Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದು ಖತರ್ನಾಕ್ ಹನಿಟ್ರ್ಯಾಪ್ ತಂಡ | Honey Trap
    Trending

    ಇದು ಖತರ್ನಾಕ್ ಹನಿಟ್ರ್ಯಾಪ್ ತಂಡ | Honey Trap

    vartha chakraBy vartha chakraDecember 29, 202367 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು, ಡಿ.29- ಉದ್ಯಮಿಗಳು, ಹಣವಂತರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಗೆ ಬೀಳಿಸಿ ಲಕ್ಷಾಂತರ ರೂಪಾಯಿ ದೋಚುತ್ತಿದ್ದ ಖತರ್ನಾಕ್ ತಂಡವನ್ನು ಮೈಸೂರು ಪೊಲೀಸರು ಬಲೆಗೆ ಕೆಡವಿದ್ದಾರೆ.
    ಈ ತಂಡ ಪ್ರವಾಸಕ್ಕೆಂದು ಮೈಸೂರು, ಮಡಿಕೇರಿ, ಚಾಮರಾಜನಗರ ಮತ್ತು ಬೆಂಗಳೂರಿಗೆ ಬರುತ್ತಿದ್ದವರನ್ನೇ ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ (Honey Trap) ವಂಚನೆಯ ಜಾಲ ಬೀಸುತ್ತಿರುವ ಅಂಶ ಬೆಳಕಿಗೆ ಬಂದಿದೆ.
    ಫಜಲುಲ್ಲಾ ರೆಹಮಾನ್, ರಿಜ್ವಾನ್ , ಮೋನಾ ಪೊಲೀಸರು ಬಲೆಗೆ ಬಿದ್ದಿರುವ ಹನಿಟ್ರ್ಯಾಪ್ ಕುಳಗಳು.
    ಇತ್ತೀಚೆಗೆ ಕೇರಳದ ಉದ್ಯಮಿ ಸುನ್ನಿ ಎಂಬುವರನ್ನು ಹನಿಟ್ರ್ಯಾಪ್ ಜಾಲದಲ್ಲಿ ಬೀಳಿಸಿ ಹಣ ಪೀಕಿದ ಈ ತಂಡ ಇದೀಗ ಜೈಲುಪಾಲಾಗಿದ್ದು,ಪೊಲೀಸರ ವಿಚಾರಣೆ ವೇಳೆ ಈ ತಂಡದ ಐನಾತಿ ವಂಚನೆಯ ಪುರಾಣ ಬೆಳಕಿಗೆ ಬರುತ್ತಿವೆ.

    ಚೆನ್ನೈನಿಂದ ಮೈಸೂರು ಮಾರ್ಗವಾಗಿ ಕೇರಳಕ್ಕೆ ಹೋಗುತ್ತಿದ್ದ ಉದ್ಯಮಿ ಸುನ್ನಿ ಎಂಬುವರನ್ನು ಪರಿಚಯ ಮಾಡಿಕೊಂಡು ಹನಿ ಟ್ರ್ಯಾಪ್‌ಗೆ ಬೀಳಿಸಿ 5 ಲಕ್ಷ ರೂ. ದೋಚಿದ ತಂಡವನ್ನು ನಗರ ಪೊಲೀಸರು ಬಲೆಗೆ ಕೆಡವಿದ್ದಾರೆ.
    ಆರೋಪಿ ಮೋನಾ ಈ ಕೃತ್ಯದಲ್ಲಿ ಉದ್ಯಮಿಯನ್ನು ಸೆಳೆಯುವ ಕೆಲಸ ಮಾಡಿದ್ದರೆ, ಫಜಲುಲ್ಲಾ ರೆಹಮಾನ್, ರಿಜ್ವಾನ್ ಉದ್ಯಮಿಯನ್ನು ಬಲೆಗೆ ಕೆಡವಿದ್ದಾರೆ. ಈ ತಂಡ ಹೆದ್ದಾರಿಯಲ್ಲಿ ಹೋಗುವವರನ್ನು ಇದೇ ರೀತಿಯಾಗಿ ಬಲೆಗೆ ಬೀಳಿಸಿಕೊಡು ದೋಚುತ್ತಿದ್ದರು.
    ಕೇರಳದ ತಿರುನೆಲ್ಲಿ ಮೂಲದ ಉದ್ಯಮಿ ಸುನ್ನಿ ಮೈಸೂರಿಗೆ ಬಂದಿದ್ದರು.ಅವರನ್ನು ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿದ ಮೋನಾ ಅತ್ಯಂತ ಸಲುಗೆಯಿಂದ ವರ್ತಿಸತೊಡಗಿದ್ದಾಳೆ.ನಂತರ ಅವರನ್ನು ಪುಸಲಾಯಿಸಿ ಮಾನಂದವಾಡಿಯಲ್ಲಿನ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾಳೆ.

    ಅಲ್ಲಿ ಮೋನಾ ಜತೆ ಸುನ್ನಿ ಖಾಸಗಿ ಕ್ಷಣಗಳನ್ನು ಕಳೆಯಲು ಮುಂದಾಗಿ ನಗ್ನರಾಗಿದ್ದಾರೆ.
    ಈ ವೇಳೆ ತಕ್ಷಣವೇ ಮನೆಯೊಳಗೆ ನುಗ್ಗಿದ ಫಜಲುಲ್ಲಾ ರೆಹಮಾನ್, ರಿಜ್ವಾನ್ ಮಾರಕಾಸ್ತ್ರಗಳನ್ನು ತೋರಿಸಿ ಉದ್ಯಮಿಯನ್ನು ಬೆದರಿಸಿ ಮಹಿಳೆಯ ಜೊತೆ ಅವರನ್ನು ನಗ್ನವಾಗಿ ಮಲಗಿಸಿದ್ದಾರೆ. ಬಳಿಕ ಇದರವಫೋಟೊ ಮತ್ತು ವಿಡಿಯೋಗಳನ್ನು ರೆಕಾರ್ಡ್‌ ಮಾಡಿಕೊಂಡಿದ್ದಾರೆ. ಆನಂತರ ಸುನ್ನಿ ಅವರಿಗೆ ಅವರು ಮೋನಾಳ ಜೊತೆ ನಗ್ನವಾಗಿರುವ ವಿಡಿಯೊ ಮತ್ತು ಫೋಟೊಗಳನ್ನು ತೋರಿಸಿ ಹಣಕ್ಕಾಗಿ ಬ್ಲ್ಯಾಕ್‌ ಮೇಲ್‌ ಮಾಡಿದ್ದಾರೆ.
    ಫೋಟೊ ಮತ್ತು ವಿಡಿಯೊ ತೋರಿಸಿದ ಆರೋಪಿಗಳು ನಮಗೆ 10 ಲಕ್ಷ ರೂ. ಕೊಡಬೇಕು ಇಲ್ಲವಾದರೇ ಈ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ದಾರಿ ಕಾಣದ ಉದ್ಯಮಿ ಸುನ್ನಿ ಅವರು 5 ಲಕ್ಷ ರೂ. ಹಣವನ್ನು ಕೊಟ್ಟಿದ್ದಾರೆ. ಬಳಿಕ ಆರೋಪಿಗಳು ಸುನ್ನಿ ಅವರು ಧರಿಸಿದ್ದ ಚಿನ್ನದ ಉಂಗುರ ಹಾಗೂ ನಗದು ದೋಚಿ ಪರಾರಿ ಆಗಿದ್ದಾರೆ.

    ಇದಾದ ಬಳಿಕ ಸುನ್ನಿ ಅವರು ತಮ್ಮ ಕಾರಿನ ಬಳಿ ಬಂದು ನೇರವಾಗಿ ಕೇರಳದ ತಮ್ಮ ಮನೆಗೆ ಹೋಗಿದ್ದಾರೆ. ಅಲ್ಲಿ ತಿರುನೆಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
    ಪ್ರಕರಣ ದಾಖಲಿಸಿದ ತಿರುನೆಲ್ಲಿ ಪೊಲೀಸರು ಸಂಪೂರ್ಣ ಮಾಹಿತಿ ಪಡೆದು ಪ್ರಕರಣವನ್ನು ಮೈಸೂರು ಗ್ರಾಮಾಂತರ ಠಾಣೆಗೆ ವರ್ಗಾಯಿಸಿದ್ದಾರೆ.
    ಕೂಡಲೇ ಕಾರ್ಯಾಚರಣೆಗೆ ಇಳಿದ ಮೈಸೂರು ಪೊಲೀಸರು ಈ ಮೂವರು ವಂಚಕರನ್ನು ಬಂಧಿಸಿದ್ದಾರೆ.
    ಬಂಧಿತರಿಂದ 50 ಸಾವಿರ ನಗದು ಮತ್ತು ಕೃತ್ಯಕ್ಕೆ ಬಳಸಿದ ಇನೋವಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೇರೆ ದೂರುಗಳು ಬಂದರೆ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಗಳು ಇವೆ.

    Verbattle
    Verbattle
    Verbattle
    crime Honey Trap News Trending Varthachakra ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ನಿಂದ ಲೋಕಸಭಾ ಅಖಾಡಕ್ಕೆ | Loksabha 2024
    Next Article ವೃದ್ಧೆಗೆ ವಂಚಿಸಿದ ರಾಕ್ ಲೈನ್ ವೆಂಕಟೇಶ್ ಪುತ್ರ | Rockline Venkatesh
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dostavka_wuPl on ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ
    • dostavka_swPl on ಭಾರತೀಯ ನೌಕಾಪಡೆ ಗೆ ಭೀಮ ಬಲ
    • dostavka_qgPl on ಎಂ.ಬಿ.ಪಾಟೀಲ್ ಅವರನ್ನು ಗುರಾಯಿಸಿದ ಸುರೇಶ್ | Vidhana Soudha
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.