Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯೋಗ ದಿನಕ್ಕೆ ಅರಮನೆ ನಗರಿ ಸರ್ವ ಸಜ್ಜು
    ಸುದ್ದಿ

    ಯೋಗ ದಿನಕ್ಕೆ ಅರಮನೆ ನಗರಿ ಸರ್ವ ಸಜ್ಜು

    vartha chakraBy vartha chakraJune 20, 2022Updated:June 20, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಶ್ವ ಯೋಗ ದಿನಾಚರಣೆಗೆ ಮೈಸೂರು ಸಜ್ಜಾಗಿದೆ .ಜಗತ್ಪ್ರಸಿದ್ಧ ಅರಮನೆ ಆವರಣದಲ್ಲಿ ಯೋಗ ದಿನಾಚರಣೆ ಹಿನ್ನೆಲೆ ಅರಮನೆಯ ಪೂರ್ವ ದಿಕ್ಕಿನಲ್ಲಿ ಭವ್ಯ ವೇದಿಕೆ ನಿರ್ಮಾಣ ಮಾಡಲಾಗಿದೆ .ಜಯ ಮಾರ್ತಾಂಡ ದ್ವಾರದ ಬಳಿ ಭವ್ಯ ವೇದಿಕೆ ನಿರ್ಮಾಣವಾಗಿದ್ದು, ಅರಮನೆ ಆವರಣದ ಬಹುತೇಕ ಕಡೆ LED ಪರದೆಗಳ ಅಳವಡಿಕೆ ಮಾಡಲಾಗಿದೆ . ಅರಮನೆ ಬಳಿ ಸಾರ್ವಜನಿಕರಿಗೆ ಮೊಬೈಲ್ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ .ಮೈಸೂರು ಅರಮನೆ ಆವರಣದಲ್ಲಿ ಹೆಚ್ಚಿನ ಬಿಗಿ ಭದ್ರತೆ ಕೈಗೊಳ್ಳಲಾಗಿದೆ . ಶನಿವಾರ ಸಚಿವ ಎಸ್ಟಿ ಸೋಮಶೇಖರ್ ಸಿದ್ಧತೆಗಳನ್ನ ಅರಮನೆಯಲ್ಲಿ ಪರಿಶೀಲನೆ ಮಾಡಿದರು.

    ಮೋದಿ ವಾಸ್ತವ್ಯಕ್ಕೆ ಸ್ಟಾರ್ ಹೋಟೆಲ್ ಸಜ್ಜಾಗಿ ನಿಂತಿದೆ. ಶನಿವಾರದಿಂದ ರಾಡಿಸನ್ ಬ್ಲೂ ಪ್ಲಾಜಾ ಹೋಟೆಲ್ನ ಬುಕ್ಕಿಂಗ್ ಸ್ಟಾಪ್ ಮಾಡಲಾಗಿದ್ದು, ಇಡೀ ಹೋಟೆಲ್ ಅನ್ನು ಭದ್ರತಾ ಪಡೆ ಖಾಲಿ ಮಾಡಿಸುತ್ತಿದೆ. ಹೋಟೆಲ್ ನ ಇತರೆ ಗ್ರಾಹಕರಿಗೆ ಬೇರೆ ಹೋಟೆಲ್ಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಇನ್ನ ಈ ಬಾರಿ ಭದ್ರತಾ ಪಡೆ ಗೌಪ್ಯತೆಯನ್ನು ಕಾಪಾಡಿಕೊಂಡಿದ್ದು, ಇಡೀ ಹೋಟೆಲ್ ಅನ್ನು SPG ಸಿಬ್ಬಂದಿ ಆವರಿಸಿದ್ದಾರೆ. ರಾಡಿಸನ್ ಬ್ಲೂ ಬಳಿ ಡಾಗ್ ಸ್ಕ್ವಾಡ್ & ಬಾಂಬ್ ಸ್ಕ್ವಾಡ್ ಬಂದಿಳಿದಿದ್ದು, 6 ತಂಡಗಳ 50 ಸಿಬ್ಬಂದಿಯಿಂದ ಇಡೀ ಕಟ್ಟಡದ ಹೊರ ಭಾಗದಲ್ಲಿ ತಪಾಸಣೆ ನಡೆಯುತ್ತಿದೆ. ಅಲ್ದೆ ಹೋಟೆಲ್ ಮುಂಭಾಗದ ರಸ್ತೆಗಳ ಸಿಂಗಾರ ಕಾರ್ಯ ನಡೆಯುತ್ತಿದ್ದು, ರಸ್ತೆಯ ಇಕ್ಕೆಲಗಳನ್ನ ಸ್ವಚ್ಛ ಮಾಡುವಲ್ಲಿ ಪೌರಕಾರ್ಮಿಕರು ನಿರತರಾಗಿದ್ದಾರೆ.

    ಪ್ರಧಾನಿ ಮೋದಿ ಸಾಗಲಿರುವ ಮಾರ್ಗದಲ್ಲಿ ಬಿಗಿ ಭದ್ರತೆ ಮಾಡಲಾಗ್ತಿದ್ದು, ಮೈಸೂರಿನ ಅಂದ ಹೆಚ್ಚಿಸಲು ಸ್ಥಳೀಯ ಆಡಳಿತ ಮುಂದಾಗಿದೆ. ಮೈಸೂರಿನ ಗುಂಡಿ ಬಿದ್ದಿದ್ದ ರಸ್ತೆಗಳಿಗೆ ಡಾಂಬರೀಕರಣ, ಡಿವೈಡರ್ಗೆ ಸುಣ್ಣ-ಬಣ್ಣ ಬಳಿಯಲಾಗಿದ್ದು, ಮೋದಿ ಸ್ವಾಗತಿಸುವ ಭರದಲ್ಲಿ ಮರಗಳ ಮಾರಣಹೋಮ ನಡೆದಿದೆ. ಸ್ವಚ್ಛತೆ ನೆಪದಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿ ಬೆಳೆದು ನಿಂತಿದ್ದ ಮರಗಳಿಗೆ ಕೊಡಲಿಯೇಟು ಬಿದ್ದಿದೆ. ಇನ್ನ ಬೃಹದಾಕಾರದ ಮರಗಳ ಹನನ ತಿಳಿದು ಪರಿಸರ ಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

    ಜಗತ್ಪ್ರಸಿದ್ಧ ಮೈಸೂರು ಅಂಬಾವಿಲಾಸ ಅರಮನೆಗೆ 3 ದಿನ ಪ್ರವೇಶ ನಿರ್ಬಂಧಿಸಲಾಗಿದೆ. ಜೂನ್ 19 ರಿಂದ ಜೂನ್ 21ರವರೆಗೆ ಅರಮನೆಗೆ ನಿರ್ಬಂಧ ವಿಧಿಸಿ ಅರಮನೆ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಜೂನ್ 21ರಂದು ಅರಮನೆ ಆವರಣದಲ್ಲಿ ವಿಶ್ವ ಯೋಗ ಕಾರ್ಯಕ್ರಮ ನಡೆಯಲಿದ್ದು, ಅರಮನೆಯಲ್ಲಿ ಕಾಮಗಾರಿ ಹಿನ್ನೆಲೆ 3 ದಿನ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇನ್ನು ಜೂನ್ 21ರ ಮಧ್ಯಾಹ್ನ 12 ಗಂಟೆಯವರೆಗೂ ಅರಮನೆಗೆ ನಿರ್ಬಂಧ ಹೇರಲಾಗಿದ್ದು, ಇಂದಿನಿಂದ ಜೂನ್ 22ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನೂ ರದ್ದು ಮಾಡಲಾಗಿದೆ.

    Verbattle
    Verbattle
    Verbattle
    #narendramodi mysor
    Share. Facebook Twitter Pinterest LinkedIn Tumblr Email WhatsApp
    Previous Articleದರೋಡೆಕೋರರ ಬಂಧನ
    Next Article ಅಶ್ವತ್ಥ ಎಲೆಯ ಮೇಲೆ ಸಚಿನ್ ತೆಂಡೂಲ್ಕರ್! ಉಡುಪಿ ಕಲಾವಿದನ ಕೈಚಳಕಕ್ಕೆ ಕ್ರಿಕೆಟ್ ದೇವರು ಫಿದಾ!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floimn on ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ | Madrasa
    • LinwoodGah on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Vodka_enka on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.