Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂತರಾಜು ವರದಿಗೆ ಲಿಂಗಾಯತರ ವಿರೋಧ | Kantharaj Panel Report
    Viral

    ಕಾಂತರಾಜು ವರದಿಗೆ ಲಿಂಗಾಯತರ ವಿರೋಧ | Kantharaj Panel Report

    vartha chakraBy vartha chakraNovember 9, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.9 : ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ದ ಪಡಿಸಿರುವ ಜಾತಿವಾರು ಜನಗಣತಿ ವರದಿ ಬಿಡುಗಡೆಗೆ ವೇದಿಕೆ ಸಜ್ಜುಗೊಳ್ಳುತ್ತಿರುವ ಬೆನ್ನಲ್ಲೇ, ಅದನ್ನು ವಿರೋಧಿಸುವ ದೊಡ್ಡ ಪಡೆ ಸಿದ್ದಗೊಳ್ಳುತ್ತಿದೆ‌.
    ಕಾಂತರಾಜು ನೇತೃತ್ವದ ಆಯೋಗ ಸಿದ್ಧಪಡಿಸಿರುವ ವರದಿ ಪೂರ್ವಗ್ರಹ ಪೀಡಿತವಾಗಿದೆ‌ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಒಕ್ಕಲಿಗ ಸಂಘ,ಬ್ರಾಹ್ಮಣ ಮಹಾ‌ಸಭಾ ಹೇಳಿರುವ ನಡುವೆಯೇ ಇದೀಗ ವೀರಶೈವ ಮಹಾಸಭಾ ಕೂಡಾ ಇದಕ್ಕೆ ಕೈ‌ ಜೋಡಿಸಿದೆ.
    ಈಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿದ್ದು, ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿಗಣತಿ ನಡೆಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ.
    ಮಹಾಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ಇಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

    ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ. ಹಲವರ ಮನೆಗಳಿಗೆ ಭೇಟಿ ನೀಡದೇ ವರದಿ ಸಿದ್ಧಪಡಿಸಲಾಗಿದೆ ಎಂಬ ದೂರುಗಳಿವೆ. ಈ ಸಮೀಕ್ಷೆಯಲ್ಲಿ ವೀರಶೈವ–ಲಿಂಗಾಯತ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ ಎಂಬ ಮಾಹಿತಿ ಇದೆ. ಅಪೂರ್ಣ ಮಾಹಿತಿಯನ್ನು ಒಳಗೊಂಡ ಸಮೀಕ್ಷೆಯನ್ನು ಸ್ವೀಕರಿಸಿದರೆ, ಸಮಾಜಕ್ಕೆ ದೊಡ್ಡ ಮಟ್ಟದ ನಷ್ಟವಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು ಎಂದು ಶಾಮನೂರು ತಿಳಿಸಿದ್ದಾರೆ.
    ‘ವೀರಶೈವ–ಲಿಂಗಾಯತ ಸಮುದಾಯವು ಸಕಲ ಜಾತಿ–ಜನಾಂಗಗಳಿಗೆ ಲೇಸನ್ನೇ ಬಯಸುವ ಸಮುದಾಯವಾಗಿದೆ. ನಾವು ಜಾತಿಗಣತಿಯ ವಿರೋಧಿಗಳಲ್ಲ. ಆದರೆ, ಯಾವುದೇ ವರದಿಯೂ ವೈಜ್ಞಾನಿಕವಾಗಿರಬೇಕು ಎಂಬುದು ನಮ್ಮ ಒತ್ತಾಯವಾಗಿದೆ’ ಎಂದು ಅವರು ಹೇಳಿದ್ದಾರೆ.
    ಜಾತಿಗಣತಿ ವರದಿಯು ಎಂಟು ವರ್ಷಗಳಷ್ಟು ಹಳೆಯದಾಗಿದ್ದು, ನ್ಯೂನತೆಗಳಿಂದ ಕೂಡಿದೆ. ಹೀಗಾಗಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಬೇಕು. ಸರ್ಕಾರ ಮತ್ತೊಮ್ಮೆ ಈ ಬಗ್ಗೆ ವಿವೇಚನಾಯುತವಾಗಿದೆ ಪರಾಮರ್ಶಿಸಿ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಶಾಮನೂರು ಒತ್ತಾಯಿಸಿದ್ದಾರೆ.

    ವಿರೋಧ ಯಾಕೆ:
    ಈ ಬೆಳವಣಿಗೆಗಳ ನಡುವೆ ಪ್ರತಿಕ್ರಿಯಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಎಚ್‌.ಕಾಂತರಾಜು ವರದಿ ಜಾತಿ ಗಣತಿ ಅಲ್ಲವೇ ಅಲ್ಲ. ಇದು ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿ ಸರಿಪಡಿಸುವ ಹಿನ್ನೆಲೆಯಲ್ಲಿ ತಯಾರಾದ ವರದಿ ಇದಕ್ಕೆ ವಿರೋಧ ಯಾಕೆ ಎಂದು ಪ್ರಶ್ನಿಸಿದರು.
    ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ. ಈ ವರದಿಯನ್ನು ಜಾತಿ ಗಣತಿ ವರದಿ ಎಂದು ಕರೆಯುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.
    ಈ ವರದಿಯಿಂದ ಪ್ರತಿಯೊಂದು ಸಮಾಜದ ಜನಸಂಖ್ಯೆ, ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದ ಅಂಕಿ–ಅಂಶವನ್ನು ಸ್ಪಷ್ಟವಾಗಿ ತಿಳಿಯಬಹುದು. ಈ ವರದಿ ವಿರೋಧಿಸಿ ಕೆಲವು ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ ಇನ್ನು ಸರ್ಕಾರಕ್ಕೆ ಸಲ್ಲಿಕೆಯೇ ಆಗಿಲ್ಲ. ವರದಿ ಸ್ವೀಕಾರ ಮಾಡಿದರೆ ಅದನ್ನು ಪಡೆದು ಅಧ್ಯಯನ ಮಾಡುತ್ತೇನೆ. ವರದಿ ವಿರೋಧ ಮಾಡುತ್ತಿರುವವರೂ ವರದಿ ನೋಡಿದ್ದರೆ ನಮಗೆ ತಿಳಿಸಲಿ. ನಿರ್ಮಲಾನಂದನಾಥ ಸ್ವಾಮೀಜಿ ಅವರಲ್ಲೂ ಮನವಿ ಮಾಡಿಕೊಳ್ಳುತ್ತೇನೆ ಎಂದರು.
    ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ವರದಿ ಸಿದ್ಧವಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ವರದಿ ಸ್ವೀಕಾರವಾಗಿಲ್ಲ. ಇದರಲ್ಲಿ ರಾಜಕೀಯ ಹಿತಾಸಕ್ತಿ ಅಡಗಿಲ್ಲ ಎಂದು ತಂಗಡಗಿ ಹೇಳಿದರು.

    Verbattle
    Verbattle
    Verbattle
    BJP Congress Government Karnataka News Politics Report Trending ಕಾಂಗ್ರೆಸ್ ತಂತ್ರಜ್ಞಾನ ನ್ಯಾಯ ರಾಜಕೀಯ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಬೋರ್ ವೆಲ್ ಗಳಿಗೆ ಕಡಿವಾಣ | Bengaluru
    Next Article ವಿದ್ಯುತ್ ಕ್ಷಾಮ ನಿವಾರಣೆಗೆ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    1 Comment

    1. Fcscxq on February 13, 2026 6:23 am

      mgm bet online betmgm-play mgm bet

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • DeandrekAlty on ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    • Qsgxyl on ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.