ಪಠ್ಯ ಪುಸ್ತಕ ಪರಿಷ್ಕರಣ ಸಮಿತಿ ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರ ಒಂದೆರಡಲ್ಲ. ರೋಹಿತ್ ಚಕ್ರವರ್ತಿ ನೇತೃತ್ವದ ಸಮಿತಿಯ ಎಡವಟ್ಟುಗಳು ಪ್ರತಿ ಹಂತದಲ್ಲೂ ವಿವಾದವನ್ನೇ ಸೃಷ್ಟಿಸುತ್ತಿವೆ. ಇದಾವುದರ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ ರೋಹಿತ್ ಚಕ್ರವರ್ತಿ ಬೆಂಬಲಕ್ಕೆ ನಿಂತಿದೆ. ಪ್ರಾಥಮಿಕ ಹಾಗು ಪ್ರೌಢಶಾಲೆ ಪಠ್ಯಪುಸ್ತಕ ಪರಿಷ್ಕರಿಸಿದ ಈ ಸಮಿತಿಗೆ ಮತ್ತೊಂದು ಗುರುತರ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆ ನೀಡಿದೆ.
ದ್ವಿತೀಯ ಪಿಯುಸಿಯ ಭಾರತದ ಇತಿಹಾಸ ಪಠ್ಯ ಪರಿಷ್ಕರಣೆ ಮಾಡಲು ಇಲಾಖೆ ನಿರ್ಧರಿಸಿದೆ. ಈ ಜವಾಬ್ದಾರಿಯನ್ನುರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ ಕೊಟ್ಟಿದ್ದಾರೆ.
ಇತಿಹಾಸ ಪಠ್ಯದ ಅಧ್ಯಾಯ 4.2ರಲ್ಲಿರುವ ಹೊಸ ಧರ್ಮಗಳ ಉದಯ ಪಠ್ಯಭಾಗವನ್ನು ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪರಿಷ್ಕರಣೆಯಾಗಲಿದೆ.
ಇತಿಹಾಸ ಪಠ್ಯದ ಈ ಪಾಠದಲ್ಲಿ ನಿರ್ದಿಷ್ಟ ಸಮುದಾಯಗಳ ಭಾವನೆಗೆ ಧಕ್ಕೆಯಾಗುವ ಅಂಶಗಳಿವೆ ಸಮುದಾಯಗಳ ಭಾವನೆಗೆ ಧಕ್ಕೆಯಾಗುವ ವಿಷಯ ತೆಗೆಯಿರಿ ಎಂದು ಸಚಿವರು ಕಳೆದ ಫೆಬ್ರವರಿ 17ಕ್ಕೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಬರೆದಿದ್ದಾರೆ. ಅಲ್ಲದೆ ಈ ಪಾಠ ಪರಿಷ್ಕರಣೆಯ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡುವಂತೆ ಸಲಹೆ ಮಾಡಿದ್ದಾರೆ.
ಸಚಿವರ ಈ ಪತ್ರವನ್ನಾಧರಿಸಿ ಇಲಾಖೆ ಇದೀಗ ರೋಹಿತ್ ಚಕ್ರತೀರ್ಥ ಸಮಿತಿಗೆ ಈ ಜವಾಬ್ದಾರಿ ನೀಡಿದೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022
