Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚೈತ್ರಾ ಕುಂದಾಪುರ ಬಳಿ ಸಿಕ್ತು ಅಪಾರ ಚಿನ್ನ | Chaitra Kundapura
    ಬೆಂಗಳೂರು

    ಚೈತ್ರಾ ಕುಂದಾಪುರ ಬಳಿ ಸಿಕ್ತು ಅಪಾರ ಚಿನ್ನ | Chaitra Kundapura

    vartha chakraBy vartha chakraಸೆಪ್ಟೆಂಬರ್ 18, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Chaitra Kundapura
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.17- ಬಿಜೆಪಿ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿಗೆ ವಂಚಿಸಿರುವ ಚೈತ್ರಾ ಕುಂದಾಪುರ (Chaitra Kundapura) ಮತ್ತಾಕೆಯ ಗ್ಯಾಂಗ್ ನಿಂದ ಸಿಸಿಬಿ ಪೊಲೀಸರು ಇಲ್ಲಿಯವರೆಗೆ ನಗದು ಸೇರಿ 3.8 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

    ಸೆಪ್ಟೆಂಬರ್‌ 12ರಂದು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ಕಸ್ಟಡಿಗೆ ತೆಗೆದುಕೊಂಡಿರುವ ಸಿಸಿಬಿ ಪೊಲೀಸರು ತೀವ್ರ ವಿಚಾರಣೆ ನಡೆಸಿ ಆರೋಪಿಗಳ ಆರ್ಥಿಕ ವ್ಯವಹಾರಗಳ ಎಲ್ಲ ವಿವರಗಳನ್ನು ಪತ್ತೆ ಹಚ್ಚುತ್ತಿದ್ದಾರೆ.
    ಆರೋಪಿಗಳ ಬ್ಯಾಂಕ್‌ ಅಕೌಂಟ್‌ಗಳನ್ನು ಜಾಲಾಡಲಾಗುತ್ತಿದ್ದು, ವ್ಯವಹಾರಗಳ ಮೇಲೆ ಕಣ್ಣಿಡಲಾಗಿದೆ. ಆರೋಪಿಗಳು ಮಾತ್ರವಲ್ಲ ಅವರ ಹತ್ತಿರದ ಸಂಬಂಧಿಕರು ಹಾಗೂ ಆಪ್ತರ ಬ್ಯಾಂಕ್‌ ಅಕೌಂಟ್‌ ಮೇಲೂ ಕಣ್ಣಿಡಲಾಗಿದೆ. ಹೀಗಾಗಿ ಹೆಚ್ಚಿನ ಆರ್ಥಿಕ ವ್ಯವಹಾರಗಳ ಬಣ್ಣ ಬಯಲಾಗಿದ್ದು, ಅದರ ಪರಿಣಾಮವಾಗಿ ಈಗಾಗಲೇ 3 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ ಹಾಗೂ ಠೇವಣಿ ಪತ್ರಗಳು ಸಿಕ್ಕಿವೆ.

    ವಂಚನೆ ಪ್ರಕರಣದಲ್ಲಿ ಬಂಧಿತ ಚೈತ್ರಾ ಕುಂದಾಪುರ, ಗಗನ್‌ ಕಡೂರು, ಧನರಾಜ್‌, ರಮೇಶ್‌, ಪ್ರಜ್ವಲ್‌ ಮತ್ತು ಬಿ.ಎಲ್‌. ಚನ್ನನಾಯಕ್‌ ತೀವ್ರ ವಿಚಾರಣೆ ನಡೆಸಲಾಗಿದೆ.
    ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿ ಇನ್ನಷ್ಟೆ ಬಂಧಿಸಬೇಕಾಗಿದೆ. ಪ್ರಸಾದ್‌ ಬೈಂದೂರು ಈ ಪ್ರಕರಣದಲ್ಲಿ ಅಪ್ರೂವರ್‌ ಆಗುವ ಸಾಧ್ಯತೆಗಳು ಕಂಡುಬಂದಿವೆ.

    ಜಪ್ತಿಯ ವಿವರ:
    ಚೈತ್ರಾ ಕುಂದಾಪುರ ತನ್ನ ಸಂಬಂಧಿಕರ ಹೆಸರಲ್ಲಿ ಖಾಸಗಿ ಬ್ಯಾಂಕ್ ನಲ್ಲಿ ಇಟ್ಟಿದ್ದ 1.8 ಕೋಟಿ ರೂ. ಮೌಲ್ಯದ ಠೇವಣಿ ಪತ್ರ ಜಪ್ತಿ ಮಾಡಿ ಗಂಗೊಳ್ಳಿಯಲ್ಲಿರುವ ಬ್ಯಾಂಕ್‌ಗೆ ಸಿಸಿಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    ಚೈತ್ರಾ ಮನೆಯಲ್ಲಿದ್ದ ಸುಮಾರು 65 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಆಕೆಯ ಬಾವ ಮ್ಯಾನೇಜರ್ ಆಗಿದ್ದ ಬ್ಯಾಂಕ್ ನಲ್ಲಿ ಇಟ್ಟಿದ್ದ 40 ಲಕ್ಷ ರೂ. ಜಪ್ತಿ ಮಾಡಲಾಗಿದೆ.
    ಚೈತ್ರಾ ಕುಂದಾಪುರ ಆಪ್ತ ಗೆಳೆಯ ಶ್ರೀಕಾಂತ್ ನಾಯಕ್ ಮನೆಯಲ್ಲಿ‌ 45 ಲಕ್ಷ ರೂ. ಜಪ್ತಿ,ಹಾಲಶ್ರೀ ಸ್ವಾಮೀಜಿ ಈಗಾಗಲೇ 50 ಲಕ್ಷ ರೂಪಾಯಿಯನ್ನು ಗೋವಿಂದ ಪೂಜಾರಿಗೆ ಹಿಂದಿರುಗಿಸಿದ್ದಾರೆ.
    ಇದರಲ್ಲಿ ಎಲ್ಲವೂ ವಂಚನೆಯಲ್ಲಿ ಕೈಸೇರಿದ ಹಣವೇ ಎನ್ನುವುದು ಸ್ಪಷ್ಟವಾಗಿಲ್ಲ. ಆದರೆ, ಈ ಆರೋಪಿಗಳ ಹೆಸರಲ್ಲಿ ಮತ್ತು ಮನೆಯಲ್ಲಿ ಪತ್ತೆಯಾಗಿರುವುದರಿಂದ ಇದಕ್ಕೆ ತಳುಕು ಹಾಕಲಾಗುತ್ತದೆ.

    ಹಾಲಶ್ರೀ ಹೂಡಿಕೆ:
    ಹಾಲಶ್ರೀ ಸ್ವಾಮೀಜಿ ಅವರು ತಾವು ಪಡೆದ 1.5 ಕೋಟಿ ರೂ. ಹಣವನ್ನು ಭೂಮಿ ಖರೀರಿ, ಪೆಟ್ರೋಲ್‌ ಪಂಪ್‌ ಸ್ಥಾಪನೆ, ಕಾರು ಖರೀದಿಗೆ ಬಳಸಿ ಖಾಲಿ ಮಾಡಿದ್ದರು. ಕೊನೆಗೆ ಪ್ರಕರಣ ದಾಖಲಾಗುತ್ತದೆ ಎಂದಾದಾಗ ಯಾರ ಕೈಯಿಂದಲೋ ಐವತ್ತು ಲಕ್ಷ ರೂ. ಪಡೆದು ಗೋವಿಂದ ಪೂಜಾರಿಗೆ ನೀಡಿದ್ದರು.
    ಇನ್ನೂ ಚೈತ್ರಾ ಕುಂದಾಪುರ ತನ್ನ ಗೆಳೆಯ ಶ್ರೀಕಾಂತ್‌ ನಾಯಕ್‌ಗೆ ಸೇರಿದ ಹಿರಿಯಡ್ಕದ ಜಾಗದಲ್ಲಿ ಒಂದು ಮನೆಯನ್ನು ನಿರ್ಮಾಣ ಮಾಡುತ್ತಿರುವುದಲ್ಲದೆ, ಒಂದು ಕಾರು ಕೂಡಾ ಖರೀದಿ ಮಾಡಿದ್ದಾಳೆ.

    Bangalore BJP Chaitra Kundapura crime Karnataka kundapura NDA News Politics ಉಡುಪಿ ಕಾರು ಚಿನ್ನ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಕೋಳಿ ಫಾರ್ಮ್ ನಲ್ಲಿ ನಾಲ್ವರ ದುರ್ಮರಣ | Bengaluru
    Next Article ಬುಕ್ ಮೈ ಸಿ.ಎಂ | Book My CM
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. 0uxvm on ಜೂನ್ 5, 2025 5:19 ಅಪರಾಹ್ನ

      where to get cheap clomid how to get cheap clomiphene order generic clomid without insurance where can i buy generic clomiphene no prescription how to get clomiphene without dr prescription buying clomiphene without prescription clomiphene prescription uk

      Reply
    2. can you cut cialis pills on ಜೂನ್ 9, 2025 10:24 ಅಪರಾಹ್ನ

      The thoroughness in this draft is noteworthy.

      Reply
    3. can flagyl cause spotting on ಜೂನ್ 11, 2025 4:39 ಅಪರಾಹ್ನ

      I couldn’t turn down commenting. Warmly written!

      Reply
    4. pomme on ಜೂನ್ 19, 2025 3:28 ಫೂರ್ವಾಹ್ನ

      inderal price – methotrexate 10mg canada order methotrexate 2.5mg pills

      Reply
    5. s6jse on ಜೂನ್ 24, 2025 3:26 ಫೂರ್ವಾಹ್ನ

      zithromax 500mg tablet – bystolic 5mg oral buy cheap generic nebivolol

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_fpEt ರಲ್ಲಿ ಬೀದಿಗಿಳಿದ ಬಿಜೆಪಿ ನಾಯಕರು.
    • klining_cyEt ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • TerrellOrire ರಲ್ಲಿ BJP ನಾಯಕ ಈಶ್ವರಪ್ಪ ಹತ್ಯೆ ಗೆ ಸಂಚು
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe