Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಚಾರ ನಿಯಮಗಳ ಉಲ್ಲಂಘನೆ – 130 ಕೋಟಿ ದಂಡ ಸಂಗ್ರಹ!
    Bengaluru

    ಸಂಚಾರ ನಿಯಮಗಳ ಉಲ್ಲಂಘನೆ – 130 ಕೋಟಿ ದಂಡ ಸಂಗ್ರಹ!

    vartha chakraBy vartha chakraFebruary 12, 2023Updated:March 20, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.12-

    ಸಂಚಾರ ನಿಯಮಗಳ ಉಲ್ಲಂಘನೆಯ (Traffic rules violation) ದಂಡ ಪಾವತಿಗೆ ರಾಜ್ಯ ಸರ್ಕಾರ ನೀಡಿದ್ದ ಶೇ.50ರ ರಿಯಾಯಿತಿಯ ಸೌಲಭ್ಯ ನಿನ್ನೆ ಅಂತ್ಯಗೊಂಡಿದೆ. ರಾಜ್ಯಾದ್ಯಂತ ಕಳೆದ 9 ದಿನಗಳಲ್ಲಿ 52.49 ಲಕ್ಷಕ್ಕೂ ಹೆಚ್ಚು ಪ್ರಕರಣಗಳಿಂದ ಒಟ್ಟು 130.86 ಕೋಟಿ ರೂಪಾಯಿಗಳಿಗೂ ಹೆಚ್ಚು ಬಾಕಿ ದಂಡ ಸಂಗ್ರಹವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ 9 ದಿನಗಳಲ್ಲಿ 41.20 ಲಕ್ಷ ಪ್ರಕರಣಗಳಿಂದ ಒಟ್ಟು 120.76 ಕೋಟಿ ರೂಪಾಯಿ ದಂಡ ಸಂಗ್ರಹವಾಗಿದೆ.

    ಇದೇ ವೇಳೆ, ಹುಬ್ಬಳ್ಳಿ-ಧಾರವಾಡದಲ್ಲಿ 73.31 ಲಕ್ಷ ದಂಡ ವಸೂಲಿಯಾಗಿದೆ. ಬೆಳಗಾವಿಯಲ್ಲಿ 29,520 ಪ್ರಕರಣಗಳಲ್ಲಿ 57.94 ಲಕ್ಷ ದಂಡ ಪಾವತಿಯಾಗಿದೆ.  ಕೊನೆಯ ದಿನವಾದ ನಿನ್ನೆ ಬೆಂಗಳೂರಿನಲ್ಲಿ 9.45 ಲಕ್ಷ ಪ್ರಕರಣಗಳಿಂದ 31.26 ಕೋಟಿ ರೂಪಾಯಿ ದಂಡ ಸಂಗ್ರಹವಾಗಿದೆ. ಕಳೆದ 9 ದಿನಗಳಲ್ಲಿ ದಿನವೊಂದರಲ್ಲಿ ಸಂಗ್ರಹವಾದ ಅತಿ ಹೆಚ್ಚು ದಂಡದ ಮೊತ್ತ ಇದಾಗಿದೆ. ಇದೇ ವೇಳೆ, ಹುಬ್ಬಳ್ಳಿ-ಧಾರವಾಡ ಕಮಿನಷರೇಟ್‌ (Hubli-Dharwad Commissionerate) ವ್ಯಾಪ್ತಿಯಲ್ಲಿ 25,61,175 ದಂಡ ಸಂಗ್ರಹಿಸಲಾಗಿದೆ.

    ದಂಡ ಪಾವತಿಸಲು ಕೊನೆಯ ದಿನವಾದ ನಿನ್ನೆ ಸಂಚಾರಿ ಪೊಲೀಸ್‌ ಠಾಣೆಗಳ ಮುಂಭಾಗದಲ್ಲಿ ಜನರು ಸರದಿ ಸಾಲಿನಲ್ಲಿ ನಿಂತಿದ್ದು ಕಂಡುಬಂತು. ಸಂಚಾರಿ ಪೊಲೀಸ್‌ ಠಾಣೆಗಳಲ್ಲಿ ದಂಡ ಪಾವತಿಗೆ ಒಂದೆರಡು ಕೌಂಟರ್‌ಗಳನ್ನು ತೆರೆದು ದಂಡದ ಹಣ ಸಂಗ್ರಹಿಸುತ್ತಿದ್ದ ಪೊಲೀಸರು, ಸಾರ್ವಜನಿಕರ ಕ್ಯೂ ಹೆಚ್ಚಾದಂತೆ ಹೆಚ್ಚುವರಿ ಕೌಂಟರ್‌ಗಳನ್ನು ತೆರೆದು ದಂಡ ಪಾವತಿಗೆ ಅವಕಾಶ ಕಲ್ಪಿಸಿದರು.

    ಈ ಮಧ್ಯೆ, ಸರತಿ ಸಾಲಿನಲ್ಲಿ ನಿಂತು ದಂಡ ಪಾವತಿ ಮಾಡುತ್ತಿದ್ದ ಸಾರ್ವಜನಿಕರು, ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿರುವುದು ಒಳ್ಳೆಯದು. ಆದರೆ, ಕಡಿಮೆ ಅವಧಿ ಇರುವುದರಿಂದ ಇನ್ನೂ ಸಾಕಷ್ಟು ಮಂದಿಗೆ ದಂಡ ಪಾವತಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ದಂಡ ಪಾವತಿ ಇರುವ ಕಾಲಾವಧಿಯನ್ನು ಮತ್ತೆ ವಿಸ್ತರಿಸಬೇಕು ಎಂದು ಆಗ್ರಹಿಸಿದರು.

    57 ಕೇಸ್ ಗಳಿಗೆ ದಂಡ:

    ಹುಬ್ಬಳ್ಳಿಯ ವಾಹನ ಸವಾರನೊಬ್ಬ ಬರೋಬ್ಬರಿ 57 ಪ್ರಕರಣಗಳಿಗೆ ದಂಡ ಪಾವತಿಸಿದ್ದಾನೆ. ಹುಬ್ಬಳ್ಳಿ ನಿವಾಸಿ ಸೂರಜ್‌ ಸಿಂಗ್‌ ಠಾಕೂರ್ ಎಂಬ ಯುವಕನ ಬೈಕ್‌ ಮೇಲೆ 57 ಪ್ರಕರಣಗಳು ದಾಖಲಾಗಿದ್ದವು. ದಂಡದ ಮೊತ್ತ 28,500 ರೂ. ಆಗಿತ್ತು. ರಿಯಾಯಿತಿ ಹಿನ್ನೆಲೆಯಲ್ಲಿ ಹಳೆ ಕೋರ್ಟ್ ಸರ್ಕಲ್‌ ಹತ್ತಿರ ಸಂಚಾರಿ ಪೊಲೀಸರ ಬಳಿ 14,250 ರೂ. ದಂಡ ಕಟ್ಡಿದ್ದಾನೆ.

    #bangalore #Hubli 50% rebate dharwad hubli-dharwad m mi rules violation traffic Traffic rules traffic rules violation ಧಾರವಾಡ ನಿಯಮ ಉಲ್ಲಂಘನೆ ಬೈಕ್ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous ArticleRadhantha pressed the emergency button
    Next Article ರಾಜ್ಯಪಾಲರಾಗಿ ನ್ಯಾಯಮೂರ್ತಿ S Abdul Nazeer ನೇಮಕ
    vartha chakra
    • Website

    Related Posts

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    October 4, 2025

    ಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwinSig on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • ElliottAlods on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Lune Finvex Review on ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe