Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಸೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ.
    Trending

    ಮೈಸೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ.

    vartha chakraBy vartha chakraAugust 9, 20245 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ. 9-
    ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಗೆ ಮೈಸೂರಿನಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆಸುವ ಮೂಲಕ ಕಾಂಗ್ರೆಸ್ ತಿರುಗೇಟು ನೀಡಿದೆ.
    ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಜನಾಂದೋಲನ ಯಾತ್ರೆಯ ಬಹಿರಂಗ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ ಎಲ್ಲ ನಾಯಕರು ಜೆಡಿಎಸ್ ಮತ್ತು ಬಿಜೆಪಿಯ ವಿರುದ್ಧ ವಾಕ್ ಪ್ರಹಾರ ನಡೆಸಿದರು.
    ಸುಮ್ಮನೆ ಕೂರುವುದಿಲ್ಲ:
    ಅಪಾರ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರನ್ನು ನೋಡಿ ಆವೇಶಭರಿತರಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ಈ ನೆಲದ ಶೋಷಿತರು ಶ್ರಮಿಕರು ಬಡವರು ದಲಿತರು ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಪರವಾಗಿದ್ದೇನೆ. ಇದನ್ನು ಸಹಿಸಲಾಗದೆ ನನ್ನ ಪದಚ್ಯುತಿಗೆ ಪ್ರಯತ್ನ ಮಾಡುತ್ತಿದ್ದಾರೆ ಇದನ್ನು ನೋಡಿ ನಾನು ಸುಮ್ಮನೆ ಕೂರುವುದಿಲ್ಲ ಎಂದು ಗುಡುಗಿದರು.
    ಶೋಷಿತರು ದಲಿತರು ಹಿಂದುಳಿದ ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುವಂತೆ ರಾಜ್ಯದ ಜನತೆ ನನಗೆ ಅವಕಾಶ ನೀಡಿದ್ದಾರೆ ಅದನ್ನು ಪೂರ್ಣಗೊಳಿಸುವ ಪ್ರಯತ್ನ ಮಾಡುತ್ತಿದ್ದೇನೆ ಇಂತಹ ಸಮಯದಲ್ಲಿ ನನ್ನನ್ನು ಕೆಳಗಿಳಿಸಲು ಪ್ರಯತ್ನ ಮಾಡಿದರೆ ಅದಕ್ಕೆ ರಾಜ್ಯದ ಜನತೆ ಅವಕಾಶ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
    ಜೆಡಿಎಸ್ ಬಿಜೆಪಿ ನಡೆಸುತ್ತಿರುವ ಕಪಟ ಉದ್ದೇಶದ ಪಾದಯಾತ್ರೆಯಿಂದ ನಾನು ಹೆದರುವುದಿಲ್ಲ ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಭವನ ದುರ್ಬಳಕೆ ಸೇರಿದಂತೆ ಯಾವುದೇ ಷಡ್ಯಂತ್ರ ನಡೆಸಿದರು ಬೆಚ್ಚುವುದಿಲ್ಲ ಇವರ ತಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಸಿದರು.
    ಮನುವಾದಿಗಳು ಮತ್ತು ಜಾತಿವಾದಿಗಳು ಎಂದಿಗೂ ಶೋಷಿತರು ಅಧಿಕಾರ ನಡೆಸುವುದು ಸಹಿಸುವುದಿಲ್ಲ. ಈ ಹಿಂದೆ ದೇವರಾಜ ಅರಸು ಬಂಗಾರಪ್ಪ ಸೇರಿದಂತೆ ಹಲವರನ್ನು ಇವರು ಸಹಿಸಲಿಲ್ಲ ಅದೇ ರೀತಿಯಲ್ಲಿ ಈಗ ತಮ್ಮ ಸರ್ಕಾರವನ್ನು ವಸ್ತ್ರ ಗೊಳಿಸಲು ಪ್ರಯತ್ನ ನಡೆಸುತಿದ್ದಾರೆ ಎಂದು ಆಪಾದಿಸಿದರು.
    ಇಂತಹ ಸಮಯದಲ್ಲಿ ರಾಜ್ಯದ ಜನರೆಲ್ಲರೂ ಒಟ್ಟಾಗಿ ನನ್ನ ಬೆಂಬಲಕ್ಕೆ ನಿಂತಿದ್ದೀರಿ, ಇದಕ್ಕಾಗಿ ನಾನು ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎರಡು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ನೀವು ಅವಕಾಶ ಮಾಡಿಕೊಟ್ಟಿದ್ದೀರಿ ಇದಕ್ಕಾಗಿ ನಾನು ನಿಮಗೆ ಋಣಿಯಾಗಿರುತ್ತೇನೆ ಎಂದು ಹೇಳಿದರು.
    ಎರಡು ಅವಧಿಯ ತಮ್ಮ ಅಧಿಕಾರ ಅವಧಿಯಲ್ಲಿ ಒಂದು ಸಣ್ಣ ಕಪ್ಪು ಚುಕ್ಕೆಯೂ ಬಾರದಂತೆ ಆಡಳಿತ ನಡೆಸಿದ್ದೇನೆ. ಈ ಅವಧಿಯಲ್ಲಿ ಎಂದಿಗೂ ತಮ್ಮ ಪತ್ನಿ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ ನಾನು ಮುಖ್ಯಮಂತ್ರಿಯಾದರೂ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರಲಿಲ್ಲ ನನ್ನ 9 Electionಗಳನ್ನು ಜನರೇ ಹಣ ಹಾಕಿ ಗೆಲ್ಲಿಸಿಕೊಂಡು ಬಂದಿದ್ದಾರೆ ಎಂದು ವಿವರಿಸಿದರು.
    ನಿವೇಶನ ಹಂಚಿಕೆ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ನನ್ನ ಯಾವುದೇ ಪತ್ರ ಇಲ್ಲ ಸಹಿಯೂ ಇಲ್ಲ ಎಂದು ಹೇಳಿದ ಅವರು ನಿವೇಶನ ನೀಡಿದ ಸಮಯದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿತ್ತು ಆದರೆ ಈಗ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
    ರಾಜ್ಯದ ಹಣಕಾಸು ಮಂತ್ರಿಯಾಗಿ 15 ಬಜೆಟ್ ಮಂಡಿಸಿದ್ದೇನೆ ನನಗೆ ಹಣದ ಬಗ್ಗೆ ಮೋಹ ಇಲ್ಲ ಇದ್ದಿದ್ದರೆ ಕೋಟ್ಯಂತರ ರೂಪಾಯಿ ಮಾಡಬಹುದಿತ್ತು ಬಾಡಿಗೆ ಮನೆಯಲ್ಲಿ ಇದ್ದುಕೊಂಡು ಲೋಕಸಭೆ ವಿಧಾನಸಭೆ ಚುನಾವಣೆ ಮಾಡುತ್ತಿರಲಿಲ್ಲ ಮೈಸೂರಿನಲ್ಲಿ ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಿನಲ್ಲಿ ಯಾವುದಾದರೂ ಒಂದು ನಿವೇಶನ ಇದ್ದರೆ ತೋರಿಸಲಿ ಎಂದು ಸವಾಲು ಹಾಕಿದರು.

    Bangalore BJP Congress Karnataka News Politics Trending Varthachakra ಕಾಂಗ್ರೆಸ್ ಕಾಲೇಜು Election ಜೆಡಿಎಸ್ ವಾಲ್ಮೀಕಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಮಾಜಿ ಆಗುವ ಕಾಲ ಸನ್ನಿಹಿತ
    Next Article ಸರ್ಕಾರದ ಜೊತೆಗಿದೆ ಬಂಡೆ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    5 Comments

    1. buy cialis online from uk on June 10, 2025 4:59 am

      More posts like this would make the blogosphere more useful.

      Reply
    2. flagyl and alcohol consumption on June 11, 2025 11:20 pm

      More posts like this would make the online time more useful.

      Reply
    3. 9y5j9 on June 19, 2025 11:51 am

      oral inderal 10mg – buy methotrexate 5mg online cheap methotrexate brand

      Reply
    4. upczx on June 22, 2025 7:57 am

      cheap amoxil without prescription – buy diovan pills for sale ipratropium ca

      Reply
    5. exp7i on June 24, 2025 10:56 am

      cheap azithromycin 500mg – oral zithromax bystolic 20mg usa

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • uwy7t on ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    • fid27 on ಮಂತ್ರಿಗಳ ಹನಿ ಟ್ರ್ಯಾಪ್ ಬಗ್ಗೆ ಉನ್ನತ ತನಿಖೆ
    • RandallcEf on ವಿಧ್ವಂಸಕ್ಕೆ ಸಂಚು – ಹಲವೆಡೆ NIA ಕಾರ್ಯಾಚರಣೆ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe