Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕು ಗೊತ್ತಾ
    Viral

    ಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕು ಗೊತ್ತಾ

    vartha chakraBy vartha chakraMarch 27, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ. 24,:
    ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳಲ್ಲಿ 18,500 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದೆ.
    ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಮತ್ತು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, “ಕಳೆದ ಫೆಬ್ರವರಿಯಲ್ಲಿ ವಿದ್ಯುತ್ ಬೇಡಿಕೆ ಗರಿಷ್ಠ ಬೇಡಿಕೆ ಅವಧಿಯಲ್ಲಿ 18,350 ಮೆಗಾ ವ್ಯಾಟ್ ತಲುಪಿದ್ದರೆ, ಮಾರ್ಚ್ ತಿಂಗಳಲ್ಲಿ 18,395 ಮೆಗಾ ವ್ಯಾಟ್ ಗೆ ಏರಿಕೆಯಾಗಿದೆ. ಮಾ. 7ರಂದು ಗರಿಷ್ಠ ವಿದ್ಯುತ್ ಬೇಡಿಕೆ 18,395 ಮೆಗಾ ವ್ಯಾಟ್ ತಲುಪಿತ್ತು”, ಎಂದು ಹೇಳಿದರು.
    “ಕೋವಿಡ್ ಬಳಿಕ ವಿದ್ಯುತ್ ಬೇಡಿಕೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಗರಿಷ್ಠ ವಿದ್ಯುತ್ ಬೇಡಿಕೆ 2020-21ನೇ ಸಾಲಿನಲ್ಲಿ 14,367 ಮೆಗಾವ್ಯಾಟ್ ಇದ್ದರೆ, 2021-22ರಲ್ಲಿ 14,818 ಮೆ.ವ್ಯಾ., 2022-23ರಲ್ಲಿ 15,828 ಮೆ.ವ್ಯಾ. ಇದ್ದರೆ, 2023-24ರಲ್ಲಿ 17,220 ಮೆ.ವ್ಯಾ. ಇತ್ತು. ಈ ಬಾರಿ 18,385 ಮೆ.ವ್ಯಾ.ಗೆ ಏರಿಕೆಯಾಗಿದೆ. ಅದೇ ರೀತಿ ಪ್ರಸ್ತುತ ಗರಿಷ್ಠ ವಿದ್ಯುತ್ ಬಳಕೆ 357 ಮಿಲಿಯನ್ ಯೂನಿಟ್ ಇದೆ”, ಎಂದು ಮಾಹಿತಿ ನೀಡಿದರು.
    “ಗರಿಷ್ಠ ಬೇಡಿಕೆ ಅವಧಿಯಲ್ಲಿ 2024ರ ಏಪ್ರಿಲ್ ತಿಂಗಳಲ್ಲಿ 16,985 ಮೆ.ವ್ಯಾ. ಬೇಡಿಕೆ ಬಂದಿದ್ದು, ಈ ವರ್ಷ 18,294 ಮೆ.ವ್ಯಾ. ತಲುಪುವ ಅಂದಾಜಿದೆ. ಅಂದರೆ ವಿದ್ಯುತ್ ಬೇಡಿಕೆಯಲ್ಲಿ ಶೇ. 8.1ರಷ್ಟು ಹೆಚ್ಚಳವಾಗಲಿದೆ. ಅದೇ ರೀತಿ 2024ರ ಮೇ ತಿಂಗಳಲ್ಲಿ 16,826 ಮೆ.ವ್ಯಾ. ಬೇಡಿಕೆ ಬಂದಿದ್ದು, ಈ ಬಾರಿ 17,122 ಮೆ.ವ್ಯಾ.ಗೆ ಏರಿಕೆಯಾಗುವ (ಶೇ. 1.8ರಷ್ಟು ಹೆಚ್ಚಳ) ಅದಾಜು ಮಾಡಲಾಗಿದೆ. ಅಲ್ಲದೆ, ವಿದ್ಯುತ್ ಬಳಕೆ ಪ್ರಮಾಣ ಏಪ್ರಿಲ್ ತಿಂಗಳಲ್ಲಿ 352 ಮಿಲಿಯನ್ ಯೂನಿಟ್ ಮತ್ತು ಮೇ ತಿಂಗಳಲ್ಲಿ 331 ಮಿಲಿಯನ್ ಯೂನಿಟ್ ತಲುಪುವ ನಿರೀಕ್ಷೆಯಿದೆ”, ಎಂದು ವಿವರಿಸಿದರು.
    ಬೇಡಿಕೆ ಪೂರೈಸಲು ಸಿದ್ಧತೆ
    “ರಾಜ್ಯದಲ್ಲಿ ಏರಿಕೆಯಾಗಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. 2024ರ ಡಿಸೆಂಬರ್‌ನಿಂದ ಮೇ ತಿಂಗಳವರೆಗೆ ಬೇಡಿಕೆಗೆ ಅನುಗುಣವಾಗಿ ಉತ್ತರ ಪ್ರದೇಶದಿಂದ 100ರಿಂದ 1,400 (ಗರಿಷ್ಠ ಬೇಡಿಕೆ ಅವಧಿಯಲ್ಲಿ) ಮೆಗಾವ್ಯಾಟ್ ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆಯಲಾಗುತ್ತಿದೆ. ಅದೇ ರೀತಿ ಜನವರಿಯಿಂದ ಏಪ್ರಿಲ್ ಅಂತ್ಯದವರೆಗೆ ಪಂಜಾಬ್ ನಿಂದ 200ರಿಂದ 531 ಮೆಗವ್ಯಾಟ್ ವಿದ್ಯುತ್ತನ್ನು ವಿನಿಮಯ ಆಧಾರದ ಮೇಲೆ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ”, ಎಂದರು.
    “ಇದಲ್ಲದೆ, ಮಾ. 1ರಿಂದ 15ರವರೆಗೆ ಕೂಡಗಿಯಲ್ಲಿರುವ ಎನ್ ಟಿಪಿಸಿಯಿಂದ 310 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಪಡೆಯಲಾಗುತ್ತಿತ್ತು. ಮಾ. 15ರಿಂದ ಇನ್ನೂ ಹೆಚ್ಚುವರಿಯಾಗಿ 100 ಮೆ. ವ್ಯಾ.(ಒಟ್ಟು 410 ಮ.ವ್ಯಾ.) ವಿದ್ಯುತ್ ಪಡೆಯಲಾಗಿದೆ. ಜತೆಗೆ ಮಾರ್ಚ್ ತಿಂಗಳಿನಿಂದ ಮೇ ಅಂತ್ಯದವರೆಗೆ ಇಂಧನ ಸುರಕ್ಷತೆ ನೀತಿಯಡಿ ಇತರೆ ರಾಜ್ಯಗಳಿಂದ ಮಾಸಿಕ 1000 ಮೆ.ವಯಾ. ವಿದ್ಯುತ್ ಪಡೆಯಲು ಪಿಸಿಕೆಎಲ್ ಒಪ್ಪಂದ ಮಾಡಿಕೊಂಡಿದೆ”, ಎಂದು ತಿಳಿಸಿದರು.
    “ರೈತರಿಗೆ ದಿನದ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಸಲು ಕ್ರಮ ವಹಿಸಲಾಗಿದೆ. ಅನೇಕ ಕಡೆಗಳಲ್ಲಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸೋಲಾರ್ ವಿದ್ಯುತ್ ಒದಗಿಸಲಾಗುತ್ತಿದೆ. ಕೆಲವೆಡೆ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಬೆಳಗ್ಗೆ ಮತ್ತು ಸಂಜೆ ವೇಳೆ ವಿದ್ಯುತ್ ಪೂರೈಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ (ತೋಟದ ಮನೆಗಳು ಸೇರಿ) ನೋಡಿಕೊಳ್ಳಲು ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಸಿಂಗಲ್ ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ”, ಎಂದು ಹೇಳಿದರು.

    Bengaluru ವಿದ್ಯಾ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಅಯ್ಯೋ ಪಾಪ ಇವನ ಗತಿ ನೋಡಿ
    Next Article ಹಾಲು ದರ ಹೆಚ್ಚಳಕ್ಕೆ ಸಿಎಂ ರೆಡ್ ಸಿಗ್ನಲ್
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    May 29, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://autismwellnesscare.com on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • hhpneghae on ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    • https://steamcellsreview.com on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಂತೆ ಕಂತೆ ನೋಟ್ ಎಸೆದ ಸರ್ಕಾರಿ ನೌಕರ#chiefengineer #odisa #new500rupeenote #goldchain #motivation #crore
    Subscribe