Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾರಿಗೇಳೋಣಾ ನಮ್ಮ Problem | KPCC
    Trending

    ಯಾರಿಗೇಳೋಣಾ ನಮ್ಮ Problem | KPCC

    vartha chakraBy vartha chakraAugust 17, 202328 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.30- ಬಹಳ ದಿನಗಳ ನಂತರ ಅಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್‍ನಲ್ಲಿ ಹಲವಾರು ಹಪಾಹಪಿಗಳು ಕೇಳಿಬರುತ್ತಿದ್ದು, ಕಾರ್ಯಕರ್ತರ ಧಾವಂತ ಹಾಗೂ ಒತ್ತಡಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿರಿವುದು ಚಡಪಡಿಕೆಗೆ ಕಾರಣವಾಗಿದೆ.
    ಸರ್ಕಾರ ರಚನೆಯಾಗಿ ನೂರು ದಿನಗಳು ಸಮೀಪಿಸಿವೆ. ಶತ ದಿನೋತ್ಸವ ಆಚರಣೆಗೆ ಮುಖ್ಯಮಂತ್ರಿ ಗಳ ಆಪ್ತ ವಲಯ ಸಿದ್ದತೆ ನಡೆಸಿದೆ.ಸರ್ಕಾರದ ಮಟ್ಟದಲ್ಲಿ ಸಂಭ್ರಮಾಚರಣೆಗೆ ತಯಾರಿಗಳು ನಡೆದಿವೆ.ಆದರೆ ಮುಖ್ಯಮಂತ್ರಿ ಆಪ್ತ ವಲಯ ಹೊರತುಪಡಿಸಿ ಉಳಿದ ಕಾರ್ಯಕರ್ತರ ವಲಯದಲ್ಲಿ ಇಂತಹ ಸಂಭ್ರಮ ಕಾಣುತ್ತಿಲ್ಲ. ಇದಕ್ಕೆ ಕಾರಣ ಮುಖ್ಯಮಂತ್ರಿ ಎಂಬ ಆರೋಪ ಕೇಳಿಬಂದಿದೆ.

    ಸುಮಾರು 5 ವರ್ಷಗಳ ಬಳಿಕ ಅಧಿಕಾರದ ಅಂಗಳಕ್ಕೆ ಕಾಲಿಟ್ಟ ಕಾಂಗ್ರೆಸಿಗರಲ್ಲಿ ಹಲವಾರು ನಿರೀಕ್ಷೆಗಳಿದ್ದವು. ಆದರೆ ಅವುಗಳಿಗೆ ಸರಿಯಾದ ಸ್ಪಂದನೆ ದೊರೆಯುತ್ತಿಲ್ಲ.‌ಕೆಪಿಸಿಸಿ (KPCC) ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಶಿವಕುಮಾರ್ ಅವರಲ್ಲಿ ಕಾರ್ಯಕರ್ತರು ತಮ್ಮ ಕಷ್ಟ ಸುಖ ಹೇಳಿಕೊಳ್ಳಬಹುದಾಗಿದೆ.ಅವರು ತಮ್ಮ ಮಿತಿಯಲ್ಲಿ ಇವುಗಳಿಗೆ ಸ್ಪಂದಿಸುತ್ತಾರೆ.ಆದರೆ,ಬಹುತೇಕ ಸಮಸ್ಯೆಗಳಿಗೆ ಮುಖ್ಯಮಂತ್ರಿ ಮಟ್ಟದಲ್ಲಿ ಪರಿಹಾರ ಸಿಗಬೇಕಾಗುತ್ತದೆ.ಹೀಗಾಗಿ ಮುಖ್ಯಮಂತ್ರಿಗಳ ಬಳಿ ಅಹವಾಲು ಹೇಳಿಕೊಳ್ಳುವ ಅವಕಾಶವೇ ಇಲ್ಲ ಎಂದು ಕಾರ್ಯಕರ್ತರು ಬೇಸರ ಹೊರ ಹಾಕುತ್ತಿದ್ದಾರೆ.

    ಮುಖ್ಯಮಂತ್ರಿಗಳು ತಮ್ಮನ್ನು ಸುತ್ತುವರೆದಿರುವ ಕೆಲವೇ ಕೆಲವು ಜನರಿಗೆ ಮಾತ್ರ ಲಬ್ಯವಾಗುತ್ತಾರೆ. ಉಳಿದ ಕಾರ್ಯಕರ್ತರು ಮುಖ್ಯಮಂತ್ರಿಗಳನ್ನು ತಲುಪಲು ಇವರನ್ನು ಅವಲಂಬಿಸುವ ಪರಿಸ್ಥಿತಿ ಉಂಟಾಗಿದೆ. ದೇವರನ್ನು ಒಲಿಸಿಕೊಳ್ಳಲು ಪೂಜಾರಿ ಬೇಕಾದಂತೆ ಮುಖ್ಯಮಂತ್ರಿಗಳನ್ನು ತಲುಪಲು ಅವರ ಆಪ್ತೇಷ್ಡರನ್ನು ಅವಲಂಬಿಸಬೇಕಾಗಿದೆ ಎಂದು ಬಹುತೇಕ ಕಾರ್ಯಕರ್ತರು ಅಳಲು ತೋಡಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಮುಖ್ಯಮಂತ್ರಿಗಳ ಆಪ್ತ ವಲಯದಲ್ಲಿ ಗುರುತಿಸಲ್ಪಡುವ ಪ್ರಕಾಶ್ ರಾಥೋಡ್,ಪಿ.ಎಂ.ಅಶೋಕ್ ಅವರಿಗೆ ಕ್ಯಾಬಿನೆಟ್ ಮಂತ್ರಿ ದರ್ಜೆಯ ಸ್ಥಾನಮಾನದೊಂದಿಗೆ ಪರಿಷತ್ ಮತ್ತು ವಿಧಾನಸಭೆಯ ಸಚೇತಕ ಹುದ್ದೆ ನೀಡಲಾಗಿದೆ.ನಸೀರ್ ಅಹಮದ್ ಮತ್ತು ಪಿ.ಗೋವಿಂದ ರಾಜು ಅವರನ್ನು ಸಂಪುಟ ದರ್ಜೆಯ‌ ಸಚಿವ ಸ್ಥಾನದೊಂದಿಗೆ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ.ಇವರನ್ನು ಹೊರತುಪಡಿಸಿ ಬೇರೆ ಯಾರೂ ಇವರಿಗೆ ಕಾಣ ಸಿಗಲಿಲ್ಲವೇ ಎಂದು ಪ್ರಶ್ನಿಸುತ್ತಿರುವುದಾಗಿ ಗೊತ್ತಾಗಿದೆ.

    ಈ ಎಲ್ಲಾ ಅಳಲನ್ನು ಉಪ ಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ ಕೇಳಿಸಿಕೊಳ್ಳುತ್ತಾರೆ ಎಂಬ ಸಮಾಧಾನ ಬಿಟ್ಟರೆ ಬೇರೆ ಎನೂ ಇಲ್ಲ.ಇದು‌ ಒಂದು ಕಡೆಯಾದರೆ, ಮುಖ್ಯಮಂತ್ರಿ ಆಪ್ತರೆನ್ನಲಾದ ಸಚಿವರ ಕತೆಯೂ ಇದಕ್ಕಿಂತ ಹೊರತಾಗಿಲ್ಲ ಎಂಬ ಅಪಸ್ವರ ಕೇಳಿಬಂದಿದೆ ಸಚಿವರಿಗೆ ಜನಸಾಮಾನ್ಯರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಲು ಸಮಯ ಸಾಲುತ್ತಿಲ್ಲ. ಪ್ರತಿಯೊಬ್ಬರೂ ಕೂಡ ಸಚಿವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಎಂದು ಬಯಸುತ್ತಾರೆ. ಆದರೆ ಅಷ್ಟೂ ಜನರಿಗೆ ಸಮಯ ನೀಡಲು ಸಾಧ್ಯವಾಗದೆ ಸಚಿವರು ಕೆಲವು ಪ್ರಮುಖರನ್ನಷ್ಟೇ ಮಾತನಾಡಿಸಿ ಉಳಿದವರನ್ನು ಕಡೆಗಣಿಸುತ್ತಿದ್ದಾರೆ ಎಂಬ ಆಕ್ಷೇಪಗಳಿವೆ.
    ಪ್ರಮುಖರ ಜೊತೆಗಿನ ಸಮಾಲೋಚನೆ ವೇಳಯಲ್ಲೂ ನಿರೀಕ್ಷಿತ ಮಟ್ಟದಲ್ಲಿ ಕೆಲಸಗಳಾಗುತ್ತಿಲ್ಲ ಎಂಬ ಅಸಮಾಧಾನಗಳಿವೆ. ಇನ್ನು ಜನಸಾಮಾನ್ಯರ ಪಾಡಂತೂ ಹೇಳತೀರದಾಗಿದ್ದು, ಕನಿಷ್ಟ ಭೇಟಿ ಮಾಡಲೂ ಕೂಡ ಸಚಿವರು ಅಲಭ್ಯವಾಗುತ್ತಿದ್ದಾರೆ.
    ಭಾರೀ ನಿರೀಕ್ಷೆಗಳೊಂದಿಗೆ ಅಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪಂಚಖಾತ್ರಿಗಳ ಯಶಸ್ವಿ ಜಾರಿಯ ಹುಮ್ಮಸ್ಸಿನಲ್ಲೇ ಕಾಲಾಹರಣ ಮಾಡುತ್ತಿದೆ ಎಂಬ ಕೊರಗು ಕಾಂಗ್ರೆಸ್ ಕಾರ್ಯಕರ್ತರ ಪಾಳಯದಲ್ಲಿ ದೊಡ್ಡದಾಗುತ್ತಾ ಸಾಗಿದೆ.

    Verbattle
    Verbattle
    Verbattle
    Congress Karnataka Karnataka Congress KPCC m siddu ಕಾಂಗ್ರೆಸ್ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಮಲಿಂಗಾರೆಡ್ಡಿ ಅವರಿಗೆ ಕೋಪ ಬಂದಿದೆ | Ramalinga Reddy
    Next Article ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ಲೋಕಾಯುಕ್ತ | Lokayukta
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fmbpxt on ಬರ ಪರಿಹಾರಕ್ಕೆ ನೆರವು ಕೊಡಿ- ಕೇಂದ್ರಕ್ಕೆ ರಾಜ್ಯದ ಮೊರೆ | Drought
    • Lthxgx on ವಿನಾಶಕಾರಿ ಭೂಕುಸಿತದ ಹಿನ್ನೆಲೆಯಲ್ಲಿ ಭಾರತವು ಪಪುವಾ ನ್ಯೂಗಿನಿಯಾಕ್ಕೆ US $ 1 ಮಿಲಿಯನ್ ಮೌಲ್ಯದ ತಕ್ಷಣದ ಪರಿಹಾರ ಸಹಾಯವನ್ನು ಘೋಷಿಸಿದೆ
    • 1win_zcSi on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.