Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಸೂರಲ್ಲಿ ಮರ್ಯಾದಾ ಹತ್ಯೆ: ಅನ್ಯ ಜಾತಿಯವನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ!
    ಸುದ್ದಿ

    ಮೈಸೂರಲ್ಲಿ ಮರ್ಯಾದಾ ಹತ್ಯೆ: ಅನ್ಯ ಜಾತಿಯವನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ!

    vartha chakraBy vartha chakraಜೂನ್ 8, 2022Updated:ಜೂನ್ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಪ್ರೀತಿಯ ವಿಚಾರಕ್ಕೆ ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಅನ್ಯ ಸಮುದಾಯದ ಯುವಕನನ್ನು ಪ್ರೀತಿಸಿದ ಮಗಳನ್ನು ತಂದೆಯೇ ಕೊಲೆ ಮಾಡಿರುವ ಘಟನೆ ನಡೆದಿದೆ.
    ಮೈಸೂರು ಜಿಲ್ಲೆಯ ಪಿರಿಯಾಣಪಟ್ಟಣದ ಕಗ್ಗುಂಡಿ ಗ್ರಾಮದ ಸುರೇಶ್ ಮತ್ತು ಬೇಬಿ ದಂಪತಿ ಪುತ್ರಿ ಶಾಲಿನಿ (17) ಕೊಲೆಯಾಗಿದೆ. ಶಾಲಿನಿ ಪಿಯುಸಿ ಓದುತ್ತಿದ್ದ ಸಂದರ್ಭದಲ್ಲಿ ಪಕ್ಕದ ಗ್ರಾಮದ ಅನ್ಯ ಸಮುದಾಯದ ಯುವಕನ ಜೊತೆಗೆ ಪ್ರೇಮಾಂಕುರವಾಗಿತ್ತು. ಇದಕ್ಕೆ ಈಕೆಯ ಪೋಷಕರು ಆಕ್ಷೇಪಿಸಿದ್ದರು.ಆದರೆ ಯುವತಿ ಆತನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು ಎನ್ನಲಾಗಿದೆ. ಜೂನ್ 6 ರಂದು ರಾತ್ರಿ ಶಾಲಿನಿ ತಾನು ಪ್ರಿಯಕರನ ಮನೆಗೆ ಹೋಗುವುದಾಗಿ ಬಾಗಿಲು ತೆಗೆದು ಹೋಗುತ್ತಿದ್ದ ವೇಳೆ ತಡೆದ ಅಪ್ಪ ಸುರೇಶ್ ಆಕೆ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ 6.30 ಕ್ಕೆ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಇದಕ್ಕೆ ಮುನ್ನ ಶಾಲಿನಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಹೋದಾಗ ತಂದೆ ಸುರೇಶ್ ಮತ್ತು ಪ್ರೇಮಿ ಮಂಜು ನಡುವೆ ಗಲಾಟೆ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು. ಶಾಲಿನಿಯಿಂದ ದೂರು ಕೊಡಿಸಲು ಮುಂದಾದ ವೇಳೆಯಲ್ಲಿ ಶಾಲಿನಿ ತನ್ನ ತಂದೆ – ತಾಯಿಗೆ ಉಲ್ಟಾ ಹೊಡೆದು, ತಂದೆ – ತಾಯಿ ನನಗೆ ತೊಂದರೆ ನೀಡುತ್ತಿದ್ದಾರೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ.ಈ ಬಗ್ಗೆ ಸಿಡಿಪಿಒ ಕಚೇರಿಯಲ್ಲಿ ಕೌನ್ಸಿಲಿಂಗ್ ನಡೆಸಿ ತಾನು ತಂದೆ ತಾಯಿಯೊಂದಿಗೆ ಹೋಗುವುದಿಲ್ಲ ತಿಳಿಸಿದ್ದಳು. ಇದರಿಂದ ಅಧಿಕಾರಿಗಳು ಯುವತಿಯನ್ನು ಮೈಸೂರಿನ ಬಾಲ ಮಂದಿರಕ್ಕೆ ಕಳುಹಿಸಿದ್ದರು.ಕಳೆದ ಮೇ.18 ರಂದು ತಂದೆ ತಾಯಿ ಬಾಲಮಂದಿರಕ್ಕೆ ಹೋಗಿ ಮಗಳ ಮನ ಒಲಿಸಿ ಮಗಳ ಭವಿಷ್ಯದ ದೃಷ್ಟಿಯಿಂದ ಒಪ್ಪಿಗೆ ಪತ್ರ ಬರೆದುಕೊಟ್ಟು ಮನೆಗೆ ಕರೆದುಕೊಂಡು ಬಂದಿದ್ದರು. ಬಂದ ನಂತರ ಹುಡುಗನ ಜೊತೆಗೆ ಹೋಗದಂತೆ ಅನೇಕ ದಿನಗಳು ಬುದ್ದಿವಾದ ಹೇಳಿದರೂ, ಕೇಳದ ಶಾಲಿನಿ ಪ್ರೇಮಿಯೊಂದಿಗೆ ಸಂಪರ್ಕ ಮುಂದುವರಿಸಿದ್ದಾಳೆ.
    ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಸುರೇಶ್ ದಂಪತಿಗಳಿಗೆ ಇನ್ನೂ ಇಬ್ಬರು ಮಕ್ಕಳಿದ್ದಾರೆ ತಂದೆ, ತಾಯಿ ಜೈಲು ಪಾಲಾದ ಕಾರಣ ಅವರೀಗ ಅನಾಥರಾಗಿದ್ದಾರೆ.

    crime ಅಪರಾಧ ಸುದ್ದಿ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಹೈಟೆಕ್ ವಂಚಕ
    Next Article Judge ಗೆ ಬೆದರಿಕೆ
    vartha chakra
    • Website

    Related Posts

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025

    ಸುರ್ಜೇವಾಲಾ ಬದಲಾವಣೆಗೆ ತಂತ್ರ.

    ಜುಲೈ 11, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • FrankCak ರಲ್ಲಿ ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    • hge0c ರಲ್ಲಿ ಸೋಷಿಯಲ್ ಮೀಡಿಯಾದಲ್ಲಿ Roopa – Sindhuri ಗೆ ಪ್ರಶ್ನೆ
    • Connietaups ರಲ್ಲಿ ಕರ್ನಾಟಕದಲ್ಲೂ ಕಾಟನ್ ಕ್ಯಾಂಡಿ BAN | Cotton Candy
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe