Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆಗೆ ನುಗ್ಗಿದ ಮನೋರಂಜನ್ ಯಾರು ಗೊತ್ತಾ? | Lok Sabha Security Breach
    Trending

    ಲೋಕಸಭೆಗೆ ನುಗ್ಗಿದ ಮನೋರಂಜನ್ ಯಾರು ಗೊತ್ತಾ? | Lok Sabha Security Breach

    vartha chakraBy vartha chakraDecember 13, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಲೋಕಸಭಾ (Lok Sabha Security Breach) ಕಲಾಪ ನಡೆಯುತ್ತಿರುವ ವೇಳೆಯೇ ಪ್ರೇಕ್ಷಕರ ಗ್ಯಾಲರಿಯಿಂದ ಹಾರಿದ ಇಬ್ಬರು ಆಗಂತುಕರು, ಹಳದಿ ಬಣ್ಣದ ಹೊಗೆ ಎರಚಿ ಆತಂಕ ಸೃಷ್ಟಿಸಿದರು. ಅದರಲ್ಲಿ ಒಬ್ಬ ಸಂಸದರು ಕುಳಿತುಕೊಳ್ಳುವ ಮೇಜುಗಳ ಮೇಲೆಯೇ ಓಡುವ ದೃಶ್ಯ ಲೋಕಸಭೆಯ ಕಲಾಪದ ವಿಡಿಯೊದಲ್ಲಿ ದಾಖಲಾಗಿದೆ.
    ಲೋಕಸಭಾ ಕಲಾಪ ವೀಕ್ಷಣೆಗಾಗಿ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಸಾಗರ್ ಶರ್ಮಾ ಹಾಗೂ ಮನೋರಂಜನ್ ಎಂಬ ಇಬ್ಬರು ವ್ಯಕ್ತಿಗಳು ಮಧ್ಯಾಹ್ನ 1ರ ಸುಮಾರಿಗೆ ಏಕಾಏಕಿ ಸದನದೊಳಗೆ ನುಗ್ಗಿ, ಹಳದಿ ಬಣ್ಣದ ಹೊಗೆ ಸಿಂಪಡಿಸಿ, ‘ಸರ್ವಾಧಿಕಾರ ನಡೆಯುವುದಿಲ್ಲ’ ಎಂದು ಘೋಷಣೆ ಕೂಗಿದರು. ಇವರನ್ನು ಇದೀಗ ಬಂಧಿಸಲಾಗಿದೆ.ಇಬ್ಬರಿಗೂ ಕಲಾಪ ವೀಕ್ಷಿಸಲು ಮೈಸೂರಿನ ಸಂಸದ ಪ್ರತಾಪ್ ಸಿಂಹ ಪಾಸ್‌ ನೀಡಲು ಶಿಫಾರಸು ಮಾಡಿದ್ದಾರೆ.

    ಹೀಗಾಗಿ ಇವರು ಯಾರು ಎಂಬ ಹುಡುಕಾಟ ನಡೆದಿದ್ದು ಸಾಗರ್ ಶರ್ಮಾ‌ ಉತ್ತರ ಪ್ರದೇಶದವರಾದರೆ ,ಮತ್ತೊಬ್ಬ ಮನೋರಂಜನ್, ಮೈಸೂರಿನವರು.
    34 ವರ್ಷದ ಮನೋರಂಜನ್ ಮೈಸೂರಿನ ವಿಜಯನಗರ 2ನೇ ಹಂತದ ನಿವಾಸಿಯಾಗಿರುವ ದೇವರಾಜೇ ಗೌಡ ಅವರ ‍ಪುತ್ರ.ಇವರು ಮೂಲತಃ ಹಾಸನ ಜಿಲ್ಲೆ ಅರಕಲಗೂಡಿನ ಮಲ್ಲಾಪುರ ಗ್ರಾಮದವರು.ವೃತ್ತಿಯಲ್ಲಿ ಕೃಷಿಕರಾಗಿದ್ದು, ಮೈಸೂರಿನಲ್ಲಿ ನೆಲೆಸಿದ್ದಾರೆ
    ಬಿ.ಇ.ಪದವೀಧರನಾಗಿರುವ ಮನೋರಂಜನ್, ಮೈಸೂರಿನಲ್ಲಿ ಹುಟ್ಟಿ, ಅಲ್ಲಿಯೇ ಪ್ರಾಥಮಿಕ ಹಾಗೂ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ ಬೆಂಗಳೂರಿನ ಬಿಐಟಿ ಕಾಲೇಜಿನಿಂದ ಬಿಇ ಪದವಿ ಪಡೆದು ಮನೆಯಲ್ಲಿದ್ದರು.

    ಸುದ್ದಿ ಹೊರಬೀಳುತ್ತಿದ್ದಂತೆ,ವಿಜಯನಗರದ 2ನೇ ಹಂತದಲ್ಲಿರುವ ನಿವಾಸಕ್ಕೆ ವಿಜಯನಗರ ಉಪ ವಿಭಾಗದ ಉಪ ಪೊಲೀಸ್ ಆಯುಕ್ತ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಅವರ ತಂದೆ ದೇವರಾಜೇ ಗೌಡ ಅವರಿಂದ ಮಗನ ಬಗ್ಗೆ ಮಾಹಿತಿ ಪಡೆದರು.
    ಈ ವೇಳೆ ಮನೆಯಲ್ಲಿ ಕ್ರಾಂತಿಕಾರಿ ಚಿಗುವೆರಾ ಸೇರಿದಂತೆ ಹಲವು ದಾರ್ಶನಿಕರು, ಕ್ರಾಂತಿಕಾರಿಗಳ ಬಗ್ಗೆಗಿನ ಪುಸ್ತಕಗಳು ಸಿಕ್ಕಿವೆ. ಕೆಲವೊಂದು ಭೂಗತ ಜಗತ್ತಿಗೆ ಸಂಬಂಧಿಸಿದ ಪುಸ್ತಕಗಳು, ಸ್ವಾತಂತ್ರ್ಯ ಹೋರಾಟದ ಕಥನಗಳು ಇಲ್ಲಿವೆ. ಮನೋರಂಜನ್‌ ಸಾಕಷ್ಟು ಕ್ರಾಂತಿಕಾರಿ ಯೋಜನೆಗಳನ್ನು ಹೊಂದಿದ್ದರು ಎನ್ನುವುದು ಅವರ ಓದಿನಿಂದ ಗೊತ್ತಾಗುತ್ತಿದೆ.
    ತಮ್ಮ ಪುತ್ರನ ಕುರಿತಂತೆ, ದೇವರಾಜೇ ಗೌಡ ಮಾಧ್ಯಮದೊಂದಿಗೆ ಮಾತನಾಡಿ, ‘ಸಮಾಜದ ಬಗ್ಗೆ ಒಲವು ಹೊಂದಿದ್ದ. ನೊಂದವರಿಗೆ ಸಹಾಯ ಮಾಡಬೇಕೆಂಬ ಮನೋಭಾವವಿತ್ತು. ಮನೆಯಲ್ಲಿದ್ದ ಪುಸ್ತಕಗಳನ್ನು ಹೆಚ್ಚು ಓದುತ್ತಿದ್ದ. ಆಗಾಗ ದೆಹಲಿ, ಬೆಂಗಳೂರಿಗೆ ತೆರಳುತ್ತಿದ್ದ. ತಪ್ಪು ಮಾಡಿದ್ದರೆ ಗಲ್ಲುಶಿಕ್ಷೆಯಾಗಲಿ’ ಎಂದರು.

    lok sabha lok sabha security breach News Politics Trending Varthachakra ಶಿಕ್ಷಣ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕಬ್ಬಿನ ತೂಕದಲ್ಲಿ ಮೋಸಕ್ಕೆ ಕಡಿವಾಣ | Sugarcane
    Next Article ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    1 Comment

    1. Scotthem on December 6, 2025 8:44 am

      ?Celebremos a cada triunfador del galardon supremo !
      Jugar en casino sin dni permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinos sin kyc. Gracias a esta flexibilidad, cada sesiГіn se vuelve mГЎs cГіmoda al usar servicios como casino crypto sin kyc.
      Jugar en casinoretirosinverificacion.com/ permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casino sin dni. Gracias a esta flexibilidad, cada sesiГіn se vuelve mГЎs cГіmoda al usar servicios como casino sin verificaciГіn.
      Casinoretirosinverificacion, diversiГіn directa – п»їhttps://casinoretirosinverificacion.com/
      ?Que la suerte te beneficie con aguardandote magnificos movidas triunfantes !

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • тут on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • elektricheskie jaluzi_abot on ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    • Ronaldfloca on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe