Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲೂ ಗೆಲ್ಲುತ್ತಾರಂತೆ | Lok Sabha 2024
    Trending

    ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲೂ ಗೆಲ್ಲುತ್ತಾರಂತೆ | Lok Sabha 2024

    vartha chakraBy vartha chakraNovember 15, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha 2024) ರಾಜ್ಯದಲ್ಲಿ ಅತ್ಯಧಿಕ ಸ್ಥಾನ ಗೆಲ್ಲುವ ಸಂಕಲ್ಪದೊಂದಿಗೆ ಬಿಜೆಪಿಯ ನೂತನ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು.
    ಪಕ್ಷದ ಕಚೇರಿಯಲ್ಲಿ ನಡೆದ ಅನೇಕ ಧಾರ್ಮಿಕ ವಿಧಿ ವಿಧಾನಗಳು ನಂತರ ನಿರ್ಗಮಿತ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ ಅಧಿಕಾರ ಸ್ವೀಕರಿಸಿದರು. ಈ‌ ಸಮಾರಂಭಕ್ಕೆಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಸಂಸದ ತೇಜಸ್ವಿ ಸೂರ್ಯ, ಬಿ.ವೈ. ರಾಘವೇಂದ್ರ, ಲೆಹರ್‌ಸಿಂಗ್, ಗೋವಿಂದ ಕಾರಜೋಳ, ಹಲವು ಹಿರಿಯ ನಾಯಕರು ಸಾಕ್ಷಿಯಾದರು. ವಿಜಯೇಂದ್ರ ಅವರ ಪದಗ್ರಹಣ ಸಂದರ್ಭದಲ್ಲಿ ಹೊಸ ಹುರುಪು,ಉತ್ಸಾಹ ಮನೆ ಮಾಡಿತ್ತು. ಈ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಕಾರ್ಯಕರ್ತರ ಉತ್ಸಾಹ ಮುಗಿಲು ಮುಟ್ಟಿತ್ತು.

    ಅಧಿಕಾರ ಸ್ವೀಕಾರದ ಬಳಿಕ ಮಾತನಾಡಿದ ವಿಜಯೇಂದ್ರ, ಮುಂಬರುವ ಲೋಕಸಭಾ ಚುನಾಣವೆ ಅಗ್ನಿಪರೀಕ್ಷೆಯಾಗಿದ್ದು, 28 ಕ್ಕೆ 28 ಕ್ಷೇತ್ರಗಳನ್ನೂ ಗೆದ್ದು, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದು ನಮ್ಮೆಲ್ಲರ ಗುರಿ. ಇದಕ್ಕಾಗಿ ಎಲ್ಲರೂ ಒಗ್ಗೂಡಿಯೇ ಕೆಲಸ ಮಾಡುವ ಸಂಕಲ್ಪ ಮಾಡುತ್ತೇವೆ ಎಂದರು.
    ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ‌ಕಳೆದ ಲೋಕಸಭಾ ಚುನಾವಣೆ ವೇಳೆ ಅಂದಿನ ಪಕ್ಷದ ಅಧ್ಯಕ್ಷರಾಗಿದ್ದ ಯಡಿಯೂರಪ್ಪ ಅವರು 20 ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದಾಗ ಹಲವರು ಹಾಸ್ಯ ಮಾಡಿದ್ದರು. ಒಗ್ಗಟ್ಟಿನಿಂದ ಹೋರಾಟ ನಡೆಸಿ 25 ಸ್ಥಾನಗಳನ್ನು ಪಕ್ಷ ಗೆದ್ದುಕೊಂಡಿತ್ತು. ದೇಶಕ್ಕಾಗಿ 1 ದಿನವೂ ರಜೆ ತೆಗೆದುಕೊಳ್ಳದೇ ಹಗಲಿರುಳೆನ್ನದೇ ಕೆಲಸ ಮಾಡುವ, ದೇಶವನ್ನು ಅಗ್ರಪಂಕ್ತಿ ರಾಷ್ಟ್ರಗಳ ಸಾಲಿಗೆ ತಂದು ನಿಲ್ಲಿಸುವ ಮೋದಿಯವರ ಕನಸು ನನಸು ಮಾಡಲು ನಾವೆಲ್ಲ ಹಗಲಿರುಳೆನ್ನೇ ಶ್ರಮಿಸಬೇಕಾಗಿದೆ ಎಂದು ಹೇಳಿದರು.
    ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆ ಆಗಿದೆ. ಆ ಸೋಲಿ ಕಹಿಯನ್ನು ಮೆಟ್ಟಿ ಮುನ್ನಡೆಯಬೇಕು. ಅಧ್ಯಕ್ಷ ಸ್ಥಾನದ ಮಹತ್ವ ಮತ್ತು ಗೌರವ ಏನು ಎಂಬುದು ಗೊತ್ತಿದೆ. ದಶಕಗಳ ಕಾಲ ಕಾರ್ಯಕರ್ತರ ಬೆವರು ಮತ್ತು ಶ್ರಮದಿಂದ ಈ ಮಟ್ಟಕ್ಕೆ ಬೆಳೆದಿದೆ. ಹೀಗಾಗಿ ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರು ತಲೆ ತಗ್ಗಿಸುವ ಕೆಲಸ ಮಾಡುವುದಿಲ್ಲ.

    ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದು ತಿಳಿಸಿದರು.
    ರಾಜ್ಯದಲ್ಲಿ ಬರ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ್‍ಯಾರು ಬರ ಪ್ರದೇಶಗಳಲ್ಲಿ ಪ್ರವಾಸ ಮಾಡುತ್ತಿಲ್ಲ. ಬರಪೀಡಿತ ಸ್ಥಳಗಳಿಗೆ ತೆರಳಿ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ದರ್ಪದಿಂದ ಮೆರೆಯುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದರು.
    ಮುಂದೆ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆಗಳಿವೆ. ಅದನ್ನು ನಾವೆಲ್ಲ ಗಂಭೀರವಾಗಿ ಪರಿಗಣಿಸಿದ್ದೇವೆ. ಜತೆಗೆ ಲೋಕಸಭಾ ಚುನಾವಣೆಯಲ್ಲೂ 28 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಕೆಲಸ ಮಾಡುವ ಸಂಕಲ್ಪ ತಮ್ಮದು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳಾಗಿದೆ. ಹಗಲು ದರೋಡೆ, ಭ್ರಷ್ಟಾಚಾರ ಮಿತಿ ಮೀರಿದೆ ಎಂದು ದೂರಿದರು.
    ಬಿಜೆಪಿ ಅಧಿಕಾರಿದಲ್ಲಿದ್ದಾಗ ಶೇ.40ರಷ್ಟು ಕಮಿಷನ್ ಸರ್ಕಾರ ಎಂದು ಟೀಕಿಸಿದ್ದ ಕಾಂಗ್ರೆಸ್‌ನವರು ಶೇ. 40 ರ ಕಮಿಷನ್ ಆರೋಪವನ್ನು ಅನುಷ್ಠಾನ ಮಾಡುತ್ತಿದ್ದಾರೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    lok sabha lok sabha 2024 ಈಶ್ವರಪ್ಪ ಕಾಂಗ್ರೆಸ್ Election ತೇಜಸ್ವಿ ಸೂರ್ಯ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಬಿಗ್ ಬಾಸ್ ಸೆಟ್ ನಲ್ಲಿ ಪೊಲೀಸ್ ವಿಚಾರಣೆ | Bigg Boss Kannada
    Next Article ವಿದ್ಯುತ್ ಕಳ್ಳತನ ಆರೋಪ: ಕುಮಾರಸ್ವಾಮಿಗೆ 68 ಸಾವಿರ ದಂಡ | HD Kumaraswamy
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • australia cheap tobacco on ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    • manchester cigarettes on ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
    • ZThomasAlkargo on ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe