Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆಯಲ್ಲಿ ಯತ್ನಾಳ್ ಕೋಲಾಹಲ
    Viral

    ವಿಧಾನಸಭೆಯಲ್ಲಿ ಯತ್ನಾಳ್ ಕೋಲಾಹಲ

    vartha chakraBy vartha chakraMarch 20, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಮದರಸಾಗಳಲ್ಲಿ ಭಾರತದ ವಿರೋಧಿ ಪಾಠ ಹೇಳಿ ಕೊಡಲಾಗುತ್ತಿದೆ ಎಂದು ಬಿಜೆಪಿಯ ಹಿರಿಯ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ವಿಧಾನಸಭೆಯಲ್ಲಿ ನೀಡಿದ ಹೇಳಿಕೆ ಆಡಳಿತ ಮತ್ತು ಪ್ರತಿ ಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ಗದ್ದಲ ಕೋಲಾಹಲಕ್ಕೆ ಕಾರಣವಾಯಿತು.
    ಯತ್ನಾಳ್ ಮಾತಿನಿಂದ ಕೆಂಡಾಮಂಡಲರಾದ ಕಾಂಗ್ರೆಸ್ ಸದಸ್ಯ ರಿಜ್ವಾನ್ ಅರ್ಷದ್, ಅವರು ಯತ್ನಾಳ್ ಅವರನ್ನು ಕುರಿತು ದೇಶದ್ರೋಹಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಮದರಸಾಗಳಲ್ಲಿ ಭಾರತ ವಿರೋಧಿ ಪಾಠ ಮಾಡಲಾಗುತ್ತಿದೆ ಎಂದು ಹೇಳಿರುವ ಯತ್ನಾಳ್ ಕ್ಷಮೆ ಕೇಳಬೇಕು ಹಾಗೂ ಕಡತದಿಂದ ಅವರ ಹೇಳಿಕೆಯನ್ನು ತೆಗೆಯಬೇಕು ಎಂದು ಆಗ್ರಹಿಸಿದರು.
    ಬಜೆಟ್ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಯತ್ನಾಳ್, ಈ ‘ಬಜೆಟ್ ನಲ್ಲಿ 9 ಪೇಜ್ ಅಲ್ಪಸಂಖ್ಯಾತರಿಗೆ ಇದೆ. ನೂರು ಉರ್ದು ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲಾಗಿದೆ. ಹಿಂದಿ ಬೋರ್ಡ್ ಬರೆದರೆ ಕನ್ನಡ ಸಂಘಟನೆಗಳು ಅಳಿಸುತ್ತಾರೆ. ಕನ್ನಡ ಕಲಿಯಬೇಕಲ್ವಾ? ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣ ಜೊತೆ ಔಪಚಾರಿಕ ಶಿಕ್ಷಣಕ್ಕೆ ಒತ್ತು ಕೊಡಲು ಅನುದಾನ ಕೊಡಲಾಗಿದೆ‌. ಆದರೆ, ಮದರಸಾಗಳಲ್ಲಿ ಭಾರತದ ವಿರುದ್ಧ ಕಲಿಸಲಾಗುತ್ತಿದೆ’ ಎಂದು ಆರೋಪಿಸಿದರು.
    ಇದಕ್ಕೆ ರಿಜ್ವಾನ್ ಅರ್ಷದ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಏನ್ರೀ ಮಾತನಾಡ್ತಿದ್ದೀರಿ, ಭಾರತದ ವಿರುದ್ಧ ಅಂದರೆ ಏನು. ಬಾಯಿಗೆ ಬಂದ ಹಾಗೆ ಮಾತನಾಡ್ತೀರಾ? ಸುಮ್ಮನೆ ಇರ್ರೀ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಸಮಾಜಕ್ಕೆ ಬೆಂಕಿ ಹಚ್ಚುತ್ತೀರಾ, ನೀವು ಭಾರತದ ವಿರೋಧಿಗಳು,ಹಿರಿಯರು ಎಂದು ಮರ್ಯಾದೆ ಕೊಟ್ಟರೆ ನಿಮಗೆ ಮಾನ ಮರ್ಯಾದೆ ಇಲ್ವಾ? ಯಾವ ಮದಸರಾದಲ್ಲಿ ಭಾರತ ವಿರೋಧಿ ಚಟುವಟಿಕೆ ಕಲಿಸ್ತಾರೆ ಎಂದು ಹೇಳಿ ಸಮಾಜಕ್ಕೆ ಬೆಂಕಿ ಹಚ್ಚುತ್ತೀರಾ, ನೀವು ಭಾರತದ ವಿರೋಧಿಗಳು. ಯತ್ನಾಳ್ ದೇಶದ್ರೋಹಿ ಎಂದು ರಿಜ್ವಾನ್ ಎರಿದ ಧ್ವನಿಯಲ್ಲಿ ದೂರಿದರು.
    ದೇಶದ ಸಾಮರಸ್ಯವನ್ನು ಹಾಳು ಮಾಡುತ್ತಿದ್ದೀರಿ. ದೇಶ ದ್ರೋಹಿಗೆ ಮಾತನಾಡಲು ಏಕೆ ಅವಕಾಶ ಕೊಡ್ತೀರಿ ಎಂದು ಕಿಡಿಕಾರಿ ಕಡತದಿಂದ ತೆಗೆಯುವಂತೆ ಆಗ್ರಹ ಅಲ್ಲದೆ ಅಮಾನತು ಮಾಡುವಂತೆ ಆಗ್ರಹಿಸಿದರು.
    ಜನತಾ ದಳದಲ್ಲಿ ಇದ್ದಾಗ ಯತ್ನಾಳ್ ಟಿಪ್ಪು ಸುಲ್ತಾನ್ ಜಯಂತಿ ಮಾಡಿದ್ದಾರೆ ಎಂದು ಎಂಬಿ ಪಾಟೀಲ್ ಆರೋಪಿಸಿದರು. ಯತ್ನಾಳ್ ಮಾತಿನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಪದ ಇದ್ದರೆ ಕಡತದಿಂದ ತೆಗೆಯುವುದಾಗಿ ಸ್ವೀಕರ್ ತಿಳಿಸಿ ವಿಷಯಕ್ಕೆ ತೆರೆ ಏಳೆದರು.

    Verbattle
    Verbattle
    Verbattle
    ಕಾಂಗ್ರೆಸ್ ಧಾರ್ಮಿಕ ಬಿಜೆಪಿ Bengaluru ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬಿರಿಯಾನಿ ತಿಂದವರು ಕೊಟ್ಟಿದ್ದೇನು..?
    Next Article ಮಂತ್ರಿಗಳ ಹನಿ ಟ್ರ್ಯಾಪ್ ಬಗ್ಗೆ ಉನ್ನತ ತನಿಖೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    1 Comment

    1. Ebgrbz on February 13, 2026 3:37 pm

      betmgm DC https://betmgm-play.com/ mgm betting app promo

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lpbrih on ಭಯ ಬೇಡ ಕೋಳಿ ತಿನ್ನಿ
    • Jjppjc on ‘ Pulwama ದಾಳಿಗೆ ಕೇಂದ್ರ ಸರ್ಕಾರವೇ ಹೊಣೆ ‘ – ಸತ್ಯಪಾಲ್ ಮಾಲಿಕ್ | Satyapal Malik
    • LinwoodGah on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.