Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    ರಾಜಕೀಯ

    ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi

    vartha chakraBy vartha chakraMarch 28, 2024Updated:March 28, 202451 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.28- ಯುಗಾದಿ (Ugadi) ಹಬ್ಬ ವರ್ಷದ ಮೊದಲ ಹಬ್ಬ.ಇದನ್ನು ಹಳೆ ಮೈಸೂರು ಪ್ರದೇಶದಲ್ಲಿ ಅತ್ಯಂತ ಅದ್ದೂರಿ ಹಾಗೂ ಸಂಭ್ರಮದಿಂದ ಆಚರಿಸುತ್ತಾರೆ. ಹಬ್ಬದ ಮರುದಿನ ಆಚರಿಸುವ ಹೊಸ ತೊಡಕು ಎಲ್ಲರ ಕೇಂದ್ರ ಬಿಂದು. ಮಾಂಸ ಪ್ರಿಯರು ಯುಗಾದಿಗಿಂತಲೂ ಹೊಸ ತೊಡಕನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಇದಕ್ಕಾಗಿ ತಿಂಗಳಗಳ ಮೊದಲೆ ತಯಾರಿ ಮಾಡುತ್ತಾರೆ.
    ಈ ಅದ್ದೂರಿ ಹಬ್ಬಕ್ಕೆ ಖರ್ಚು ಕೂಡ ಅದ್ದೂರಿಯಾಗೇ ಇರುತ್ತದೆ.ಈ ಹಬ್ಬಕ್ಕೆ ಒಂದೇ ಬಾರಿ ಹಣ ಹೊಂದಿಸಲಾಗದವರು ಚೀಟಿ ಹಾಕಿಕೊಳ್ಳುವ ಪದ್ದತಿ ಕೂಡ ಹಲವೆಡೆ ಚಾಲ್ತಿಯಲ್ಲಿದೆ.

    ಯಾರಾದರೂ ಒಬ್ಬ ವ್ಯಕ್ತಿ ಯುಗಾದಿ ಹಬ್ಬದ ಚೀಟಿ ಆರಂಭಿಸಿದರೆ, ಆಸಕ್ತರು ಇದರ ಸದಸ್ಯರಾಗಿ ಮಾಸಿಕ ವಂತಿಗೆ ನೀಡುತ್ತಾರೆ. ವರ್ಷ ಪೂರ್ತಿ ಇದು ನಡೆಯುತ್ತದೆ.ಹಬ್ಬದ ದಿನ‌ ಸಮೀಪಿಸುತ್ತಿದ್ದಂತೆ ಚೀಟಿ ಕಟ್ಟಿಸಿಕೊಂಡ ವ್ಯಕ್ತಿ ಚಂದಾದಾರರಿಗೆ ಹಬ್ಬದ ಅಡುಗೆಗೆ ಬೇಕಾದ ದಿನಸಿ ಹಾಗೂ ಹಬ್ಬದ ಮರುದಿನ ಮಾಂಸ ನೀಡುತ್ತಾರೆ.
    ಈ‌ ರೀತಿಯಲ್ಲಿ ಯುಗಾದಿ ಹಬ್ಬದ ಚೀಟಿ ಹಾಕಿದ್ದ ಸಾವಿರಾರು ಮಂದಿಗೆ ಉಂಡೆನಾಮ ಹಾಕಿ ವ್ಯಕ್ತಿಯೊಬ್ಬ ರಾತ್ರೋರಾತ್ರಿ ಮನೆ ಖಾಲಿ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬ್ಯಾಟರರಾಯನಪುರದಲ್ಲಿ ನಡೆದಿದೆ.
    ಯುಗಾದಿ ಹಬ್ಬದ ಚೀಟಿ ಹಾಕಿಸಿಕೊಳ್ಳುತ್ತಿದ್ದ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಗಿರಿನಗರದ ಪುಟ್ಟಸ್ವಾಮಿ ಸಾವಿರಾರು ಮಂದಿಯಿಂದ ಹಣ ಕಟ್ಟಿಸಿಕೊಂಡು ವಂಚನೆ ನಡೆಸಿ ಪರಾರಿಯಾಗಿದ್ದು,  ಈ ಸಂಬಂಧ ಬ್ಯಾಟರಾಯನಪುರ ಪೊಲೀಸರಿಗೆ ದೂರು ನೀಡಲಾಗಿದೆ.

    ಒಬ್ಬೊಬ್ಬರ ಬಳಿ 4 ರಿಂದ 5 ಸಾವಿರ ಹಣ ಪಡೆದು ಪುಟ್ಟಸ್ವಾಮಿ ಓಡಿ ಹೋಗಿದ್ದಾನೆ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಮೋಸ ಹೋದ ಸಮಾರು ಐದು ಸಾವಿರಕ್ಕೂ ಅಧಿಕ ಮಂದಿ ಆತನ ಗಿರಿನಗರದ ಮನೆ ಮುಂದೆ ಜಮಾಯಿಸಿದರು
    ಕಳೆದ ಎರಡು ವರ್ಷಗಳಿಂದ ಪುಟ್ಟಸ್ವಾಮಿ ಯುಗಾದಿ ಚೀಟಿ ನಡೆಸುತ್ತಿದ್ದಾರೆ ಎರಡೂ ವರ್ಷವೂ ನಮಗೆ ದಿನಸಿ ಹಾಗೂ ಪ್ರತಿ ಚೀಟಿಗೆ ಐದರಿಂದ ಏಳು ಕಿಲೋ‌ ಮಾಂಸ ಕೊಟ್ಟಿದ್ದರು.ಈ ಬಾರಿಯೂ ಹೀಗೆ ಸಿಗಲಿದೆ ಎಂದು ನಮ್ಮ ಸಂಬಂಧಿಕರೆಲ್ಲರಿಂದ ಚೀಟಿ ಹಾಕಿಸಿದ್ದೆ ಈಗ ಏನೂ ಇಲ್ಲದಂತಾಗಿದೆ.ಹಬ್ಬಕ್ಕೆ ಸಾಮಗ್ರಿ ಹೊಂದಿಸುವುದು ಹೇಗೆ ಎಂದು ಮೋಸ ಹೋದ ಜನ ಗೋಳಾಡುತ್ತಿದ್ದಾರೆ.
    ಸಾವಿರಾರು ಜನ ಪುಟ್ಟಸ್ವಾಮಿ ಮನೆಯ ಮುಂದೆ ಜಮಾಯಿಸಿರುವ ವಿಷಯ ತಿಳಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪುಟ್ಟಸ್ವಾಮಿಗಾಗಿ ಶೋಧ ನಡೆಸಿದ್ದಾರೆ.

    Karnataka News Politics Trending
    Share. Facebook Twitter Pinterest LinkedIn Tumblr Email WhatsApp
    Previous Articleಶಿವರಾಜ್ ಕುಮಾರ್ ಸಿನಿಮಾ ಬ್ಯಾನ್ ಮಾಡಲು ಸಾಧ್ಯವಿಲ್ಲ | Shiva Rajkumar
    Next Article ಮನ್ಸೂರ್ ಗೆದ್ದರೆ ಬೆಂಗಳೂರು ಜನರೇ ಗೆದ್ದಂತೆ | Mansoor Khan
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canada pharmaceutical online ordering on ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    • FobertCaR on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • EdwinSig on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe