Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಧಾನಿ ಮೋದಿ ಬರುತ್ತಿದ್ದಾರೆ
    ರಾಜ್ಯ

    ಪ್ರಧಾನಿ ಮೋದಿ ಬರುತ್ತಿದ್ದಾರೆ

    vartha chakraBy vartha chakraNovember 10, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.10- ಕೆಂಪೇಗೌಡರ ಪ್ರತಿಮೆ ಅನಾವರಣ, ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಉದ್ಘಾಟನೆ, ವಂದೇ ಭಾರತ್ ರೈಲಿಗೆ ಚಾಲನೆ, ಕನಕ ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ನಾಳೆ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.
    ಪ್ರಧಾನಿಗಳು ಪಾಲ್ಗೊಳ್ಳುವ ವಿಮಾನ ನಿಲ್ದಾಣ,ವಿಧಾನ ಸೌಧ,ರೈಲ್ವೆ ನಿಲ್ದಾಣವನ್ನು ಮುಂಜಾನೆಯಿಂದ ಕೇಂದ್ರ ಭದ್ರತಾ ಪಡೆಗಳು ವಶಕ್ಕೆ ಪಡೆಯಲಿದ್ದು ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು ಸೂಕ್ಷ್ಮ ಅತಿಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿದೆ.
    ಪ್ರಧಾನಿಗಳ ಭೇಟಿಯ ಹಿನ್ನೆಲೆಯಲ್ಲಿ
    ಬೆಳಿಗ್ಗೆ 8ರಿಂದ 11:30ರ ಅವಧಿಯಲ್ಲಿ ನಗರ ರೈಲು ನಿಲ್ದಾಣಕ್ಕೆ ಬರಬೇಕಿದ್ದ ಹಾಗೂ ನಗರ ರೈಲು ನಿಲ್ದಾಣದಿಂದ ಸಂಚರಿಸಬೇಕಿದ್ದ ಹಲವು ರೈಲುಗಳನ್ನು ಯಶವಂತಪುರ ಹಾಗೂ ಬೈಯಪ್ಪನಹಳ್ಳಿ ನಿಲ್ದಾಣಗಳಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ.
    ಈ ಅವಧಿಯಲ್ಲಿ ನಗರ ರೈಲು ನಿಲ್ದಾಣದಿಂದ ಸಂಚಾರ ಆರಂಭಿಸಬೇಕಿದ್ದ ರೈಲುಗಳು 12 ಗಂಟೆಯ ನಂತರ ಹೊರಡಲಿವೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.
    ರೈಲು ನಿಲ್ದಾಣ ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ ಪೊಲೀಸರು ಹಾಗೂ ರೈಲ್ವೆ ಇಲಾಖೆಯಿಂದ ಭದ್ರತೆ ಕಲ್ಪಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಯಾವುದೇ ರೈಲುಗಳು ನಗರ ನಿಲ್ದಾಣಕ್ಕೆ ಬರುವುದಿಲ್ಲ. ಪ್ಲಾಟ್​ಫಾರಂ 7 ಅಥವಾ 8ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ರೈಲು ನಿಲ್ದಾಣ ಸುತ್ತಮುತ್ತಲ ಪ್ರದೇಶದ ಭದ್ರತೆಗಾಗಿ 1200ಕ್ಕೂ ಹೆಚ್ಚು ರೈಲ್ವೆ ಪೊಲೀಸರನ್ನು ನೇಮಿಸಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
    ಬೆಳಿಗ್ಗೆ 9 ಗಂಟೆಗೆ ಮೋದಿ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಹೆಲಿಕಾಪ್ಟರ್​ನಲ್ಲಿ ಮೇಖ್ರಿ ಸರ್ಕಲ್ ಸಮೀಪದ ಏರ್​ಫೋರ್ಸ್​​ ಕಮಾಂಡ್​ಗೆ ಬರಲಿದ್ದಾರೆ. ಅಲ್ಲಿಂದ ಕಾರಿನಲ್ಲಿ ನಗರ ರೈಲು ನಿಲ್ದಾಣಕ್ಕೆ ತೆರಳಲಿದ್ದಾರೆ. ಮಾರ್ಗದಲ್ಲಿ ಭದ್ರತೆಗಾಗಿ 6,500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ನಗರದ ಎಲ್ಲಾ ಹೆಚ್ಚುವರಿ ಪೊಲೀಸ್ ಆಯುಕ್ತರು, ಜಂಟಿ ಆಯುಕ್ತರು,ಡಿಸಿಪಿಗಳು,ಎಸಿಪಿ,
    ಇನ್ಸ್‌ಪೆಕ್ಟರ್ ಸಬ್ ಇನ್ಸ್‌ಪೆಕ್ಟರ್ ಸೇರಿ ಬಹುತೇಕ ಸಿಬ್ಬಂದಿ ಭದ್ರತೆಯಲ್ಲಿ ತೊಡಗಲಿದ್ದಾರೆ.
    20 ಕೆಎಸ್​ಆರ್​ಪಿ ಹಾಗೂ ಸಿಎಆರ್ ತುಕಡಿಗಳು ಕಾರ್ಯನಿರ್ವಹಿಸಲಿವೆ. ರೈಲು ‌ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಕಾರು ಅಥವಾ ಹೆಲಿಕಾಪ್ಟರ್​ ಮೂಲಕ ತೆರಳಲಿದ್ದಾರೆ.
    ಪ್ರಧಾನಿ ಮೋದಿ ಬೆಳಗ್ಗೆ 9.5ಕ್ಕೆ ಹೆಲಿಕಾಫ್ಟರ್ ಮೂಲಕ ಮೇಕ್ರಿ ವೃತ್ತದಲ್ಲಿರುವ ಭಾರತೀಯ ವಾಯುಪಡೆ ಕೇಂದ್ರಕ್ಕೆ ಆಗಮಿಸಿ 9.45ಕ್ಕೆ ವಿಧಾನಸೌಧಕ್ಕೆ ಆಗಮಿಸುವರು. 9.45ರಿಂದ 9.55ರವರೆಗೆ ಕನಕದಾಸ ಮತ್ತು ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
    ವಿಧಾನಸೌಧದಿಂದ ಬೆಳಗ್ಗೆ 10 ಗಂಟೆಗೆ ಹೊರಟು 10.20ಕ್ಕೆ ಸಂಗೊಳ್ಳಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಮೋದಿ ಅವರು, ಭಾರತ್ ಗೌರವ್ ಕಾಶಿ ದರ್ಶನದ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.
    ರೈಲ್ವೆ ನಿಲ್ದಾಣದಿಂದ 10.45ಕ್ಕೆ ಮೇಕ್ರಿ ವೃತ್ತದಲ್ಲಿರುವ ಎಎಫ್‍ಟಿಸಿಸಿ ಹೆಲಿಪ್ಯಾಡ್‍ಗೆ ಬರಲಿದ್ದಾರೆ. ಅಲ್ಲಿಂದ 11 ಗಂಟೆಗೆ ಹೆಲಿಕಾಫ್ಟರ್ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
    ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ನಿರ್ಮಾಣಗೊಂಡಿರುವ 2ನೇ ಟರ್ಮಿನಲ್‍ನ್ನು 11.25ರಿಂದ 11.30ಕ್ಕೆ ಉದ್ಘಾಟಿಸಲಿದ್ದಾರೆ. ಈ ಮೂಲಕ ದೆಹಲಿ ಮತ್ತು ಮುಂಬೈ ಹೊರತುಪಡಿಸಿದರೆ ಎರಡನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಕೆಂಪೇಗೌಡ ವಿಮಾನ ನಿಲ್ದಾಣ ಪಾತ್ರವಾಗಲಿದೆ.
    ಪ್ರಧಾನಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಭಾರೀ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಅವರು ಸಂಚರಿಸುವ ಮಾರ್ಗದ ರಸ್ತೆಗಳನ್ನು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ಅಲ್ಲದೆ, ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸಹ ಬಂದ್ ಮಾಡಲಾಗಿದೆ.

    ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleವಿನಯ್ ಗುರೂಜಿನ ಪೊಲೀಸರು ಏನು ಕೇಳಿದರು?
    Next Article ವಿಕೃತ ಕಾಮಿ ಮುರುಘಾ ಶರಣ
    vartha chakra
    • Website

    Related Posts

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ಉಪನ್ಯಾಸಕರಲ್ಲ ಇವರು ರಾಕ್ಷಸರು.

    July 15, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ralphhow on ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • Jamesfluts on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • Происшестви on ವಿಮಾನದಲ್ಲಿ ಬೀಡಿ‌ ಸೇದಿದ‌ ಆಸಾಮಿ | Indigo
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe