Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.
    ಸುದ್ದಿ

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    vartha chakraBy vartha chakraJune 20, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.20-
    ಕಳೆದ ಶೈಕ್ಷಣಿಕ ವರ್ಷದಲ್ಲಿ ಆದ ಗೊಂದಲದಿಂದ ಇಂಜಿನಿಯರಿಂಗ್ ಶಿಕ್ಷಣ ಪ್ರವೇಶದ ಅವಕಾಶದಿಂದ ವಂಚಿತರಾಗಿದ್ದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಈ ವರ್ಷವೂ ಕೂಡ ತೂಗುಯ್ಯಾಲೆಯಲ್ಲಿದೆ.
    ಎಂಜಿನಿಯರಿಂಗ್‌ ಸೀಟುಗಳನ್ನು ಬ್ಲಾಕ್‌ ಮಾಡಿದ್ದ ಆರೋಪ ಎದುರಿಸುತ್ತಿರುವ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು 2025-26ನೇ ಸಾಲಿನಲ್ಲೂ ಪರೀಕ್ಷೆ ಬರೆದಿದ್ದು, ಅಂತಹ ವಿದ್ಯಾರ್ಥಿಗಳ ಶ್ರೇಯಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಡೆಹಿಡಿದಿದೆ.
    2024-25ನೇ ಸಾಲಿನ ವೃತ್ತಿ ಶಿಕ್ಷಣ ಪ್ರವೇಶದ ವೇಳೆ ಸೀಟ್‌ ಬ್ಲಾಕಿಂಗ್‌ ದಂಧೆ ನಡೆದಿತ್ತು. ಪ್ರತಿಷ್ಠಿತ ಕಾಲೇಜುಗಳು ನಡೆಸಿದ ಈ ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ಕೆಲವು ವಿದ್ಯಾರ್ಥಿಗಳು ಕೂಡ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
    ಎಂಜಿನಿಯರಿಂಗ್‌ ಕೋರ್ಸ್‌ಗಳ ‘ಸೀಟ್‌ ಬ್ಲಾಕಿಂಗ್‌’ ದಂಧೆ ನಡೆಸುತ್ತಿದ್ದವರ ವಿರುದ್ಧ ಮಲ್ಲೇಶ್ವರದ ಸೈಬರ್‌ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
    ಸೀಟು ಹಂಚಿಕೆಯಾಗಿದ್ದರೂ, ಎಂಜಿನಿಯರಿಂಗ್‌ ಕಾಲೇಜುಗಳಿಗೆ ಪ್ರವೇಶ ಪಡೆಯದ 2,348 ವಿದ್ಯಾರ್ಥಿಗಳಿಗೆ ಕೆಇಎ ನೋಟಿಸ್‌ ನೀಡಿತ್ತು. ಕೆಲವರು ಉತ್ತರ ನೀಡಿದರೆ, ಬಹುತೇಕ ವಿದ್ಯಾರ್ಥಿಗಳು ನೋಟಿಸ್‌ಗೆ ಉತ್ತರ ನೀಡಿರಲಿಲ್ಲ. ನೋಟಿಸ್‌ ನೀಡಿದ್ದರೂ ಉತ್ತರ ನೀಡದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿಯೂ ಸಿಇಟಿ ಬರೆದಿದ್ದರು. ಅಂಥವರ ಶ್ರೇಯಾಂಕವನ್ನು ಕೆಇಎ ತಡೆಹಿಡಿದಿದೆ.
    ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ 2024-25ನೇ ಸಾಲಿಗೆ ನಡೆದಿದ್ದ ಸಿಇಟಿಯಲ್ಲಿ ಉನ್ನತ ರ್‍ಯಾಂಕ್‌ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಎರಡನೇ ಸುತ್ತು ಪೂರ್ಣಗೊಳ್ಳುವವರೆಗೂ ಸೀಟು ಹಿಡಿದಿಟ್ಟುಕೊಂಡು ಕೊನೆಯ ಸುತ್ತಿನ ನಂತರ ತಮಗೆ ಹಂಚಿಕೆಯಾದ ಕಾಲೇಜುಗಳಿಗೆ ಪ್ರವೇಶ ಪಡೆಯದೇ ಇತರೆ ವಿದ್ಯಾರ್ಥಿಗಳಿಗೆ ನಷ್ಟ ಮಾಡಿದ್ದರು ಎಂದು ಕೆಇಎ ಆರೋಪಿಸಿತ್ತು.
    ‘ಸೀಟ್‌ ಬ್ಲಾಕಿಂಗ್‌ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಕೆಲವರು ಶ್ರೇಯಾಂಕ ನೀಡುವಂತೆ ಮನವಿ ಸಲ್ಲಿಸಿದ್ದು, ಅವರ ಅಹವಾಲು ಆಲಿಸಲು ಸಮಿತಿ ರಚಿಸಲಾಗಿದೆ. ಸಮಿತಿ ವರದಿ ಹಾಗೂ ಪೊಲೀಸರು ಸಲ್ಲಿಸಿದ ದೋಷಾರೋಪ ಪಟ್ಟಿ ಪರಿಶೀಲನೆಯ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಕೆ ಇ ಎ ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಕಾಲೇಜು Bengaluru ವಿದ್ಯಾ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದಲ್ಲಿ ಕಮೀಷನ್ ಹಾವಳಿ.
    Next Article ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Daviddek on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • RicardoCor on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.