Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಪೊಲೀಸರಿಗೆ ಟೋಪಿ ಹಾಕುವ ಯತ್ನ.
    ಸುದ್ದಿ

    ಬೆಂಗಳೂರು ಪೊಲೀಸರಿಗೆ ಟೋಪಿ ಹಾಕುವ ಯತ್ನ.

    vartha chakraBy vartha chakraAugust 6, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.2- ನಗರ ಪೊಲೀಸ್ ಆಯುಕ್ತರ ಕಚೇರಿಗೆ ನಕಲಿ ಶಿಫಾರಸು ಪತ್ರ ನೀಡಿ ವಂಚಿಸಲು ಯತ್ನಿಸಿರುವ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ನ್ಯಾಷನಲ್ ಕ್ರೈಂ ಇನ್ವೆಸ್ಟಿಗೇಷನ್ ಬ್ಯೂರೋ (ಎನ್‌ಸಿಐಬಿ) ಹೆಸರಿನಲ್ಲಿ ನಕಲಿ ಪತ್ರ ನೀಡಿ ವಂಚನೆಗೆ ಯತ್ನಿಸಿದ ಆರೋಪದ ಮೇರೆಗೆ ಉತ್ತರ ಪ್ರದೇಶ ಮೂಲದ ಸುರೇಶ್ ಕುಮಾರ್ ಶುಕ್ಲಾ (50) ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
    ಕಳೆದ ಜೂನ್ 26ರಂದು ನ್ಯಾಷನಲ್ ಕೈಂ ಇನ್ವೆಸ್ಟಿಗೇಷನ್ ಬ್ಯೂರೋ ಹೆಸರಿನ ಪತ್ರ ಹಿಡಿದು ಬಂದ ಇಬ್ಬರು ಯುವಕರು, ಆಯುಕ್ತರ ಕಚೇರಿಗೆ ಸಲ್ಲಿಸಿದ್ದರು. ಪತ್ರದಲ್ಲಿ ಇಬ್ಬರು ಯುವಕರ ಹೆಸರು ಹಾಗೂ ಅವರನ್ನ ಕ್ರೈಂ ಇನ್‌ಫಾರ್ಮೇಷನ್ ಆಫೀಸರ್ಸ್ ಎಂದು ನಮೂದಿಸಲಾಗಿತ್ತು. ಹಾಗೂ ಇಬ್ಬರಿಗೂ ಸಹ ಬೆಂಗಳೂರಿನಲ್ಲಿ ಅಗತ್ಯ ಸಹಕಾರ ನೀಡುವಂತೆ ಶಿಫಾರಸು ಮಾಡಲಾಗಿತ್ತು. ಪತ್ರದ ಬಗ್ಗೆ ಅನುಮಾನಗೊಂಡಿದ್ದ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಖಚಿತತೆ ಕುರಿತು ತನಿಖೆ ನಡೆಸುವಂತೆ ಸಿಸಿಬಿ ಪೊಲೀಸರಿಗೆ ಸೂಚಿಸಿದ್ದರು.
    ಸಿಸಿಬಿ ಪೊಲೀಸರ ತನಿಖೆ ವೇಳೆ, ಎನ್‌ಸಿಐಬಿ
    ಹೆಸರಿನ ಕಚೇರಿ ಉತ್ತರಪ್ರದೇಶ ರಾಜ್ಯದ ಗೋಂಡಾ ಜಿಲ್ಲೆಯಲ್ಲಿರುವುದು ಹಾಗೂ ಸುರೇಶ್ ಕುಮಾರ್ ಶುಕ್ಲಾ ಎಂಬಾತ ಅದರ ಸಿಇಒ ಎಂಬುದು ಪತ್ತೆಯಾಗಿತ್ತು. ಹೆಚ್ಚಿನ ತನಿಖೆ ಕೈಗೊಂಡ ಸಿಸಿಬಿ ಪೊಲೀಸರಿಗೆ ಎನ್‌ಸಿಐಬಿ ಹೆಸರಿನ ಕಚೇರಿ 2012ರಲ್ಲಿ ಮೈಕ್ರೋ ಸ್ಮಾಲ್ ಆ್ಯಂಡ್ ಮೀಡಿಯಂ ಎಂಟರ್ಪ್ರೈಸಸ್ ಹೆಸರಿನಲ್ಲಿ ಸಂಸ್ಥೆ ನೋಂದಣಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು.
    ಅಲ್ಲದೇ ಎನ್‌ಸಿಐಬಿಯು ಪಡೆದಿದ್ದ ಇಂಟರ್ನಲ್ ಆರ್ಗನೈಸೇಷನ್ ಫಾರ್ ಸ್ಟ್ಯಾಂಡರ್ಡೈಸೇಷನ್ (ಐಎಸ್‌ಒ) ಪ್ರಮಾಣ ಪತ್ರದ ಅವಧಿಯೂ ಸಹ 2015ರಲ್ಲಿ ಮುಕ್ತಾಯ ಗೊಂಡಿದ್ದು, 2025ರವರೆಗೆ ಹೊಂದಿರುವುದಾಗಿ ನಕಲಿ ದಾಖಲೆ ಸೃಷ್ಟಿಸಿರುವ ಸಂಗತಿಯೂ ಸಹ ಪೊಲೀಸರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.
    ಸಿಸಿಬಿ ಅಧಿಕಾರಿಗಳು ನೀಡಿದ ದೂರಿನನ್ವಯ ನಕಲಿ ಐಎಸ್‌ಒ ಸೃಷ್ಟಿಸಿ ತನಿಖಾ ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ವಂಚಿಸಿರುವ ಆರೋಪದಡಿ ಎನ್‌ಸಿಐಬಿ ಹಾಗೂ ಸುರೇಶ್ ಕುಮಾರ್ ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಸೂಚನೆ
    Next Article ಮಂತ್ರಿಗಳಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Koqodz on February 16, 2026 12:49 am

      mcluck ND mcluckcasinogm.com mcluck District of Columbia

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelNak on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • aviator_ovEa on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • LinwoodGah on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.