Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಿಲ್ಲೆಗೊಂದು ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ | Critical Care Block
    Viral

    ಜಿಲ್ಲೆಗೊಂದು ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ | Critical Care Block

    vartha chakraBy vartha chakraಫೆಬ್ರವರಿ 16, 202427 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.16- ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ನೀಡಲು ಸರ್ಕಾರ ಒತ್ತು ನೀಡಿದ್ದು, ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು (Critical Care Block) ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ ಘೋಷಿಸಿದ್ದಾರೆ.
    ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು. ಮುಂದಿನ ಸಾಲಿನಲ್ಲಿ ಒಳಿದ ಒಂಭತ್ತು ಜಿಲ್ಲೆಗಳಲ್ಲೂ ಸಹ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.

    ಆನೇಕಲ್, ನೆಲಮಂಗಲ, ಹೊಸಕೋಟೆ, ಖಾನಪುರ, ಶಿರಹಟ್ಟಿ, ಎಳಂದೂರು ತಾಲೂಕುಗಳಲ್ಲಿ 100 ತಾಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಶಿಥಿಲಾವಸ್ಥೆಯಲ್ಲಿರುವ ಆರೋಗ್ಯ ಕೇಂದ್ರವನ್ನು ಉನ್ನತೀಕರಣಕ್ಕಾಗಿ 75 ಕೋಟಿ ರೂ. ಅನುದಾನ ನೀಡಲಾಗುವುದು.
    ಗ್ರಾಮೀಣ ಜನರಿಗೆ 24 ಗಂಟೆಯೂ ತುರ್ತು ಆರೋಗ್ಯ ಸೇವೆ ನೀಡಲು ಮುಂದಿನ ಎರಡು ವರ್ಷದಲ್ಲಿ 25 ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದರು. ಕಲ್ಯಾಣ ಕರ್ನಾಟಕ ಭಾಗದ 46 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ. ವೆಚ್ಚದಲ್ಲಿ ಕೆಕೆಆರ್‍ ಬಿ ಮೂಲಕ ಸ್ಥಳ ಸ್ಥಾಪಿಸಲಾಗುವುದು.

    ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6493 ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳನ್ನು ಅಗ್ನಿ ಅವಘಡದಿಂದ ರಕ್ಷಿಸಲು 13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಶಾಮಕ ವ್ಯವಸ್ಥೆಯನ್ನು 6 ಕೋಟಿ ರೂ. ವೆಚ್ಚದಲ್ಲಿ ಅಳವಡಿಸಲಾಗುವುದು. 2025ರೊಳಗೆ ಕ್ಷಯ ರೋಗ ನಿರ್ಮೂಲನೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 87 ಟ್ರೂ-ನಾಟ್ ಮಿಷನ್‍ಗಳನ್ನು ಖರೀದಿಸಲಾಗುವುದು ಎಂದರು.
    ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಸ್ಥಾಪಿಸಿ ಬಡವರಿಗೆ ಕೈಗೆಟುಕುವ ದರದಲ್ಲಿ ಪ್ರಯೋಗಾಲಯ ಸೇವೆಯನ್ನು ನೀಡಲಾಗುವುದು ಎಂದರು. ಹೀಗೆ ಹಲವು ಯೋಜನೆಗಳನ್ನು ರೂಪಿಸುವ ಮೂಲಕ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆಯನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು.

    Congress Government ITI Karnataka News ಆರೋಗ್ಯ ಉಡುಪಿ ಧಾರವಾಡ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗ್ಯಾರಂಟಿಗಳಿಗೆ ಬೆನ್ನೆಲುಬಾದ ಬಜೆಟ್ | Karnataka Budget 2024
    Next Article ಸತ್ಯ ತಪಾಸಣಾ ತಂಡಗಳು ರಚನೆಯಾಗಲಿವೆ | Fact Check Unit
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • more helpful hints ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Lucky Pari ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • narkologiyavladimirvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe