ಬೆಂಗಳೂರು,ಫೆ.28- ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಯಿಂದ ದೂರ ಉಳಿದ ಮಾಜಿ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ತಮ್ಮ ನಡೆಗೆ ಸ್ಪಷ್ಟನೆ ನೀಡಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ನನ್ನ ಆರೋಗ್ಯ ಸರಿ ಇರಲಿಲ್ಲ, ಅನಾರೋಗ್ಯದ ಕಾರಣ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಆಗಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಾಲ್ಕು ದಶಕದಿಂದ ರಾಜಕಾರಣದಲ್ಲಿ ಇದ್ದೇನೆ. ನಾನು ಯಾರಿಗೋ ಹೆದರಿ ಮತದಾನಕ್ಕೆ ಹೋಗಿಲ್ಲ ಎಂದು ಹೇಳುವುದರಲ್ಲಿ ಅರ್ಥವಿಲ್ಲ. ನಾನು ಮತದಾನಕ್ಕೆ ಹೋಗಿ ಅಡ್ಡ ಮತದಾನ ಮಾಡಬಹುದಿತ್ತು ನನ್ನನ್ನು ತಡೆಯವರು ಯಾಗಿದ್ದರು
ಇಲ್ಲವೇ ಮತದಾನ ಮಾಡದೆಯೇ ಇರಬಹುದಿತ್ತು ಎಂದು ಹೇಳಿದರು.
ಮತದಾನದಿಂದ ದೂರ ಉಳಿಯುವ ಮೂಲಕ ನಾನು ಯಾರಿಗೂ ಎಚ್ಚರಿಕೆ ಕೊಡಲು ಹೋಗಿಲ್ಲ. ಬಿಜೆಪಿಯಲ್ಲಿ ನನಗೆ ನನ್ನದೇ ಆದ ಅಸಮಾಧಾನ ಇರುವುದು ನಿಜ.
ಅದು ಜಿಲ್ಲಾಮಟ್ಟದಲ್ಲಿ ಮಾತ್ರ ಎಂದು ತಿಳಿಸಿದರು.
ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಯಾವುದೇ ಬಿಜೆಪಿ ನಾಯಕರ ಜೊತೆ ತಮಗೆ ಯಾವುದೇ ಅಸಮಾಧಾನ ಇಲ್ಲ.ಜಿಲ್ಲಾ ಮಟ್ಟದಲ್ಲಿ ಮಾತ್ರ ಸಾಕಷ್ಟು ಸಮಸ್ಯೆಯಿದೆ.ನನಗೆ ಯಾರು ಅಡ್ಡಗಾಲು ಹಾಕುತ್ತಾರೆ ಎನ್ನುವುದು ಸಮಯ ಬಂದಾಗ ಗೊತ್ತಾಗುತ್ತದೆ ಎಂದು ಹೇಳಿದರು.


3 Comments
mcluck casino login mcluckcasinogm.com mcluck CO
Featuring Paris Hilton as a brand deputy in the past and conditions live exchange tables, wowvegasus.com remains a covering sweepstakes casino choice. It offers unshackled coins for parody play added the arousing opportunity to reform prizes from Sweepstakes Coins.
Dive into the atmosphere of luxury and excitement. In crown coins casino log in, popular slots from leading providers are available. Boost your bankroll with bonuses!