Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್..
    ವಿಶೇಷ ಸುದ್ದಿ

    ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್..

    vartha chakraBy vartha chakraMay 6, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾದ‌ ಕತೆ ಇದು ಸರ್ಕಾರದ ಅಬಕಾರಿ ನೀತಿ ವಿರುದ್ದ ಮದ್ಯ ಮಾರಾಟಗಾರರು ಸಮರ ಸಾರಿದ್ದಾರೆ. ಇದರಿಂದ ಮದ್ಯ ಪ್ರಿಯರು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮದ್ಯ ಮಾರಾಟಗಾರರು ಪಾನೀಯ ನಿಗಮದಿಂದ ಮದ್ಯ ಖರೀದಿಸದೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇದರಿಂದ ಇಂದಿನಿಂದ ರಾಜ್ಯದಲ್ಲಿ ಮದ್ಯ ಮಾರಾಟದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
    ಸರಕಾರ ಹೊಸದಾಗಿ ಆರಂಭ ಮಾಡಿರುವ ಈ ಇಂಡೆಂಟ್ ವ್ಯವಸ್ಥೆ ಬಳಕೆದಾರ ಸ್ನೇಹಿಯಾಗಿಲ್ಲ ಸರ್ವರ್ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಹೀಗಾಗಿ ಆನ್‌ಲೈನ್ ಮೂಲಕ ಮದ್ಯ ಖರೀದಿಯ ವ್ಯವಸ್ಥೆಯ ಬದಲಾಗಿ ಈ ಮೊದಲಿದ್ದ ಮದ್ಯ ಸರಬರಾಜು ವ್ಯವಸ್ಥೆಯನ್ನು ಮುಂದುವರೆಸುವಂತೆ‌ ಅಗ್ರಹಿಸಿದ್ದಾರೆ.
    ಹೊಸ ವ್ಯವಸ್ಥೆಯಲ್ಲಿ ಮಾರಾಟಗಾರರು ವೆಬ್ ಸೈಟಿಗೆ ಹೋಗಿ ಬೇಕಾದ ಮದ್ಯಗಳ ವಿವರವನ್ನು ಅಪ್ಲೋಡ್ ಮಾಡಬೇಕು ಅದರಲ್ಲೂ ರಾತ್ರಿ 9 ಗಂಟೆಯಿಂದ ಬೆಳಗ್ಗೆ 9 ಗಂಟೆಯವರೆಗೆ ಮಾತ್ರ ಅಪ್ಲೋಡ್ ಮಾಡಲು ಅವಕಾಶವಿದೆ. ಇದೇ ಸಂದರ್ಭದಲ್ಲಿ ಸರ್ವರ್ ಕೈಕೊಟ್ಟರೆ ಸಮಸ್ಯೆ ಈ ವ್ಯವಸ್ಥೆಯಿಂದ ಗ್ರಾಹಕರ ಬೇಡಿಕೆಯ ಮದ್ಯಗಳನ್ನು ಪಡೆಯಲು ಸನ್ನದುದಾರರಿಗೆ ಸಾಧ್ಯವಾಗುತ್ತಿಲ್ಲ. ಅಲ್ಲದೇ ಸದ್ಯ ಏಪ್ರಿಲ್-ಮೇ ತಿಂಗಳಲ್ಲಿ ಮದ್ಯಕ್ಕೆ ವಿಪರೀತ ಬೇಡಿಕೆ ಅನೇಕ ಶುಭಕಾರ್ಯಗಳು, ಪಾರ್ಟಿಗಳು, ಸಂಭ್ರಮಾಚರಣೆಗಳು ನಡೆಯುವುದರಿಂದ ಗ್ರಾಹಕರ ಬೇಡಿಕೆ ಹೆಚ್ಚಿದೆ.
    ಹೊಸ ವ್ಯವಸ್ಥೆಯಿಂದ ಗ್ರಾಹಕರ ಬೇಡಿಕೆಗೆ ಸರಬರಾಜು ಆಗುವ ಮದ್ಯಕ್ಕೂ ತಾಳೆಯಾಗುವುದಿಲ್ಲ. ಜನರ ಬೇಡಿಕೆಯ ಮದ್ಯ ನೂತನ ವ್ಯವಸ್ಥೆಯಲ್ಲಿ ಸುಲಭವಾಗಿ ಸಿಗುತ್ತಿಲ್ಲ ರಾತ್ರಿಯಿಡೀ ಕಾದು ಕುಳಿತು ಹೊಸ ಇಂಡೆಂಟ್ ಹಾಕುವ ಸ್ಥಿತಿ ಇದೆ ಎಂದು ಆರೋಪಿಸಿರುವ ಮಾರಾಟಗಾರರು ಹಳೆ ವ್ಯವಸ್ಥೆ ಮುಂದುವರೆಸುವಂತೆ ಆಗ್ರಹಿಸಿ ಪ್ರತಿಭಟನೆ ಕುಡಾ ಮಾಡಿದ್ದರು.
    ಸರ್ಕಾರ‌ ಇದಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಮದ್ಯ‌ ಖರೀದಿ ನಿಲ್ಲಿಸುವ ಹೋರಾಟ ಆರಂಭಿಸುವ ಬೆದರಿಕೆ ಹಾಕಿದ್ದು ಇಂದಿನಿಂದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಮೇ 10ರಿಂದ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ ಬಾಗಲಕೋಟೆ, ಬೆಳಗಾವಿ ,ಬಿಜಾಪುರ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮದ್ಯ ಖರೀದಿಸುವುದಿಲ್ಲ ಎಂದು‌ ಪ್ರಕಟಿಸಿದ್ದಾರೆ.
    ಮೇ 12ರಂದು,ಮೈಸೂರು, ಚಿಕ್ಕಮಗಳೂರು, ಹಾಸನ, ಮಂಡ್ಯ ಮತ್ತು ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮದ್ಯ ಸ್ಥಗಿತವಾಗಲಿದೆ.
    ಮೇ 17ರಂದು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮೇ 19ರಂದು ಬೆಂಗಳೂರು ನಗರ ವಿಭಾಗದ ಪಾನೀಯ ನಿಗಮದ ಡಿಪೋಗಳಲ್ಲಿ ಮದ್ಯ ಖರೀದಿಸದಿರಲು ತೀರ್ಮಾನಿಸಿದ್ದಾರೆ. .

    News
    Share. Facebook Twitter Pinterest LinkedIn Tumblr Email WhatsApp
    Previous Articleದಾಖಲೆ ಕೊಡಿ ಸ್ವಾಮಿ…
    Next Article ಅಭಿವೃದ್ದಿಗೆ ನಮ್ಮ ಜೊತೆ ಕೈ ಜೋಡಿಸಿ -ನಾರಾಯಣಗೌಡ
    vartha chakra
    • Website

    Related Posts

    ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?

    December 8, 2025

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    December 6, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    December 4, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • заказать микроавтобус мерседес on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • KevinDum on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • casino on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe