಯಾಗಿರುವ ನೀರಿನ ಪ್ರಮಾಣ ಸಾಕಾಗುವುದಿಲ್ಲ.

    ರಾಜ್ಯದ ಕಾವೇರಿ ಜಲಾನಯನ ಪ್ರದೇಶದ 27.28 ಲಕ್ಷ ಎಕರೆ ಜಮೀನಿನ ನೀರಾವರಿ ಅಗತ್ಯ 408 ಟಿ.ಎಂಸಿ. ಕುಡಿಯುವ ಉದ್ದೇಶಕ್ಕಾಗಿ ಕಾವೇರಿ ಜಲಾನಯನ ಪ್ರದೇಶದ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಒಟ್ಟು 50ಕ್ಕೂ ಹೆಚ್ಚು ಟಿ.ಎಂ.ಸಿ ನೀರು ಅಗತ್ಯವಿದ್ದರೆ ಮಹಾನಗರ ಬೆಂಗಳೂರಿನ ಅಗತ್ಯ 30 ಟಿ.ಎಂ.ಸಿ.ಗಳಿಗೂ ಅಧಿಕ ಎನ್ನುವ ಲೆಕ್ಕಾಚಾರವಿದೆ.
    ಈ ತೀರ್ಪಿನಲ್ಲಿ ತಮಿಳುನಾಡಿಗೆ ಅನುಕೂಲಕರವಾದ ಹಲವು ಅಂಶಗಳಿವೆ.ಜಲ ಮಾಪನ ಕೇಂದ್ರವನ್ನು ಬಿಳಿಗುಂಡ್ಲುವಿನಲ್ಲಿ ಗುರುತಿಸಲಾಗಿದೆ. ಅಲ್ಲಿಂದ ಮೆಟ್ಟೂರು ನಡುವೆ ಸೇರ್ಪಡೆಯಾದ ನೀರು ಪರಿಗಣಿಸಲಾಗುತ್ತಿಲ್ಲ.ಈ ಪ್ರದೇಶದಲ್ಲಿ ಸುರಿಯುವ ಮಳೆಯ ಪ್ರಮಾಣವನ್ನು ನ್ಯಾಯಮಂಡಳಿ ಪರಿಗಣಿಸಿಲ್ಲ. ಜೊತೆಗೆ ತಮಿಳುನಾಡಿನ ಮುಖಜ ಭೂಮಿ ಪ್ರದೇಶದಲ್ಲಿ ಒದಗುವ ಸುಮಾರು 88 ಟಿ.ಎಂ.ಸಿ ಮತ್ತು ಅಂತರ್ಜಲದ ಸುಮಾರು 30 ಟಿ.ಎಂ.ಸಿಗೂ ಹೆಚ್ಚು ಇರುವ ನೀರಿನ ಪ್ರಮಾಣವನ್ನು ನ್ಯಾಯಮಂಡಳಿ ಪರಿಗಣಿಸಿರುವುದಿಲ್ಲ. ಇದರಿಂದ ತಮಿಳುನಾಡಿಗೆ ಅನುಕೂಲವಾಗಿದೆ.

    ಇಷ್ಟಾದರೂ ತಮಿಳುನಾಡು ಹೆಚ್ಚಿನ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದೆ.ಇದೇ ರೀತಿಯಲ್ಲಿ ಕರ್ನಾಟಕ, ಕೇರಳ ಮತ್ತು ಪಾಂಡಿಚೇರಿ ರಾಜ್ಯಗಳು ಅರ್ಜಿ ಸಲ್ಲಿಸಿದ್ದು,ವಿಚಾರಣೆ ಬಾಕಿ ಇದೆ.
    ಇವೆಲ್ಲವೂ ಸಾಮಾನ್ಯ ಜಲ ವರ್ಷದಲ್ಲಿ ಚರ್ಚೆಗೆ ಬರುವುದಿಲ್ಲ.ಯಾವಾಗ ಮಳೆ ಕಡಿಮೆಯಾಗಿ ನೀರಿನ ಹರಿವು ಇಲ್ಲವಾಗುತ್ತದೆಯೋ ಆಗ ಇವೆಲ್ಲವೂ ಮುನ್ನೆಲೆಗೆ ಬರುತ್ತವೆ.
    ಸಾಮಾನ್ಯ ವರ್ಷಗಳಲ್ಲಿ ಉತ್ತಮ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿ ತಮಿಳುನಾಡಿಗೆ ಸುಮಾರು 200 ಟಿ.ಎಂ.ಸಿ ಗಿಂತಲೂ ಹೆಚ್ಚು ನೀರು ಹರಿದಿದೆ. ಆದರೆ ಸಾಕಷ್ಟು ಮಳೆ ಇಲ್ಲದೆ ಜಲಾಶಯಗಳು ಭರ್ತಿಯಾಗದೆ ನಮ್ಮ ರೈತರೇ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಹೆಚ್ಚು ನೀರು ಬಿಡಲು ಸಾಧ್ಯವಾಗುವುದಿಲ್ಲ. ಆದುದರಿಂದ, ಕಾವೇರಿ ನದಿ ಪ್ರಾಧಿಕಾರವು ಒಂದು ಸಂಕಷ್ಟ ಸೂತ್ರವನ್ನು ರೂಪಿಸಿ ಇಂತಹ ಕಷ್ಟದ ಸಂದರ್ಭದಲ್ಲಿ ನೀರಾವರಿ ಮತ್ತು ಕುಡಿಯುವ ನೀರಿನ     ಹಂಚಿಕೆ ಪ್ರಮಾಣ ನಿಗದಿಮಾಡುವುದು ಅತ್ಯವಶ್ಯಕ.ಇಂತಹ ಸಮಯದಲ್ಲಿ ರಾಜಕೀಯ ಇಚ್ಛಾಶಕ್ತಿಯ ಅಗತ್ಯ ನಿರ್ಮಾಣವಾಗುತ್ತದೆ. ದಿವಂಗತ ಬಂಗಾರಪ್ಪ ನೆನಪಿಗೆ ಬರುತ್ತಾರೆ.

    ಕಾವೇರಿನ ನೀರಿನ ಹಂಚಿಕೆ:(ನ್ಯಾಯ ಮಂಡಳಿ ತೀರ್ಪು)
    2007ರ ಫೆ.5ರಂದು ಕಾವೇರಿ ನ್ಯಾಯಾಧಿಕರಣದ ಅಂತಿಮ ತೀರ್ಪಿನಂತೆ ನೀರು ಹಂಚಿಕೆ ಪ್ರಮಾಣ
    740 ಟಿಎಂಸಿ
    ಕಾವೇರಿಯಲ್ಲಿ ಲಭ್ಯವಾಗುವ ಒಟ್ಟು ನೀರಿನ ಪ್ರಮಾಣ
    – 419 ಟಿಎಂಸಿ
    ತಮಿಳುನಾಡಿನ ಪಾಲು
    – 270 ಟಿಎಂಸಿ
    ಕರ್ನಾಟಕದ ಪಾಲು
    – 30 ಟಿಎಂಸಿ
    ಕೇರಳದ ಪಾಲು
    – 07 ಟಿಎಂಸಿ
    ಪುದುಚೆರಿ ಪಾಲು
    – 10 ಟಿಎಂಸಿ
    ಪರಿಸರ ಸಂರಕ್ಷಣೆಗೆ ಮೀಸಲು
    -04 ಟಿಎಂಸಿ
    ಸಮುದ್ರಕ್ಕೆ ಹರಿದು ಹೋಗುವ ಪ್ರಮಾಣ
    ಬಿಳಿಗುಂಡ್ಲು ಮಾಪನ ಕೇಂದ್ರದಿಂದ ತಮಿಳುನಾಡಿಗೆ ಕರ್ನಾಟದಿಂದ ಬಿಡಿಗಡೆ ಮಾಡುವ ವಾರ್ಷಿಕ ಪ್ರಮಾಣ : 192 ಟಿಎಂಸಿ

    ತಿಂಗಳವಾರು ಬಿಡುಗಡೆ ವಿವರ:
    ಜೂನ್‌ : 10 ಟಿಎಂಸಿ
    ಜುಲೈ : 34 ಟಿಎಂಸಿ
    ಆಗಸ್ಟ್‌ : 50 ಟಿಎಂಸಿ
    ಸೆಪ್ಟೆಂಬರ್‌ : 40 ಟಿಎಂಸಿ
    ಅಕ್ಟೋಬರ್‌ : 22 ಟಿಎಂಸಿ
    ನವೆಂಬರ್‌ : 15 ಟಿಎಂಸಿ
    ಡಿಸೆಂಬರ್‌ : 8 ಟಿಎಂಸಿ
    ಜನವರಿ : 3 ಟಿಎಂಸಿ
    ಫೆಬ್ರವರಿ : 2.5 ಟಿಎಂಸಿ
    ಮಾರ್ಚ್‌ : 2.5 ಟಿಎಂಸಿ
    ಏಪ್ರಿಲ್‌ : 2.5 ಟಿಎಂಸಿ
    ಮೇ : 2.5 ಟಿಎಂಸಿ

    Verbattle
    Verbattle
    Verbattle
    Cauvery cauvery river Government News river ಕಾಂಗ್ರೆಸ್ ಕಾನೂನು Election ತುಮಕೂರು ನ್ಯಾಯ ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    Next Article ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Jamesjaini on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • ThomasZes on ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.