Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚೈತ್ರಾ ಕುಂದಾಪುರ ಬಳಿ ಸಿಕ್ತು ಅಪಾರ ಚಿನ್ನ | Chaitra Kundapura
    ಬೆಂಗಳೂರು

    ಚೈತ್ರಾ ಕುಂದಾಪುರ ಬಳಿ ಸಿಕ್ತು ಅಪಾರ ಚಿನ್ನ | Chaitra Kundapura

    vartha chakraBy vartha chakraಸೆಪ್ಟೆಂಬರ್ 18, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Chaitra Kundapura
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.17- ಬಿಜೆಪಿ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿಗೆ ವಂಚಿಸಿರುವ ಚೈತ್ರಾ ಕುಂದಾಪುರ (Chaitra Kundapura) ಮತ್ತಾಕೆಯ ಗ್ಯಾಂಗ್ ನಿಂದ ಸಿಸಿಬಿ ಪೊಲೀಸರು ಇಲ್ಲಿಯವರೆಗೆ ನಗದು ಸೇರಿ 3.8 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

    ಸೆಪ್ಟೆಂಬರ್‌ 12ರಂದು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ಕಸ್ಟಡಿಗೆ ತೆಗೆದುಕೊಂಡಿರುವ ಸಿಸಿಬಿ ಪೊಲೀಸರು ತೀವ್ರ ವಿಚಾರಣೆ ನಡೆಸಿ ಆರೋಪಿಗಳ ಆರ್ಥಿಕ ವ್ಯವಹಾರಗಳ ಎಲ್ಲ ವಿವರಗಳನ್ನು ಪತ್ತೆ ಹಚ್ಚುತ್ತಿದ್ದಾರೆ.
    ಆರೋಪಿಗಳ ಬ್ಯಾಂಕ್‌ ಅಕೌಂಟ್‌ಗಳನ್ನು ಜಾಲಾಡಲಾಗುತ್ತಿದ್ದು, ವ್ಯವಹಾರಗಳ ಮೇಲೆ ಕಣ್ಣಿಡಲಾಗಿದೆ. ಆರೋಪಿಗಳು ಮಾತ್ರವಲ್ಲ ಅವರ ಹತ್ತಿರದ ಸಂಬಂಧಿಕರು ಹಾಗೂ ಆಪ್ತರ ಬ್ಯಾಂಕ್‌ ಅಕೌಂಟ್‌ ಮೇಲೂ ಕಣ್ಣಿಡಲಾಗಿದೆ. ಹೀಗಾಗಿ ಹೆಚ್ಚಿನ ಆರ್ಥಿಕ ವ್ಯವಹಾರಗಳ ಬಣ್ಣ ಬಯಲಾಗಿದ್ದು, ಅದರ ಪರಿಣಾಮವಾಗಿ ಈಗಾಗಲೇ 3 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ ಹಾಗೂ ಠೇವಣಿ ಪತ್ರಗಳು ಸಿಕ್ಕಿವೆ.

    ವಂಚನೆ ಪ್ರಕರಣದಲ್ಲಿ ಬಂಧಿತ ಚೈತ್ರಾ ಕುಂದಾಪುರ, ಗಗನ್‌ ಕಡೂರು, ಧನರಾಜ್‌, ರಮೇಶ್‌, ಪ್ರಜ್ವಲ್‌ ಮತ್ತು ಬಿ.ಎಲ್‌. ಚನ್ನನಾಯಕ್‌ ತೀವ್ರ ವಿಚಾರಣೆ ನಡೆಸಲಾಗಿದೆ.
    ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿ ಇನ್ನಷ್ಟೆ ಬಂಧಿಸಬೇಕಾಗಿದೆ. ಪ್ರಸಾದ್‌ ಬೈಂದೂರು ಈ ಪ್ರಕರಣದಲ್ಲಿ ಅಪ್ರೂವರ್‌ ಆಗುವ ಸಾಧ್ಯತೆಗಳು ಕಂಡುಬಂದಿವೆ.

    ಜಪ್ತಿಯ ವಿವರ:
    ಚೈತ್ರಾ ಕುಂದಾಪುರ ತನ್ನ ಸಂಬಂಧಿಕರ ಹೆಸರಲ್ಲಿ ಖಾಸಗಿ ಬ್ಯಾಂಕ್ ನಲ್ಲಿ ಇಟ್ಟಿದ್ದ 1.8 ಕೋಟಿ ರೂ. ಮೌಲ್ಯದ ಠೇವಣಿ ಪತ್ರ ಜಪ್ತಿ ಮಾಡಿ ಗಂಗೊಳ್ಳಿಯಲ್ಲಿರುವ ಬ್ಯಾಂಕ್‌ಗೆ ಸಿಸಿಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    ಚೈತ್ರಾ ಮನೆಯಲ್ಲಿದ್ದ ಸುಮಾರು 65 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಆಕೆಯ ಬಾವ ಮ್ಯಾನೇಜರ್ ಆಗಿದ್ದ ಬ್ಯಾಂಕ್ ನಲ್ಲಿ ಇಟ್ಟಿದ್ದ 40 ಲಕ್ಷ ರೂ. ಜಪ್ತಿ ಮಾಡಲಾಗಿದೆ.
    ಚೈತ್ರಾ ಕುಂದಾಪುರ ಆಪ್ತ ಗೆಳೆಯ ಶ್ರೀಕಾಂತ್ ನಾಯಕ್ ಮನೆಯಲ್ಲಿ‌ 45 ಲಕ್ಷ ರೂ. ಜಪ್ತಿ,ಹಾಲಶ್ರೀ ಸ್ವಾಮೀಜಿ ಈಗಾಗಲೇ 50 ಲಕ್ಷ ರೂಪಾಯಿಯನ್ನು ಗೋವಿಂದ ಪೂಜಾರಿಗೆ ಹಿಂದಿರುಗಿಸಿದ್ದಾರೆ.
    ಇದರಲ್ಲಿ ಎಲ್ಲವೂ ವಂಚನೆಯಲ್ಲಿ ಕೈಸೇರಿದ ಹಣವೇ ಎನ್ನುವುದು ಸ್ಪಷ್ಟವಾಗಿಲ್ಲ. ಆದರೆ, ಈ ಆರೋಪಿಗಳ ಹೆಸರಲ್ಲಿ ಮತ್ತು ಮನೆಯಲ್ಲಿ ಪತ್ತೆಯಾಗಿರುವುದರಿಂದ ಇದಕ್ಕೆ ತಳುಕು ಹಾಕಲಾಗುತ್ತದೆ.

    ಹಾಲಶ್ರೀ ಹೂಡಿಕೆ:
    ಹಾಲಶ್ರೀ ಸ್ವಾಮೀಜಿ ಅವರು ತಾವು ಪಡೆದ 1.5 ಕೋಟಿ ರೂ. ಹಣವನ್ನು ಭೂಮಿ ಖರೀರಿ, ಪೆಟ್ರೋಲ್‌ ಪಂಪ್‌ ಸ್ಥಾಪನೆ, ಕಾರು ಖರೀದಿಗೆ ಬಳಸಿ ಖಾಲಿ ಮಾಡಿದ್ದರು. ಕೊನೆಗೆ ಪ್ರಕರಣ ದಾಖಲಾಗುತ್ತದೆ ಎಂದಾದಾಗ ಯಾರ ಕೈಯಿಂದಲೋ ಐವತ್ತು ಲಕ್ಷ ರೂ. ಪಡೆದು ಗೋವಿಂದ ಪೂಜಾರಿಗೆ ನೀಡಿದ್ದರು.
    ಇನ್ನೂ ಚೈತ್ರಾ ಕುಂದಾಪುರ ತನ್ನ ಗೆಳೆಯ ಶ್ರೀಕಾಂತ್‌ ನಾಯಕ್‌ಗೆ ಸೇರಿದ ಹಿರಿಯಡ್ಕದ ಜಾಗದಲ್ಲಿ ಒಂದು ಮನೆಯನ್ನು ನಿರ್ಮಾಣ ಮಾಡುತ್ತಿರುವುದಲ್ಲದೆ, ಒಂದು ಕಾರು ಕೂಡಾ ಖರೀದಿ ಮಾಡಿದ್ದಾಳೆ.

    Verbattle
    Verbattle
    Verbattle
    Bangalore BJP Chaitra Kundapura crime Karnataka kundapura NDA News Politics ಉಡುಪಿ ಕಾರು ಚಿನ್ನ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಕೋಳಿ ಫಾರ್ಮ್ ನಲ್ಲಿ ನಾಲ್ವರ ದುರ್ಮರಣ | Bengaluru
    Next Article ಬುಕ್ ಮೈ ಸಿ.ಎಂ | Book My CM
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. onyxstormepubCow on ಫೆಬ್ರವರಿ 12, 2026 2:16 ಫೂರ್ವಾಹ್ನ

      A new chapter in the Empyrean history books is being written. Secure your access with the Onyx Storm epub. This novel promises to answer the questions that have been plaguing fans since the last book ended. Digital reading offers the flexibility to read one-handed while you drink your coffee. It is the ultimate comfort for book lovers. Rebecca Yarros has spun a web of magic that will trap you until the very end. https://onyxstormepub.store/ Read Onyx Storm Online Free Pdf

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://nevada-higaisha.net/component/kunena/others/60 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Tracymix ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • LinwoodGah ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.