ಬೆಂಗಳೂರು, ಅ.7 – ಬಿಟ್ಕಾಯಿನ್ (Bitcoin) ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ (ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್) ಅನ್ನು ಹ್ಯಾಕ್ ಮಾಡಿ 11.5ಕೋಟಿ ರೂಪಾಯಿ ಲಪಟಾಯಿಸಿದ ಪ್ರಕರಣವೊಂದನ್ನು ಪತ್ತೆ ಹಚ್ಚಿದ್ದಾರೆ.
ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಈ ಪ್ರಕರಣದ ಪ್ರಮುಖ ಆರೋಪಿಗಳು ಎನ್ನಲಾದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಿಟ್ ಕಾಯಿನ್ ಕರ್ಮಕಾಂಡದಲ್ಲಿ ಬಳಕೆಯಾದ ಹಣ ವರ್ಗಾವಣೆ ಜಾಡುಹಿಡಿದ ಸಿಐಡಿ ಎಸ್ಐಟಿ ಪೊಲೀಸರು ನಾಗಪುರದ ನಿತಿನ್ ಮೆಶ್ರಾಮ್ ಮತ್ತು ದರ್ಶಿತ್ ಪಟೇಲ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಇವರು ಸರ್ಕಾರದ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಹ್ಯಾಕ್ ಮಾಡಿ ಹಣ ಲಪಟಾಯಿಸಿದ ಮಾಹಿತಿಯನ್ನು ತಿಳಿಸಿದ್ದಾರೆ. ಈ ಆರೋಪಿಗಳಿಗೆ ಹ್ಯಾಕರ್ ಶ್ರೀಕಿ ಜೊತೆ ನಂಟು ಇರುವುದು ಪತ್ತೆಯಾಗಿದೆ.
ಆರೋಪಿ ಶ್ರೀಕೃಷ್ಣ ಆಲಿಯಾಸ್ ಶ್ರೀಕಿ 2019ರಲ್ಲಿ ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್ಮೆಂಟ್ ಜಾಲತಾಣ ಹ್ಯಾಕ್ ಮಾಡಿ 11.5 ಕೋಟಿ ರೂ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿತ್ತು.
ಹಣ ಲಪಟಾಯಿಸಿದ ಆರೋಪಿ ಶ್ರೀಕಿ ಆ ಹಣವನ್ನು ಉತ್ತರ ಭಾರತದ ಕೆಲ ವ್ಯಕ್ತಿಗಳ ಖಾತೆಗೆ ಹಾಕಿದ್ದ. ಈ ಬಗ್ಗೆ ಪೊಲೀಸರಿಗೆ ಗೊತ್ತಾಗುವಷ್ಟರಲ್ಲೇ ಹವಾಲ ಮೂಲಕ ಹಣ ವರ್ಗಾವಣೆ ಮಾಡಲಾಗಿತ್ತು. ಆರೋಪಿಗಳು ಬೆಂಗಳೂರಿಗೆ ಹವಾಲ ರೂಪದಲ್ಲಿ ಹಣ ತಲುಪಿಸಿದ್ದರು.
ಪಂಜಾಬ್ ಮೂಲದ ಆರೋಪಿ ಹರ್ವಿಂದರ್ ಸಿಂಗ್, ಹವಾಲ ಮೂಲಕ ಹಣ ವರ್ಗಾವಣೆ ಮಾಡೊಕೆ ಸಹಾಯ ಮಾಡಿದ್ದ. ಆದರೆ ಎಸ್ಐಟಿ ತನಿಖೆ ವೇಳೆ ಬಿಟ್ ಕಾಯಿನ್ ಕೇಸ್ಗೂ ಹರ್ಮಿಂದರ್ ಸಿಂಗ್ ಗೂ ಸಂಬಂಧ ಇಲ್ಲ ಎಂಬುದು ಬೆಳಕಿಗೆ ಬಂದಿತ್ತು.
ಸದ್ಯ ಪ್ರಕರಣದ ತನಿಖಾ ಹಂತದಲ್ಲಿ ಮತ್ತಿಬ್ಬರ ಬಂಧನವಾಗಿದೆ. ಪ್ರಕರಣದಲ್ಲಿ ಸದ್ಯ ಬಂಧಿಸಲ್ಪಟ್ಟ ಆರೋಪಿಗಳ ಪಾತ್ರದ ಬಗ್ಗೆ ಸಿಐಡಿ, ಎಸ್ಐಟಿಯಿಂದ ತನಿಖೆ ನಡೆಯುತ್ತಿದೆ.


2 ಪ್ರತಿಕ್ರಿಯೆಗಳು
No Mostbet cada novo jogador Г© recebido como VIP desde o cadastro – https://mostbetpt.pro/ , Descubra no Mostbet o cassino que transforma cada aposta em uma experiГЄncia inesquecГvel .
Your winning story starts the second you hit “Play” – https://gpdifluca.com/starburst-slot/ , The only place where luck shows up to party .