Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಿಸರ ಸ್ನೇಹಿ ಇಂಧನ ನೀತಿ ಜಾರಿಗೆ.
    ಅಂತಾರಾಷ್ಟ್ರೀಯ

    ಪರಿಸರ ಸ್ನೇಹಿ ಇಂಧನ ನೀತಿ ಜಾರಿಗೆ.

    vartha chakraBy vartha chakraಅಕ್ಟೋಬರ್ 22, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:
    ರಾಜ್ಯದಲ್ಲಿ ಪರಿಸರಸ್ನೇಹಿ ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮತ್ತು ಉತ್ಪಾದನೆಗೆ ಯಥೇಚ್ಛ ಅವಕಾಶಗಳಿವೆ ಹೀಗಾಗಿ ಈ ವಲಯದ ಉತ್ತೇಜನಕ್ಕಾಗಿ ಇಂಧನ ಮತ್ತು ಕೈಗಾರಿಕೆ ಇಲಾಖೆ, ಜೊತೆಯಾಗಿ ಪರಿಸರಸ್ನೇಹಿ ಇಂಧನ ನೀತಿಯೊಂದನ್ನು ರೂಪಿಸಲು ಮುಂದಾಗಿವೆ
    ಈ ವಲಯದಲ್ಲಿ ಹೂಡಿಕೆ ಹೆಚ್ಚಾಗಿ ಉದ್ಯೋಗ ಸೃಷ್ಟಿಯಾಗಬೇಕಿದೆ‌ ಇದನ್ನು ಬೃಹತ್ ಕೈಗಾರಿಕೆ ಇಲಾಖೆ ಮತ್ತು ಇಂಧನ ಇಲಾಖೆ ಎರಡೂ ಜತೆಗೂಡಿ ಸಾಧಿಸಬೇಕಾಗಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ
    ಈ ದೃಷ್ಟಿಯಿಂದ ಇಂಧನ ಸಚಿವ ಕೆ ಜೆ ಜಾರ್ಜ್ ಜತೆ ಉದ್ಯಮಿಗಳು ಮತ್ತು ಆಸಕ್ತ ಹೂಡಿಕೆದಾರರ ಸಭೆಯನ್ನು ಸದ್ಯದಲ್ಲೇ ಏರ್ಪಡಿಸಲಾಗುವುದು ಎಂದು ಹೇಳಿದ್ದಾರೆ.
    ಕೈಗಾರಿಕಾ ಇಲಾಖೆ ಆಯೋಜಿಸಿದ್ದ ಗ್ರೀನ್ ಎನರ್ಜಿ ಮತ್ತು ಕೋರ್ ಮ್ಯಾನುಫ್ಯಾಕ್ಚರಿಂಗ್ ವಲಯಗಳಿಗೆ ಸಂಬಂಧಪಟ್ಟ ಸರಕಾರದ ವಿಷನ್ ಗ್ರೂಪ್ ಗಳ ಚೊಚ್ಚಲ ಸಭೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
    ಸಭೆಯಲ್ಲಿ ಪಾಲ್ಗೊಂಡಿದ್ದ ಪರಿಣತ ಉದ್ಯಮಿಗಳು ಗ್ರೀನ್ ಎನರ್ಜಿ ಕ್ಷೇತ್ರದಲ್ಲಿರುವ ಸಾಧ್ಯತೆ, ಅಗತ್ಯ, ಬೇಡಿಕೆ, ನೀತಿ ನಿರೂಪಣೆ, ರಿಯಾಯಿತಿ ಇತ್ಯಾದಿಗಳನ್ನು ಕುರಿತು ಸಲಹೆ-ಸೂಚನೆಗಳನ್ನು ನೀಡಿದ್ದಾರೆ. ಈ ವಲಯವನ್ನು ಬೆಳೆಸಬೇಕೆಂಬುದು ಸರಕಾರದ ಮುಕ್ತ ನಿಲುವಾಗಿದೆ. ಮುಂದಿನ ಹೆಜ್ಜೆಯಾಗಿ ಇಂಧನ ಸಚಿವರ ಜತೆ ಮಾತುಕತೆ ನಡೆಸಲಾಗುವುದು. ಏಕೆಂದರೆ, ಇಂಧನ ಇಲಾಖೆ ಇದರಲ್ಲಿ ಪ್ರಮುಖ ಪಾಲು ಹೊಂದಿದೆ ಎಂದು ತಿಳಿಸಿದರು.
    `ಅವಾಡಾ’ ಕಂಪನಿಯ ಸಿಇಒ ಕಿಶೋರ್ ನಾಯರ್ ಮಾತನಾಡಿ, `ಗ್ರೀನ್ ಹೈಡ್ರೋಜನ್ ಉತ್ಪಾದನೆಗಾಗಿ ನಾವು ರಾಜ್ಯ ಸರಕಾರದ ಜತೆ 45 ಸಾವಿರ ಕೋಟಿ ರೂ. ಹೂಡಿಕೆಯ ಒಡಂಬಡಿಕೆ ಮಾಡಿಕೊಂಡಿದ್ದೇವೆ. ಸರಕಾರವು ಸೂಕ್ತ ಪ್ರೋತ್ಸಾಹಕ ಭತ್ಯೆ ಮತ್ತು ನೀತಿ ಜಾರಿಗೆ ತಂದರೆ ನಾವು ಎಲೆಕ್ಟ್ರೋಲೈಟ್ ಮತ್ತು ಬ್ಯಾಟರಿ ಉತ್ಪಾದನೆಯ ಕಡೆಗೆ ಗಮನ ಹರಿಸಬಹುದು. ಜತೆಗೆ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬು ಬೆಳೆಯಲಾಗುತ್ತಿದೆ. ಆದ್ದರಿಂದ, ಪರಿಸರಸ್ನೇಹಿ ಮೆಥನಾಲ್ ಮತ್ತು ಪರಿಸರಸ್ನೇಹಿ ಜಲಜನಕ(ಗ್ರೀನ್ ಹೈಡ್ರೋಜನ್)ದ ಉತ್ಪಾದನೆಗೂ ಆದ್ಯತೆ ಕೊಡಬಹುದು. ರಾಜಾಸ್ಥಾನ ಮತ್ತು ಮಹಾರಾಷ್ಟ್ರ ಈಗಾಗಲೇ ಈ ಸಂಬಂಧ ನೀತಿಗಳನ್ನು ಜಾರಿಗೆ ತಂದಿವೆ’ ಎಂದರು.
    ಇದಕ್ಕೆ ಸ್ಪಂದಿಸಿದ ಸಚಿವರು, `ಉದ್ಯಮಿಗಳು 5-6 ಮಿಲಿಯನ್ ಡಾಲರ್ ಹಣ ಮತ್ತು 5 ಗಿಗಾವ್ಯಾಟ್ ವಿದ್ಯುತ್ತಿನ ಅಗತ್ಯದ ಬಗ್ಗೆ ಗಮನ ಸೆಳೆದಿದ್ದಾರೆ. ಜೊತೆಗೆ, ಇದಕ್ಕೆ ಮಂಗಳೂರು ಬಂದರಿನ ಸುತ್ತಮುತ್ತಲಿನ 20 ಕಿ.ಮೀ. ಪ್ರದೇಶ ಸೂಕ್ತ ತಾಣವಾಗಿದೆ ಎಂದು ತಿಳಿಸಿದ್ದಾರೆ. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಲಿದೆ. ಇದನ್ನು ಈಡೇರಿಸಿದರೆ ಪರಿಸರಸ್ನೇಹಿ ಅಮೋನಿಯಾ ಮತ್ತು ಜಲಜನಕಗಳ ಉತ್ಪಾದನೆ ಸುಗಮವಾಗಲಿದೆ. ಈ ಬಗ್ಗೆ ಸರಕಾರವು ಸಕಾರಾತ್ಮಕ ಭಾವನೆ ಹೊಂದಿದೆ’ ಎಂದು ನುಡಿದರು.
    ಇದಲ್ಲದೆ, ರಾಜ್ಯದಲ್ಲಿ `ಗ್ರೀನ್ ಇಂಡಸ್ಟ್ರಿಯಲ್ ಪಾರ್ಕುಗಳನ್ನು ಸ್ಥಾಪಿಸಿದರೆ ಈ ವಲಯದಲ್ಲಿ ಹೂಡಿಕೆಯನ್ನು ಆಕರ್ಷಿಸಬಹುದು ಎನ್ನುವ ಸಲಹೆಯೂ ಬಂದಿದೆ. ನೆರೆಯ ಆಂಧ್ರಪ್ರದೇಶದಲ್ಲಿ ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪರಿಣಾಮಕಾರಿ ನೀತಿ ಇರುವುದು ಗೊತ್ತಾಗಿದೆ. ಇಂತಹ ಕೈಗಾರಿಕೆಗಳಿಗೆ ನೀರು ಮತ್ತು ವಿದ್ಯುತ್ತಿನ ಪೂರೈಕೆ ಸುಗಮವಾಗಿ ಇರಬೇಕಾಗುತ್ತದೆ. ಇದಕ್ಕಾಗಿಯೇ ರಾಜ್ಯ ಸರಕಾರವು ಕೈಗಾರಿಕಾ ಪ್ರದೇಶಗಳಿಗೆ ನದೀಮೂಲಗಳಿಂದ ಅಗತ್ಯ ಪ್ರಮಾಣದ ನೀರನ್ನು ಪೂರೈಸುವ ಉಪಕ್ರಮವನ್ನು ಈಗಾಗಲೇ ಘೋಷಿಸಿದೆ. ಪರಿಸರಸ್ನೇಹಿ ಜಲಜನಕ ಮತ್ತು ಸೌರಕೋಶ ಉತ್ಪಾದನಾ ಘಟಕಗಳಿಗೆ ಈಗಾಗಲೇ ಜಿಎಸ್ಟಿಯಲ್ಲಿ ಸಾಕಷ್ಟು ರಿಯಾಯಿತಿಗಳನ್ನು ಕೊಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

    Bangalore Congress Department of Energy and Industry Environmentally friendly fuel Government Green Energy Karnataka mangalore mb patil News Vision Group ಕಾಂಗ್ರೆಸ್ ಬೆಂಗಳೂರು ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಾಂಗ್ಲಾದೇಶಿಯರ ಅಡಗುದಾಣವಾದ ಕರ್ನಾಟಕ.
    Next Article ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    vartha chakra
    • Website

    Related Posts

    ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಬೇಡಿ.

    ಮೇ 28, 2025

    ಯೋಧರಿಗೆ DCM ಬಂಪರ್ ಕೊಡುಗೆ .

    ಮೇ 28, 2025

    ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.

    ಮೇ 28, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಬೇಡಿ.

    ಯೋಧರಿಗೆ DCM ಬಂಪರ್ ಕೊಡುಗೆ .

    ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.

    ಬಿಜೆಪಿಗೆ ಗುಡ್ ಬೈ ಹೇಳಲು 12 ಶಾಸಕರು ರೆಡಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamlew ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • Curtisdeace ರಲ್ಲಿ  ಮಟನ್ ಕರಿ ಮತ್ತು ಪಾವ್ ಸಚಿನ್ ಟೆನ್ಡೂಲ್ಕರ್ ಗೆ ಬಹಳ ಇಷ್ಟ
    • Curtisdeace ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಬೇಡಿ.

    ಮೇ 28, 2025

    ಯೋಧರಿಗೆ DCM ಬಂಪರ್ ಕೊಡುಗೆ .

    ಮೇ 28, 2025

    ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.

    ಮೇ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಶಿವಣ್ಣನ ಮುಂದೆಯೇ ಕನ್ನಡಿಗರನ್ನು ಕೆಣಕಿದ ಕಮಲ್ ಹಾಸನ್. #kannada #kamalhassan #audiolaunch #shivurajkumar
    Subscribe