Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕ ಬಂದ್ ಯಾಕೆ?-FKCCI ಪ್ರಶ್ನೆ
    ಬೆಂಗಳೂರು

    ಕರ್ನಾಟಕ ಬಂದ್ ಯಾಕೆ?-FKCCI ಪ್ರಶ್ನೆ

    vartha chakraBy vartha chakraಜೂನ್ 20, 2023Updated:ಜೂನ್ 20, 202313 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCCI) ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ.
    ಆದರೆ ಈ ಬಂದ್ ಕರೆಗೆ ವಿರೋಧ ವ್ಯಕ್ತಪಡಿಸಿರುವ ಎಫ್ ಕೆ.ಸಿ.ಸಿ.ಐ. ಇದರಿಂದ ಯಾವುದೇ ಪ್ರಯೋಜನವಿಲ್ಲ.ಬಂದ್ ಗೆ ನಮ್ಮ ಬೆಂಬಲವಿಲ್ಲ ಎಂದು ಹೇಳಿದೆ.
    ಎಫ್ ಕೆ.ಸಿ.ಸಿ.ಐ. ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ದರ ಹೆಚ್ಚಳದಲ್ಲಿ ಸರ್ಕಾರದ ಪಾತ್ರವಿಲ್ಲ. ಇದು ಕೆಇಆರ್ ಸಿ ಆದೇಶ,ಇದರ ಬಗ್ಗೆ ಕಾನೂನಾತ್ಮಕ ಹೋರಾಟ ಮಾಡಬೇಕು ಅದನ್ನು ಎಫ್ ಕೆ.ಸಿ.ಸಿ.ಐ. ಮಾಡಲಿದೆ ಎಂದು ತಿಳಿಸಿದೆ.
    ಇದರ ನಡುವೆ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCCI)ಯ ಬಂದ್ ಕರೆಯ ಹಿಂದಿರುವ ಅಸಲಿ‌ ಕಾರಣವೊಂದಿದೆ.ಅದೇನು ಎಂದು ಗೊತ್ತಾಗಬೇಕಾದರೆ ಈ ಸ್ಟೋರಿ ನೋಡಿ.
    ಕೆ.ಇ.ಆರ್.ಸಿ.ಆದೇಶದಂತೆ ಈಗಾಗಲೇ ಜಾರಿಯಾಗಿರುವ ವಿದ್ಯುತ್ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿದ್ದ ಕೆಸಿಸಿಐ ಇದಕ್ಕಾಗಿ ಜೂ.10‌ ರಂದು ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿತ್ತು.ಇದೀಗ ಅದರಂತೆ ಬಂದ್ ಕರೆ ನೀಡಿದೆ.
    ಬಂದ್ ಕರೆಯ ಹಿಂದೆ ದರ ಹೆಚ್ಚಳ ಎಂಬ ವಿಷಯ ಇದ್ದರೂ ಅದರ ಅಸಲಿಯತ್ತು ಬೇರೆಯೇ ಆಗಿದೆ.
    ದರ ಹೆಚ್ಚಳದ ವಿಷಯವಾಗಿ ಸರ್ಕಾರದ ಜತೆ ಚರ್ಚೆ ನಡೆಸಿ ಮನವರಿಕೆ ಮಾಡಿಕೊಡುವ ಪ್ರಯತ್ನ ವಿಫಲವಾದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಬಂಧ್ ಗೆ ಕರೆ‌ ನೀಡಲಾಗಿದೆ ಎಂಬ ಸ್ಪಷ್ಟನೆ ನೀಡಿದೆ.
    ಮೇಲ್ನೋಟಕ್ಕೆ ಈ ವಾದ ಸರಿ ಎಂಬಂತೆ ಕಾಣುತ್ತದೆ. ಆದರೆ, ವಾಸ್ತವ ಸ್ಥಿತಿ ಬೇರೆಯೇ ಇದೆ.ಇಂಧನ ಇಲಾಖೆ ಗೃಹ ಜ್ಯೋತಿ ಯೋಜನೆ ಮೂಲಕ ಜನ ಸಾಮಾನ್ಯರ ಪರವಾಗಿ ನಿಲ್ಲುವ ಮೂಲಕ ಕ್ರಾಂತಿಕಾರಿ ತೀರ್ಮಾನ ಕೈಗೊಂಡಿದೆ.ಇದರಿಂದ ವಿದ್ಯುತ್ ಇಲಾಖೆ ಸರ್ಕಾರದ ಒಂದು ಜನಪ್ರಿಯ ಇಲಾಖೆಯಾಗುವತ್ತ ದಾಪುಗಾಲು ಇಟ್ಟಿದೆ.ಕೇವಲ ಉಚಿತ ವಿದ್ಯುತ್ ಯೋಜನೆ ಮಾತ್ರವಲ್ಲದೇ ವಿದ್ಯುತ್ ಸ್ವಾವಲಂಬಿ ರಾಜ್ಯವಾಗಿಸಲು ಇಂಧನ ಇಲಾಖೆ ಕೈಗೊಳ್ಳುತ್ತಿರುವ ಕ್ರಮಗಳು ಗಮನ ಸೆಳೆದಿವೆ.
    ಇಂತಹ ಜನಪ್ರಿಯತೆ ನಿರೀಕ್ಷಿಸದ ಬಿಜೆಪಿ ಇದಕ್ಕಾಗಿ ವ್ಯವಸ್ಥಿತ ತಂತ್ರ ರೂಪಿಸಿದೆ.‌ಅದಕ್ಕಾಗಿ ಸ್ಥಾಪಿತ ಹಿತಾಸಕ್ತಿಗಳನ್ನು ಬಳಸಿಕೊಳ್ಳತೊಡಗಿದೆ. ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಒಕ್ಕೂಟದ ಚುನಾಯಿತ ಪ್ರತಿನಿಧಿಗಳು ಬಿಜೆಪಿ ಮತ್ತು ಸಂಘ ಪರಿವಾರದ ಟೂಲ್ ಕಿಟ್ ನ ಭಾಗದಂತೆ ವರ್ತಿಸುವ ಮೂಲಕ ಬಂದ್ ಕರೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
    ವಾಸ್ತವವಾಗಿ ವಿದ್ಯುತ್ ದರ ಹೆಚ್ಚಳ ಹಾಗೂ ವಾಪಸ್ ಪಡೆಯುವ ವಿಷಯದಲ್ಲಿ ಸರ್ಕಾರದ ಪಾತ್ರ ಇರುವುದಿಲ್ಲ. ಕೇಂದ್ರ ಸರ್ಕಾರದ ಕಾಯಿದೆಯಂತೆ ದರ ಕುರಿತು ನಿರ್ಧಾರ ಕೈಗೊಳ್ಳಲು ಎಲ್ಲಾ ರಾಜ್ಯಗಳಲ್ಲಿ ದರ ನಿಯಂತ್ರಣ ಆಯೋಗ ರಚನೆಯಾಗಿದ್ದು,ಇವುಗಳು ನ್ಯಾಯಾಲಯದ ರೀತಿಯಲ್ಲಿ ಕೆಲಸ ಮಾಡುತ್ತವೆ.‌ಪ್ರತಿ ವರ್ಷ ಎಸ್ಕಾಂಗಳು ದರ ಪರಿಷ್ಕರಣೆ ಕುರಿತು ಆಯೋಗಕ್ಕೆ ಮನವಿ ಸಲ್ಲಿಸಬೇಕು
    ಅದರಂತೆ ವಿದ್ಯುತ್ ದರ ಹೆಚ್ಚಳ ಕುರಿತಂತೆ ಎಸ್ಕಾಂ ಗಳು ಸಲ್ಲಿಸಿದ ಮನವಿಯ ಬಗ್ಗೆ ಮುದ್ರಣ ಮಾಧ್ಯಮದಲ್ಲಿ ಪ್ರಾಪಕ ಪ್ರಚಾರ ಮತ್ತು ಜಾಹೀರಾತು ನೀಡಲಾಗುತ್ತದೆ. ಪ್ರತಿ ಬಾರಿ ಇದನ್ನು ಕಡ್ಡಾಯವಾಗಿ ಮಾಡಲಾಗುತ್ತದೆ.ಈ ಪ್ರಸ್ತಾವನೆಯನ್ನು ಗ್ರಾಹಕರು ಅಧ್ಯಯನ ನಡೆಸಿ,ತಮ್ಮ ಅಭಿಪ್ರಾಯ ಸಲ್ಲಿಸಲು ಅವಕಾಶ ನೀಡಲಾಗುತ್ತದೆ
    ಅದರಂತೆ ದರ ಹೆಚ್ಚಳ ಮನವಿ ಕುರಿತು ಕೆಇಆರ್‌ಸಿ ಸಾರ್ವಜನಿಕರ ಅಹವಾಲು ಆಲಿಸಿತ್ತು. ಲಿಖಿತವಾಗಿ ಮತ್ತು ವಿಚಾರಣೆ ವೇಳೆ ಆಯೋಗದ ಮುಂದೆ ಕೂತು ಹಾಜರಾಗಿ ತಕರಾರು ಸಲ್ಲಿಸಲು ಅವಕಾಶ ನೀಡಿತ್ತು. ಕೆ ಸಿ ಸಿ ಐ ಮತ್ತು ಕಾಸಿಯಾ ದಿಂದ ಕೇವಲ ನೆಪ ಮಾತ್ರಕ್ಕೆ ವಿರೋಧದ ಒಂದು ಅರ್ಜಿ ದಾಖಲಾಗಿದ್ದು ಬಿಟ್ಟರೆ ಅದರಲ್ಲಿ ತಾವು ದರ ಹೆಚ್ಚಳ ಯಾಕೆ ವಿರೋಧಿಸುತ್ತಿದ್ದೇನೆ ಎಂಬ ಕುರಿತು ವೈಜ್ಞಾನಿಕ ತಾಂತ್ರಿಕ ಹಾಗೂ ಆರ್ಥಿಕ ಕಾರಣಗಳನ್ನು ನೀಡಿಲ್ಲ.
    ಇದರ ನಂತರ ಕೆ. ಸಿ.ಸಿ.ಐನ ಯಾವುದೇ ಪ್ರತಿನಿಧಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ನಡೆದ ಬಹಿರಂಗ ವಿಚಾರಣೆಗೆ ಹಾಜರಾಗಲಿಲ್ಲ.ತಮ್ಮ ಅಹವಾಲು ಅಥವಾ ಆಕ್ಷೇಪಣೆ ಸಲ್ಲಿಸಲಿಲ್ಲ. ಹೀಗಾಗಿ ಆಯೋಗ ತನ್ನದೇ ನೆಲೆಗಟ್ಟಿನಲ್ಲಿ ವಿಚಾರಣೆ ಪೂರ್ಣಗೊಳಿಸಿ ಆದೇಶ ಪ್ರಕಟಿಸಿದೆ.
    ಇದಾದ ನಂತರ ದರ ಹೆಚ್ಚಳ ಆದೇಶ ಪ್ರಕಟಿಸುತ್ತಿದ್ದಂತೆ ಅದಕ್ಕೆ ತಕರಾರು ಸಲ್ಲಿಸಿ ಆದೇಶ ತಡೆಹಿಡಿಯುವಂತೆ ಮೇಲ್ಮನವಿ ಸಲ್ಲಿಸುವ ಅವಕಾಶ ಇದ್ದರೂ. ಕೆ ಸಿ ಸಿ ಐ ಇಂತಹ ಕ್ರಮಕ್ಕೆ ಮುಂದಾಗಲಿಲ್ಲ. ದರ ಹೆಚ್ಚಳ ಆದೇಶ ಪ್ರಕಟಗೊಂಡ ಎರಡು ತಿಂಗಳ ನಂತರ ಪೂರ್ವಾನ್ವಯವಾಗಿ ಜಾರಿಗೊಂಡಿದೆ.ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಇಂತಹ ನಿರ್ಧಾರವನ್ನು ಚುನಾವಣೆ ಆಯೋಗ ಕೈಗೊಂಡಿದೆ.ಇದರಲ್ಲಿ ಇಂಧನ ಇಲಾಖೆಯ ಪಾತ್ರವಿಲ್ಲ
    ಆದರೆ ಇದೀಗ ರಾಜ್ಯ ಸರ್ಕಾರ ಹೆಚ್ಚಳ ಆದೇಶ ವಾಪಸ್ಸು ಪಡೆಯಬೇಕು ಎಂದು ಆಗ್ರಹಿಸಿ ಬಂದ್ ಕರೆ ನೀಡಿದೆ.ನಿಯಮಗಳ ಪ್ರಕಾರ ಸರ್ಕಾರಕ್ಕೆ ಆದೇಶ ವಾಪಸ್ಸು ಪಡೆಯುವ ಅಧಿಕಾರವಿಲ್ಲ.
    ಆದೇಶ ಜಾರಿಯಾಗಬಾರದು ಎಂದರೆ ಹೆಚ್ಚಳದ ದರವನ್ನು ಸರ್ಕಾರ ಸಹಾಯಧನದ ಮೂಲಕ ಹೊಂದಾಣಿಕೆ ಮಾಡಬೇಕು ಇದು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗುತ್ತದೆ.
    ಇದೇ ನಿಜವಾದ ಕಾರಣ.ಕೆ ಸಿ ಸಿ ಐ ನ ಆಡಳಿತ ಮಂಡಳಿಯ ಹಿರಿಯ ಉಪಾಧ್ಯಕ್ಷ ಸೇರಿದಂತೆ ಬಹುತೇಕ ಎಲ್ಲರೂ ರಾಜ್ಯ ಬಿಜೆಪಿಯ ವಿವಿಧ ಘಟಕ ಮತ್ತು ಮೋರ್ಚಾಗಳ ಪದಾಧಿಕಾರಿಗಳಾಗಿದ್ದಾರೆ. ಕೆ ಸಿ ಸಿ ಐ ನ ಪ್ರತಿನಿಧಿಗಳಾಗಿ ಇವರು ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಪರ ನಿಲ್ಲುವ ಬದಲಿಗೆ ಬಿಜೆಪಿಯ ಕಾರ್ಯಸೂಚಿ ಜಾರಿಗೊಳಿಸಲು ಮುಂದಾಗಿದ್ದಾರೆ
    ಇದರ ಬಗ್ಗೆ ಸ್ಪಷ್ಟ ಮಾಹಿತಿ ಇರುವ ಎಫ್.ಕೆ.ಸಿ.ಸಿ.ಐ.ಈ ಹೋರಾಟದಿಂದ ದೂರ ಉಳಿದಿದೆ.ಅಷ್ಟೇ ಅಲ್ಲ ಈ ಕುರಿತಂತೆ ಜನ ಸಾಮಾನ್ಯರಲ್ಲಿ,ವಾಣಿಜ್ಯೋದ್ಯಮಿಗಳಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಲು ಮುಂದಾಗಿದೆ

    Verbattle
    Verbattle
    Verbattle
    ಚುನಾವಣೆ ನ್ಯಾಯ ವಾಣಿಜ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕ ಬಂದ್ ನ ಅಸಲಿ‌ ಕಾರಣ ಇಲ್ಲಿದೆ ನೋಡಿ!
    Next Article Fake ನ್ಯೂಸ್ Viral ತಡೆಗಟ್ಟಲೇಬೇಕು
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • LinwoodGah ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Pearlcof ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.