Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊರಕೆ ಬಿಟ್ಟು ಕಮಲ ಹಿಡಿದ ಭಾಸ್ಕರ್ ರಾವ್
    ಸುದ್ದಿ

    ಪೊರಕೆ ಬಿಟ್ಟು ಕಮಲ ಹಿಡಿದ ಭಾಸ್ಕರ್ ರಾವ್

    vartha chakraBy vartha chakraಮಾರ್ಚ್ 1, 2023Updated:ಮಾರ್ಚ್ 1, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.1- ರಾಜಕೀಯ ಸೇರಿ‌ ಜನ ಸೇವೆ ಮಾಡಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿ ಅಲ್ಲಿ ತೀವ್ರ ಕಡೆಗಣನೆ ಮತ್ತು ಅಪಮಾನಕ್ಕೊಳಗಾಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗುವ ಮೂಲಕ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.
    ಬಿಜೆಪಿ ರಾಜ್ಯ ಕಚೇರಿಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಭಾಸ್ಕರ್ ರಾವ್ ಅವರೊಂದಿಗೆ ಅವರ ಬೆಂಬಲಿಗರಾದ ಆಮ್‍ಆದ್ಮಿ ಪಕ್ಷದ ರಾಜ್ಯ ಸಹಕಾರ್ಯದರ್ಶಿ ವಿಜಯ್ ಶಾಸ್ತ್ರಿಮಠ್, ಮಾಜಿ ಮುಖ್ಯವಕ್ತಾರ ಶರತ್ ಖಾದ್ರಿ, ಸಮಾಜಸೇವಕ ಶಿವಶರ್ಮ, ಬಸವನಗುಡಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಆರ್ಯನ್, ಅಂಜನ್ರಾವ್, ಬೆಂಗಳೂರು ಮಹಾನಗರದ ಪ್ರಧಾನ ಕಾರ್ಯದರ್ಶಿ ದಿಲೀಪ್ ಗೌಡ ಅವರು ಆಪ್ ತೊರೆದು ಬಿಜೆಪಿ ಸೇರಿದರು.
    ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದ ಭಾಸ್ಕರ ರಾವ್ ಅವರು ಮಾತನಾಡಿ, ಆಮ್ ಆದ್ಮಿ ಪಕ್ಷದಲ್ಲಿ ಒಂದು ವರ್ಷ ಇದ್ದರೂ ಅದು ರಾಜ್ಯದಲ್ಲಿ ಬೆಳೆಯುವ ಸಾಧ್ಯತೆ ಕಡಿಮೆ ಅನಿಸಿತು. ಆ ಪಕ್ಷದ ರಾಜ್ಯ ನಾಯಕರಿಗೆ ರಾಜ್ಯದಲ್ಲಿ ಪಕ್ಷ ಬೆಳೆಯುವುದಕ್ಕಿಂತ ಸ್ವಾರ್ಥ ಮುಖ್ಯವಾಗಿದೆ. ರಾಜ್ಯದಲ್ಲಿ ಇನ್ನೂ ಕಣ್ಣು ಬಿಡುತ್ತಿರುವ ಪಕ್ಷವಾದರೂ ರಾಜ್ಯ ನಾಯಕರು ಈಗಾಗಲೇ ಸರ್ಕಾರ ರಚಿಸಿದ್ದೇವೆ ಎಂಬಂತೆ ವರ್ತಿಸುತ್ತಿದ್ದಾರೆ,ತತ್ವ ಸಿದ್ದಾಂತಗಳ ಬದಲಿಗೆ ಸ್ವಾರ್ಥ ಮೈಗೂಡಿಸಿಕೊಂಡ ಪಕ್ಷ ಬೆಳೆಯುವುದಿಲ್ಲ ಎಂಬುದು ಮನವರಿಕೆಯಾಯಿತು ಹೀಗಾಗಿ ಆ ಪಕ್ಷ ತೊರೆದಿದ್ದೇನೆ ಎಂದು ಹೇಳಿದರು
    ಬಿಜೆಪಿ ಸನಾತನ ಧರ್ಮಕ್ಕೆ ಸೇರಿದ ಪಕ್ಷವಾಗಿದ್ದು, ರಾಷ್ಟ್ರೀಯತೆ ಮೈಗೂಡಿಸಿಕೊಂಡ ಪಕ್ಷವಾಗಿದೆ.
    ನಾನು ಬಾಲ್ಯಕಾಲದಿಂದ ಸನಾತನ ಧರ್ಮ, ರಾಷ್ಟ್ರೀಯತೆಗೆ ಬದ್ಧನಾಗಿದ್ದವ ಹೀಗಾಗಿ ಈ ಪಕ್ಷಕ್ಕೆ
    ಸೇರಿದ್ದೇನೆ ಎಂದು ತಿಳಿಸಿದರು.
    ಮೋದಿಜಿ, ಅಮಿತ್ ಶಾ, ಜೆ.ಪಿ.ನಡ್ಡಾ, ಬಿ.ಎಲ್.ಸಂತೋಷ್, ಯಡಿಯೂರಪ್ಪ, ಕಟೀಲ್, ಪ್ರಹ್ಲಾದ್ ಜೋಶಿ ಅವರ ಪಕ್ಷದ ಜೊತೆ ಇರಲು ಬಂದಿದ್ದೇನೆ. ಪಕ್ಷದ ಕಾರ್ಯಕ್ರಮಗಳಿಗೆ ಸಹಕರಿಸುವೆ. ಅಖಂಡ ಭಾರತವನ್ನು ಗಟ್ಟಿಯಾಗಿ ಇಡಲು ಇದೊಂದೇ ಪಕ್ಷದಿಂದ ಸಾಧ್ಯ ಎಂದರು.ಪಕ್ಷ ಕಟ್ಟುವಾಗ ಯುವಕರು, ಮಹಿಳೆಯರಿಗೆ ಆದ್ಯತೆ ಕೊಡುವುದು ಖುಷಿ ಕೊಟ್ಟಿದೆ. ಪಕ್ಷದ ಮುಖಂಡರ ಮಾರ್ಗದರ್ಶನದಂತೆ ಜವಾಬ್ದಾರಿ ವಹಿಸಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
    ಇವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಮಾತನಾಡಿ,
    ರಾಜ್ಯದಲ್ಲಿ ಬಿಜೆಪಿ ಅಲೆ ಇದೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂಬ ನಿರೀಕ್ಷೆ ಮತ್ತು ಜನಬೆಂಬಲ ಕಾಣುತ್ತಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
    ದಕ್ಷ ಪೊಲೀಸ್ ಅಧಿಕಾರಿಯಾಗಿದ್ದ ಭಾಸ್ಕರ್ ರಾವ್ ಅವರು ನಿವೃತ್ತಿ ಬಳಿಕ ಆಪ್ ಸೇರಿ ಇದೀಗ ಕಲ್ಯಾಣ ಕರ್ನಾಟಕದ ಉದ್ದೇಶದಿಂದ ಪಕ್ಷ ಸೇರಿದ್ದಾರೆ. ಪಕ್ಷ ಗಟ್ಟಿ ಮಾಡಿ ರಾಜಕಾರಣದ ಮೂಲಕ ಸೇವೆ ಮಾಡಲು ಬಂದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು.

    ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಉತ್ಸವಮೂರ್ತಿ ಯಡಿಯೂರಪ್ಪ ವಿಸರ್ಜನೆಗೊಳ್ಳಲಿದ್ದಾರೆ!
    Next Article ಲಂಚ ಪಡೆಯುತ್ತಿದ್ದ ಶಾಸಕರ ಮಗ ಅರೆಸ್ಟ್
    vartha chakra
    • Website

    Related Posts

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025

    1 ಟಿಪ್ಪಣಿ

    1. instagram story viewer _diKl on ಅಕ್ಟೋಬರ್ 6, 2024 11:54 ಫೂರ್ವಾಹ್ನ

      instagram profile viewer [url=https://www.anonstoriesview.com]https://www.anonstoriesview.com[/url] .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://arecahotel.vn/betvisa-118/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Timothyfloor ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Richardhew ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe