Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಿ ನೌಕರಿ ಹೆಸರಲ್ಲಿ ವಂಚನೆ
    ಸುದ್ದಿ

    ಸರ್ಕಾರಿ ನೌಕರಿ ಹೆಸರಲ್ಲಿ ವಂಚನೆ

    vartha chakraBy vartha chakraಜೂನ್ 21, 2022Updated:ಜೂನ್ 21, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    fraud red round stamp
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.21– ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ 1.02 ಕೋಟಿ ಪಡೆದು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗು ಆತನ ಸೋದರ ವಂಚನೆ ನಡೆಸಿರುವ ಸಂಬಂಧ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
    ಸಹಕಾರ ನಗರದ ಎಸ್‌.ನಾಗೇಂದ್ರರಾವ್‌ ಮೋಸ ಹೋದವರು. ಈ ಸಂಬಂಧ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಬಿಆರ್‌ಸಿ (ಹೈಸ್ಕೂಲ್‌) ಬಸವನಗೌಡ ಪಾಟೀಲ್‌ ಹಾಗು ಆತನ ಸೋದರ ಬಳ್ಳಾರಿಯ ವೆಂಕಟರೆಡ್ಡಿ ವಿರುದ್ಧ ದೂರು ನೀಡಲಾಗಿದ್ದು ರಾಮಮೂರ್ತಿ ನಗರ ಪೊಲೀಸರು ಎಫ್‌ಐಆರ್‌ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
    ಕೆಲ ವರ್ಷಗಳ ಹಿಂದೆ ಸ್ನೇಹಿತರ ಮೂಲಕ ಈ ಸೋದರರು ನಾಗೇಂದ್ರರಾವ್‌ ಅವರಿಗೆ ಪರಿಚಯವಾಗಿದ್ದರು. ಈ ಸ್ನೇಹದಲ್ಲಿ ತಮಗೆ ಸರ್ಕಾರ ಮಟ್ಟದ ಅಧಿಕಾರಿಗಳ ಪರಿಚಯವಿದೆ ಎಂದು ಹೇಳಿ ನಾಗೇಂದ್ರರಾವ್‌ ಅವರ ಸಂಬಂಧಿಗಳಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ ಹಣ ಪಡೆದು ಮೋಸ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
    ಸೋದರರಿಂದ ವಂಚನೆ:
    ಉದ್ಯಮಿ ನಾಗೇಂದ್ರ ರಾವ್‌ ಅವರು, ತಮ್ಮ ಕುಟುಂಬದ ಜತೆ ಸಹಕಾರ ನಗರದಲ್ಲಿ ನೆಲೆಸಿದ್ದಾರೆ. ಉದ್ಯಮ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಹೀಗಿರುವಾಗ ಇದೇ ವರ್ಷದ ಜನವರಿಯಲ್ಲಿ ನಾಗೇಂದ್ರರಾವ್‌ ಅವರನ್ನು ಭೇಟಿಯಾದ ಅವರ ಸಂಬಂಧಿಕರು, ಸರ್ಕಾರಿ ನೌಕರಿ ಕೊಡಿಸುವಂತೆ ಮನವಿ ಮಾಡಿದ್ದರು. ಆಗ ತಮ್ಮ ಸ್ನೇಹಿತರ ಮೂಲಕ ಸರ್ಕಾರಿ ನೌಕರಿ ಕೊಡಿಸುವ ಭರವಸೆ ಕೊಟ್ಟಿದ್ದರು. ಅಂತೆಯೇ ನಾಲ್ಕು ವರ್ಷಗಳಿಂದ ತಮಗೆ ಪರಿಚಯವಿದ್ದ ವೆಂಕಟರೆಡ್ಡಿ ಅವರನ್ನು ಸಂಪರ್ಕಿಸಿದ ನಾಗೇಂದ್ರರಾವ್‌ ಅವರು, ನಮ್ಮ ಬಂಧುವಿಗೆ ಸರ್ಕಾರಿ ಹುದ್ದೆ ಕೊಡಿಸಲು ನೆರವಾಗುವಂತೆ ಮನವಿ ಮಾಡಿದ್ದಾರೆ. ಈ ಮಾತಿಗೆ ದಾವಣೆಗೆರೆ ಜಿಲ್ಲೆ ಜಗಳೂರು ತಾಲೂಕಿನಲ್ಲಿ ಬಿಆರ್‌ಸಿ ಆಗಿರುವ ‘ನನ್ನ ಸೋದರ ಬಸವನಗೌಡ ಪಾಟೀಲ್‌ಗೆ ಸರ್ಕಾರದ ಮಟ್ಟದಲ್ಲಿ ಒಳ್ಳೆಯ ಸಂಪರ್ಕ ಇದೆ. ಆತನ ನಿಮಗೆ ಸಹಾಯ ಮಾಡುತ್ತಾನೆ. ನಿಮಗೆ ಆತನನ್ನು ಪರಿಚಯಿಸುವುದಾಗಿ ನಾಗೇಂದ್ರ ರಾವ್‌’ಗೆ ವೆಂಕಟರೆಡ್ಡಿ ಹೇಳಿದ್ದ.
    ಕೊನೆಗೆ ರಾಮಮೂರ್ತಿ ನಗರದ ಹೋಟೆಲ್‌ನಲ್ಲಿ ನಾಗೇಂದ್ರ ಅವರನ್ನು ಸೋದರರು ಭೇಟಿಯಾಗಿ ಡೀಲ್‌ ಕುದುರಿಸಿದ್ದರು. ವಂಚಕ ಸೋದರರ ಮಾತು ನಂಬಿದ ರಾವ್‌, ಹಂತ ಹಂತವಾಗಿ ಸೋದರರ ಬ್ಯಾಂಕ್‌ ಖಾತೆಗಳಿಗೆ 1.02 ಕೋಟಿ ಜಮೆ ಮಾಡಿದ್ದರು. ಹಣ ಸಂದಾಯವಾದ ಬಳಿಕ ಸೋದರರು, ನಾಗೇಂದ್ರ ಅವರ ಸಂಪರ್ಕ ಕಡಿತಕೊಂಡಿದ್ದಾರೆ. ಈ ವರ್ತನೆಯಿಂದ ತಾವು ವಂಚನೆಗೊಳಗಾಗಿರುವುದು ಉದ್ಯಮಿಗೆ ಅರಿವಾಗಿದೆ. ಕೊನೆಗೆ ರಾಮಮೂರ್ತಿ ನಗರ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

    crime
    Share. Facebook Twitter Pinterest LinkedIn Tumblr Email WhatsApp
    Previous Articleಕಾರು ಟ್ಯಾಂಕರ್ ಡಿಕ್ಕಿ ಐವರು ಸಾವು
    Next Article ದೇಶದಲ್ಲಿ 9,923 ಜನರಿಗೆ ಕೊರೋನಾ ಸೋಂಕು, 17 ಮಂದಿ ಸಾವು
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    RCB ಪದಾಧಿಕಾರಿಗಳಿಗೆ ಜಾಮೀನು.

    ಜೂನ್ 12, 2025

    ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್.

    ಜೂನ್ 11, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Donaldtip ರಲ್ಲಿ ವಿಶೇಷ ಪೂಜೆ ಕಾರಣ ಬಹಿರಂಗ ಪಡಿಸಿದ ಶಿವಕುಮಾರ್
    • Donaldtip ರಲ್ಲಿ ಬೆಂಗಳೂರು IT Raid ಗೆ ರಾಜಸ್ಥಾನ ಚುನಾವಣೆ ನಂಟು
    • AlfonsoFlolf ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe