Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಸ್ತಿಪಂಜರ ರಹಸ್ಯ ಏನು? | Skeleton
    ಸುದ್ದಿ

    ಅಸ್ತಿಪಂಜರ ರಹಸ್ಯ ಏನು? | Skeleton

    vartha chakraBy vartha chakraJanuary 8, 202413 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ, ಜ.8- ಚಿತ್ರದುರ್ಗದ ಜೈಲು ರಸ್ತೆಯಲ್ಲಿನ ಪಾಳುಬಿದ್ದ ಮನೆಯಲ್ಲಿ ಪತ್ತೆಯಾಗಿದ್ದ ಐವರ ಅಸ್ಥಿಪಂಜರಗಳ (Skeleton) ಮರಣೋತ್ತರ ಪರೀಕ್ಷೆಯ ವರದಿ ಹೊರಬಿದ್ದಿದೆ. ಆದರೆ ಸಾವಿಗೆ ನಿಜವಾದ ಕಾರಣ ಪತ್ತೆಯಾಗಿಲ್ಲ. ಐವರು
    ಕೊಲೆಯಾಗಿದ್ದಾರೋ? ಆತ್ಮಹತ್ಯೆ ಮಾಡಿಕೊಂಡಿದ್ದಾರೋ ? ಎಂಬ ಅನುಮಾನಕ್ಕೆ ತೆರೆಬಿದ್ದಿಲ್ಲದಿರುವುದು ಕುತೂಹಲ ಕೆರಳಿಸಿದೆ.
    ಡಿಸೆಂಬರ್ 28 ರಂದು ಜಗನ್ನಾಥರೆಡ್ಡಿ ಅವರ ಪಾಳುಬಿದ್ದ ಮನೆಯಲ್ಲಿ ಪತ್ತೆಯಾಗಿದ್ದ ಐವರ ಅಸ್ಥಿಪಂಜರಗಳಿಂದಾಗಿ ಈ ಪ್ರಕರಣದ ಸುತ್ತ ಹಲವು ಅನುಮಾನಗಳ ಹುತ್ತ ಬೆಳೆದಿತ್ತು.

    ಮರಣೋತ್ತರ ಪರೀಕ್ಷಾ ವರದಿಯಿಂದ ಸತ್ಯಾಂಶ ಹೊರಬೀಳುವ ಭರವಸೆ ಪೊಲೀಸರಲಿದ್ದು ಅದು ಹುಸಿಯಾಗಿದೆ.
    ಅಸ್ತಿ ಪಂಜರಗಳ (Skeleton) ಮರಣೋತ್ತರ ಪರೀಕ್ಷೆ ನಡೆಸಿದ್ದ ಜಿಲ್ಲಾಸ್ಪತ್ರೆಯ ತಜ್ಞ ವೈದ್ಯ ವೇಣು ಅವರು ನ ವರದಿಯನ್ನು, ಬಡಾವಣೆ ಠಾಣೆ ಇನ್ಸ್ ಪೆಕ್ಟರ್ ನಯೂಮ್ ಅವರಿಗೆ ಹಸ್ತಾಂತರಿಸಿದ್ದಾರೆ‌. ಆದರೆ ಆ ವರದಿಯಲ್ಲಿ ಘಟನೆಗೆ ಸಂಬಂಧಿಸಿದಂತೆ ಯಾವುದೇ ಸುಳಿವು ಸಿಕ್ಕಿಲ್ಲ. ವರದಿಯಲ್ಲಿ ಕೇವಲ ಎಫ್ ಎಸ್ ಎಲ್  ವರದಿ ಬಾಕಿ ಇದೆ ಎಂದಷ್ಟೇ ಉಲ್ಲೇಖವಾಗಿದೆ. ಹೀಗಾಗಿ ಇದು ಕೊಲೆಯೋ? ಆತ್ಮಹತ್ಯೆಯೋ? ಎಂಬ ಶಂಕೆಗೆ ತೆರೆ ಎಳೆಯಲಾಗದೇ ಪೊಲೀಸರು ಮತ್ತೆ ಗೊಂದಲಕ್ಕೀಡಾಗಿದ್ದಾರೆ.
    ಇದು ವಿಷ ಸೇವಿಸಿ ಇಲ್ಲವೇ ಸಯನೈಡ್ ಸೇವಿಸಿ ಮಾಡಿಕೊಂಡ ಆತ್ಮಹತ್ಯೆ? ಅಥವಾ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಎನ್ನುವ ಬಗ್ಗೆ ಅನುಮಾನಗಳು ಮೂಡಿದ್ದು, ಪೊಲೀಸರು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ.

    ಡೆತ್‍ನೋಟ್‍ನಲ್ಲೇನಿದೆ ನಗರದ ಚಳ್ಳಕೆರೆ ಟೋಲ್ ಗೇಟ್ ಬಳಿಯ ಮನೆಯಲ್ಲಿ ಜಗನ್ನಾಥ್ ಪತ್ನಿ ಪ್ರೇಮಕ್ಕ ಮಕ್ಕಳಾದ ಕೃಷ್ಣರೆಡ್ಡಿ, ನರೇಂದ್ರ, ತ್ರಿವೇಣಿ ವಾಸವಾಗಿದ್ದರು. ಆದ್ರೆ ಹಲವು ವರ್ಷಗಳಿಂದ ಅವರ ಸಂಬಂಧಿಗಳು, ಸ್ನೇಹಿತರು ಹಾಗೂ ಅಕ್ಕಪಕ್ಕದ ನಿವಾಸಿಗಳ ಸಂಪರ್ಕಕ್ಕೂ ಕುಟುಂಬಸ್ಥರು ಬಂದಿರಲಿಲ್ಲ. ದೂರದ ಊರಲ್ಲಿ ಅನಾಥಾಶ್ರಮದಲ್ಲಿ ನೆಲೆಸಿರಬಹುದು ಎಂದು ಎಲ್ಲರೂ ಭಾವಿಸಿದ್ದರು. ಅಲ್ಲದೇ ಜಗನ್ನಾಥ್ ರೆಡ್ಡಿಯ ಮೂವರು ಮಕ್ಕಳಿಗೂ ವಿವಾಹವಾಗಿರಲಿಲ್ಲ.
    ಮೊದಲ ಮಗ ಕೃಷ್ಣರೆಡ್ಡಿ ನಿರುದ್ಯೋಗಿಯಾಗಿದ್ದು, ಮತ್ತೋರ್ವ ನರೇಂದ್ರರೆಡ್ಡಿ 2013ರಲ್ಲಿ ಬೆಂಗಳೂರಿನ ಬಿಡದಿಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಬಿಟ್ಟು ದರೋಡೆ ಕೇಸ್‌ನಲ್ಲಿ ಕೆಲದಿನ ಜೈಲು ಶಿಕ್ಷೆಗೆ ಗುರಿಯಾದರು. ಹಾಗೆಯೇ ಇದ್ದ ಓರ್ವ ಪುತ್ರಿಯಾದ ತ್ರಿವೇಣಿ ಬೋನ್ ಮ್ಯಾರೊ ಎಂಬ ಮೂಳೆ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇವರ ಹಿರಿಯ ಮಗ ಮಂಜುನಾಥ ರೆಡ್ಡಿ ಕೇರಳದಲ್ಲಿ ಸಾವನ್ನಪ್ಪಿದ್ದರು. ಹೀಗಾಗಿ ಇಡೀ ಕುಟುಂಬ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಕಳೆದ 8 ವರ್ಷಗಳಿಂದ ಯಾರ ಸಂಪರ್ಕದಲ್ಲಿರಲಿಲ್ಲ ಎಂದು ಜಗನ್ನಾಥ್ ಪತ್ನಿಯಾದ ಪ್ರೇಮಕ್ಕ ಅವರ ಸಹೋದರಿ ಲಲಿತಮ್ಮ ತಿಳಿಸಿದ್ದರು.

    Verbattle
    Verbattle
    Verbattle
    crime Government Karnataka News Politics ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿ ಮೂದಲಿಸಿದವರು ಮಾಲ್ಡೀವ್ಸ್ ಸರ್ಕಾರದಿಂದ ಹೊರಕ್ಕೆ | Maldives
    Next Article ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ಗೆ ಪೊಲೀಸ್ ನೋಟೀಸ್ | Darshan
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • alpha66_pvKr on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Tdrspf on ಸಿಟಿ ರವಿಯ ಕೊಳಕು ತೊಳೆಯಲು ಸಾಧ್ಯವಿಲ್ಲವಂತೆ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.