Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?
    ರಾಷ್ಟ್ರೀಯ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    vartha chakraBy vartha chakraJune 16, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಧ್ಯಪ್ರಾಚ್ಯದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ ಇಸ್ರೇಲ್‌ನ ದಾಳಿ ಮತ್ತು ಇರಾನ್‌ನ ತೀವ್ರ ಪ್ರತೀಕಾರದ ಹಿನ್ನೆಲೆಯಲ್ಲಿ ಮಧ್ಯಪೂರ್ವ ಪ್ರಾಂತ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದೆ.
    ಇದರ ನಡುವೆ ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ
    ಬಗ್ಗೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಇದ್ದ ಕುತೂಹಲ ಮತ್ತು ನಂಬಿಕೆಗೆ ತೆರೆಬಿದ್ದಿದೆ.
    ಆಪರೇಷನ್‌ ರೈಸಿಂಗ್‌ ಲಯನ್’ ಹೆಸರಿನಡಿ ಇಸ್ರೇಲ್ ನಡೆಸಿದ ಕಾರ್ಯಾಚರಣೆಯಲ್ಲಿ ಇರಾನ್‌ ಸೇನೆಯ ಅತ್ಯುನ್ನತ ಶ್ರೇಣಿಯ ಅಧಿಕಾರಿ, ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್‌ ಬಘೇರಿ ಮತ್ತು ಇಸ್ಲಾಮಿಕ್‌ ರೆವಲ್ಯೂಷನರಿ ಗಾರ್ಡ್‌ ಕೋರ್‌ ಮುಖ್ಯಸ್ಥ ಹುಸೇನ್‌ ಸಲಾಮಿ ಮೃತಪಟ್ಟಿದ್ದಾರೆ.
    ಇವರ ಜೊತೆಗೆ ಇರಾನ್ ಕ್ಷಿಪಣಿ ಯೋಜನೆಯ ಮುಖ್ಯಸ್ಥ ಅಮೀರ್‌ ಅಲಿ ಹಾಜಿಝದಾ ಅವರೂ ಮೃತಪಟ್ಟಿದ್ದರು. ಈ ಸಾವನ್ನು ಇರಾನ್‌ ದೃಢಪಡಿಸಿತ್ತು.ಈ ಇಬ್ಬರು ಮಾತ್ರವಲ್ಲದೆ,ಇರಾನ್‌ ಪರಮಾಣು ಯೋಜನೆಯಲ್ಲಿ ಭಾಗಿಯಾಗಿರುವ ಹಲವು ವಿಜ್ಞಾನಿಗಳೂ ದಾಳಿಯಲ್ಲಿ ಮೃತಪಟ್ಟಿದ್ದಾರೆ.
    ತನ್ನ ಅಣ್ವಸ್ತ್ರ, ಸೇನಾನೆಲೆಗಳ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ ಇರಾನ್‌, ಇಸ್ರೇಲ್‌ನ ಟೆಲ್‌ ಅವೀವ್‌, ಜೆರುಸಲೇಂ ನಗರಗಳ ಮೇಲೆ ನೂರಾರು ಕ್ಷಿಪಣಿ, ಡ್ರೋನ್‌ಗಳ ಮೂಲಕ ದಾಳಿ ನಡೆಸಿದೆ.
    ಇರಾನ್‌ನ ರಕ್ಷಣಾ ಕೇಂದ್ರಗಳು, ತೈಲ ಘಟಕಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿಯನ್ನು ತೀವ್ರಗೊಳಿಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ದಾಳಿ ನಡೆಸಿದೆ.
    ಉಭಯ ರಾಷ್ಟ್ರಗಳ ನಡುವೆ ಉಂಟಾಗಿರುವ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು ಯುದ್ಧದ ಕಾರ್ಮೋಡಗಳು ಆವರಿಸಿವೆ.
    ದಾಳಿಯಿಂದಾಗಿ ಹಲವು ಕಟ್ಟಡಗಳು ತೀವ್ರ ಜಖಂಗೊಂಡಿವೆ. ನಗರಗಳ ಕೇಂದ್ರ ಭಾಗದಲ್ಲಿ ದಟ್ಟ ಹೊಗೆ, ಬೆಂಕಿ ಆವರಿಸಿದ್ದು ಕಂಡುಬಂತು. ಪ್ರಾಥಮಿಕ ವರದಿ ಪ್ರಕಾರ, ದಾಳಿಯಲ್ಲಿ ಮೂವರು ಸತ್ತಿದ್ದು, ಹಲವರು ಗಾಯಗೊಂಡಿದ್ದಾರೆ.ಈ ಈ ದಾಳಿಯಿಂದಾಗಿ ಇರಾನ್ ದೇಶದಲ್ಲಿ 224 ಮಂದಿ ಮೃತಪಟ್ಟಿದ್ದು, 1,277ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್‌ನ ವಿಶ್ವಸಂಸ್ಥೆಯ ರಾಯಭಾರಿ ತಿಳಿಸಿದ್ದಾರೆ.
    ಇದಕ್ಕೆ ಪ್ರತಿಯಾಗಿ ಇರಾನ್ ನಡೆಸುತ್ತಿರುವ ದಾಳಿಯಿಂದ ಇಸ್ರೇಲ್ ನಲ್ಲಿ ಅಪಾರ ಪ್ರಮಾಣದ ಸಾವು ನೋವು ಉಂಟಾಗಿದೆ ಇನ್ನೂ ಒಂದು ಅಚ್ಚರಿಯ ವಿಚಾರವೇನೆಂದರೆ, ಇರಾನ್ ದಾಳಿಯನ್ನು ಇಸ್ರೇಲ್‌ನ ಕ್ಷಿಪಣಿ ನಿಗ್ರಹ ವ್ಯವಸ್ಥೆಯಾದ ಐರನ್ ಡೋಮ್ ಕೂಡ ಈ ದಾಳಿಯನ್ನು ಮೆಟ್ಟಿ ನಿಲ್ಲಲಾಗಿಲ್ಲ.
    ಇರಾನ್ ನಿಂದ ಹಾರಿಸಲ್ಪಟ್ಟ ಕೆಲವು ಕ್ಷಿಪಣಿಗಳು ಐರನ್ ಡೋಮ್ ನಿಂದಲೂ ಬಚಾವಾಗಿ ಬಂದು ಇಸ್ರೇಲ್ ನ ಕೆಲವು ಕಟ್ಟಡಗಳಿಗೆ ಅಪ್ಪಳಿಸಿವೆ. ಅವುಗಳಲ್ಲೊಂದು ಇಸ್ರೇಲ್ ರಕ್ಷಣಾ ಪಡೆಗಳ ಕೇಂದ್ರ ಕಚೇರಿಗೆ ಬಂದು ಬಡಿದಿದೆ.
    ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ 19 ಸೆಕೆಂಡುಗಳ ವಿಡಿಯೋದಲ್ಲಿ, ಇರಾನ್‌ನ ಕ್ಷಿಪಣಿಯನ್ನು ತಡೆಯಲು ಐರನ್ ಡೋಮ್ ವ್ಯವಸ್ಥೆ ವಿಫಲವಾಗಿರುವುದು ಗೋಚರವಾಗುತ್ತದೆ. ಇರಾನ್ ಕ್ಷಿಪಣಿಗಳು, ಟೆಲ್ ಅವಿವ್‌ನ ಕಿರ್ಯಾ ಪ್ರದೇಶದಲ್ಲಿರುವ ಐಡಿಎಫ್ ಪ್ರಧಾನ ಕಚೇರಿಯ ಸಮೀಪವಿರುವ ಮಾರ್ಗಾನಿಟ್ ಟವರ್ ಹಿನ್ನೆಲೆಯಲ್ಲಿ ಕಾಣುವ ಕಟ್ಟಡಕ್ಕೆ ಅಪ್ಪಳಿಸುತ್ತದೆ. ವಿಡಿಯೋದಲ್ಲಿ ಜೋರಾದ ಶಬ್ದದೊಂದಿಗೆ ಕ್ಷಿಪಣಿ ಉಡಾವಣೆಯಾಗಿ, ನಂತರ ಬೆಳಕಿನ ಕಿಡಿ ಮತ್ತು ಬೆಂಕಿಯ ಚೆಂಡು ಕಟ್ಟಡಕ್ಕೆ ಅಪ್ಪಳಿಸುವ ದೃಶ್ಯ ಕಾಣಿಸುತ್ತದೆ.
    ಎದೆ ಝಲ್ಲೆನಿಸುವಂಥ ಈ ಘಟನೆಯು, ಜಗತ್ತಿನಲ್ಲೇ ಉತ್ಕೃಷ್ಟವಾದ ಕ್ಷಿಪಣಿ ತಡೆ ತಂತ್ರಜ್ಞಾನ ಎಂದೇ ಹೆಸರುವಾಸಿಯಾಗಿರುವ ಇಸ್ರೇಲ್ ನ ಐರನ್ ಡೋಮ್ ರಕ್ಷಣಾ ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸಿದೆ.
    ಕ್ಷಿಪಣಿ ದಾಳಿಯಿಂದ ತಪ್ಪಿಸಿಕೊಳ್ಳಲು ಐರನ್ ಡೋಮ್ ವ್ಯವಸ್ಥೆ ಅತ್ಯಂತ ಸುರಕ್ಷಿತ ಎಂದು ಬಣ್ಣಿಸಲಾಗುತ್ತಿತ್ತು ಐರನ್ ಡೋಮ್ ವ್ಯವಸ್ಥೆಯ ಮೇಲೆ ಯಾವುದೇ ಕ್ಷಿಪಣಿ ದಾಳಿಗಳು ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗಿತ್ತು ಈ ಬಗ್ಗೆ ಜಗತ್ತಿನ ಹಲವು ರಾಷ್ಟ್ರಗಳು ತೀವ್ರ ಕುತೂಹಲ ಮತ್ತು ಆಸಕ್ತಿಯಿಂದ ಗಮನಿಸುತ್ತಿದ್ದವು ಆದರೆ ಈಗ ಇರಾನ್ ನಡೆಸಿದ ದಾಳಿ ಈ ಎಲ್ಲಾ ಕುತೂಹಲಗಳಿಗೆ ಉತ್ತರ ನೀಡಿದೆ.

    ತಂತ್ರಜ್ಞಾನ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?
    vartha chakra
    • Website

    Related Posts

    ಚೆನಾಬ್.. ಇದು ಭಾರತದ ಐಫೆಲ್ ಟವರ್!

    June 9, 2025

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    May 22, 2025

    ಜನ ಸಾಮಾನ್ಯರೇ ಎಚ್ಚರ !

    May 12, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • CalvinPet on ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ವಿನೋದ್ ತಾವ್ಡೆ ನೇಮಕ ಸಾಧ್ಯತೆ.
    • Robertnes on ಪ್ರಜ್ವಲ್ ಹೆಜ್ಜೆ ಜಾಡು ಬೆನ್ನು ಹತ್ತಿದ SIT.
    • ldkkhgcxm on ಕಂದಾಯ ಇಲಾಖೆಯಲ್ಲಿ ರೇಟ್ ಫಿಕ್ಸ್
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe