Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಮಾಸ್ಟರ್ ಪ್ಲಾನ್ | Eshwar Khandre
    Viral

    ಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಮಾಸ್ಟರ್ ಪ್ಲಾನ್ | Eshwar Khandre

    vartha chakraBy vartha chakraಜನವರಿ 2, 202481 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.2: ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ.ಇದನ್ನು ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು ಮೊದಲಿಗೆ ದೊಡ್ಡ ಪ್ರಮಾಣದ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) ತಿಳಿಸಿದ್ದಾರೆ.
    ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೊದಲಿಗೆ ದೊಡ್ಡ ಪ್ರಮಾಣದ ಒತ್ತವರಿಯ ಪಟ್ಟಿ ಮಾಡಿಕೊಂಡು ಅದನ್ನು ತೆರವುಗೊಳಿಸುವಂತೆ ಇಲಾಖೆಯ ಉನ್ನತಾಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.

    ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕಾಯಿದೆ ಜಾರಿಗೊಳಿಸಿವೆ. ಆದರೂ ಸುಮಾರು 2 ಲಕ್ಷ ಎಕರೆ ಅರಣ್ಯಭೂಮಿ ಒತ್ತುವರಿ ಆಗಿದೆ ಎಂಬ ವರದಿಗಳಿದ್ದು ಇದು ಆಘಾತಕಾರಿ ವಿಷಯವಾಗಿದೆ ಎಂದರು.
    ಅರಣ್ಯ ಭೂಮಿಯನ್ನು ಯಾರೇ ಒತ್ತುವರಿ ಮಾಡಿದರೂ ಅದು ಅಪರಾಧ.ಆದರೆ,1980ಕ್ಕೆ ಮುನ್ನ 3 ಎಕರೆಗಿಂತ ಕಡಿಮೆ ಭೂಮಿ ಒತ್ತುವರಿ ಮಾಡಿ ಮನೆ ಕಟ್ಟಿರುವ ಮತ್ತು ಉಳಿಮೆ ಮಾಡುತ್ತಿರುವ ಬಡ ರೈತರಿಗೆ ಕಿರುಕುಳ ನೀಡದೆ, ದೊಡ್ಡ ಒತ್ತುವರಿಗಳನ್ನು ಮೊದಲು ತೆರವು ಮಾಡಿಸಲು ಕ್ರಮ ವಹಿಸುವಂತೆಯೂ ಆದೇಶಿಸಿರುವುದಾಗಿ ಹೇಳಿದರು.
    ಅರಣ್ಯ ಒತ್ತುವರಿ ಕುರಿತಂತೆ ವಲಯವಾರು, ವಿಭಾಗವಾರು, ವೃತ್ತವಾರು ಮಾಹಿತಿ ಕೈಸೇರಿದ ಬಳಿಕ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಅರಣ್ಯದಲ್ಲಿ ವನ್ಯ ಮೃಗಗಳ ಸಂಖ್ಯೆ ಹೆಚ್ಚಳವಾಗುತ್ತಿದೆ, ಆದರೆ ಅದಕ್ಕೆ ಅನುಗುಣವಾಗಿ ವನ ಪ್ರದೇಶ ಹೆಚ್ಚಾಗುತ್ತಿಲ್ಲ. ಹೀಗಾಗಿ ಮಾನವ ಮತ್ತು ವನ್ಯ ಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಅರಣ್ಯ ಒತ್ತುವರಿ ತೆರವು ಅತ್ಯಗತ್ಯ ಕ್ರಮವಾಗಿದೆ ಎಂದು ಪ್ರತಿಪಾದಿಸಿದರು.

    ತಾವು ಸಚಿವರಾದ ಬಳಿಕ 2 ಸಾವಿರ ಎಕರೆಗೂ ಹೆಚ್ಚು ಅರಣ್ಯ ಒತ್ತುವರಿ ತೆರವು ಮಾಡಲಾಗಿದೆ ಬೆಂಗಳೂರು ಸೇರಿದಂತೆ ರಾಜ್ಯದ ಪಟ್ಟಣ, ನಗರ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಬೆಲೆಬಾಳುವ ಅರಣ್ಯ ಭೂಮಿಯ ಒತ್ತುವರಿ ತೆರವಿಗೆ ಮೊದಲ ಆದ್ಯತೆ ನೀಡುವುದು ಅಗತ್ಯವಿದೆ ಎಂದು ಹೇಳಿದರು.
    ಈಗಾಗಲೇ ಬೆಂಗಳೂರು ಹೊರವಲಯದ ಕೊತ್ತನೂರಿನಲ್ಲಿ 400ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯನ್ನು ರಕ್ಷಿಸಲಾಗಿದ್ದು, ಇದನ್ನು ಕಂದಾಯ ಭೂಮಿ ಎಂದು ಪರಿವರ್ತಿಸಿದ್ದ ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ ಎಂದು ತಿಳಿಸಿದರು.

    ಕಾಡಿನಂಚಿನಲ್ಲಿರುವ ಹಲವು ದಶಕಗಳ ಬೆಲೆಬಾಳುವ ವೃಕ್ಷಗಳನ್ನು ಕಡಿದು ಪಟ್ಟಾಭೂಮಿ ವಿಸ್ತರಣೆ ಮಾಡುವುದು ಕೂಡ ಶಿಕ್ಷಾರ್ಹ ಅಪರಾಧ ಈ ಬಗ್ಗೆ ಅರಣ್ಯದಂಚಿನ ಜನರಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
    ಅರಣ್ಯ ಸಂರಕ್ಷಣಾ ಕಾಯಿದೆ 1980ರ ಜಾರಿಗೂ ಮುನ್ನ ಅರಣ್ಯ ಭೂಮಿ ಒತ್ತುವರಿ ಮಾಡಿ ನಿಗದಿತ ಕಾಲಮಿತಿಯೊಳಗೆ ಅರ್ಜಿ ಸಲ್ಲಿಸಿರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಬೇಕಿದೆ. ಸುಮಾರು 13,155 ಪ್ರಕರಣಗಳಿಗೆ ಸಂಬಂಧಿಸಿದಂತೆ 31,864 ಎಕರೆ ಭೂಮಿ ಇದ್ದು, ಈ ಪೈಕಿ ಸುಮಾರು 7 ಸಾವಿರ ಪ್ರಕರಣಗಳಲ್ಲಿ ಪಟ್ಟಾ ಕೊಡಲು ನಿರ್ಧರಿಸಲಾಗಿದೆ. ಈ ಸಂಬಂಧ ಬಾಕಿ ಇರುವ ಪ್ರಕರಣಗಳನ್ನು ಆದಷ್ಟು ಶೀಘ್ರ ವಿಲೇವಾರಿ ಮಾಡುವಂತೆ ಜಿಲ್ಲಾ ನೋಡಲ್ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.

    Bangalore Congress Eshwar Khandre Government Karnataka News Politics Trending war
    Share. Facebook Twitter Pinterest LinkedIn Tumblr Email WhatsApp
    Previous Article10 ರಿಂದ 15 ಶಾಸಕರು ಕಾಂಗ್ರೆಸ್ ಸೇರುತ್ತಾರಂತೆ | Congress
    Next Article ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ | Belagavi
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WayneseinA ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • FobertCaR ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • 1win suretli qeydiyyat ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe