Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿದ ಸರ್ಕಾರ | Fake News
    Viral

    ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿದ ಸರ್ಕಾರ | Fake News

    vartha chakraBy vartha chakraಆಗಷ್ಟ್ 21, 202328 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆಗಸ್ಟ್ 21 : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು (Fake News) ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಗ್ರೀನ್ ಸಿಗ್ನಲ್ ನೀಡಿದರು.

    ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಈ ತೀರ್ಮಾನ ಮಾಡಿದರು.
    ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.

    ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆ:

    ಪ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, SOPC ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ. ಹಾಗೂ ಸಾಮರ್ಥ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.

    ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಎಐ ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲ ವಾಗುತ್ತದೆ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

    ಫೇಕ್ ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೇ ರಚಿಸಿ ಸಾಮರ್ಥ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಅಭಿಪ್ರಾಯಪಟ್ಟರು. ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ. ಆರಂಭಿಕ ಹಂತದಲ್ಲಿ ಐ.ಟಿ ಬಿಟಿ ಇಲಾಖೆ ಸಹಕರಿಸುತ್ತದೆ. ಕಾನೂನಿನ ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೇ ಇರುವುದು ಸೂಕ್ತ ಎಂದು ಸಚಿವ ಪ್ರಿಯಾಂಕ ಖರ್ಗೆ ಅಭಿಪ್ರಾಯ ಪಟ್ಟರು.

    ಸಚಿವರಾದ ಕೃಷ್ಣಬೈರೇಗೌಡ ಅವರು ಮಾತನಾಡಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸಿ ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆಯಾಗಬೇಕು ಎಂದರು.

    ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್ , ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕ ರ್ ಉಪಸ್ಥಿತರಿದ್ದರು.

    bangalore news Congress Fake News govt News ಕಾನೂನು ತಂತ್ರಜ್ಞಾನ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ. ಶಿವಕುಮಾರ್ ಗೆ ದಂಡ ವಿಧಿಸಿದ ಬಿಬಿಎಂಪಿ | DK Shivakumar
    Next Article ಕಾಂಗ್ರೆಸ್ ಓಲೈಕೆ ರಾಜಕಾರಣ | Karnataka Congress
    vartha chakra
    • Website

    Related Posts

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    ಡಿಸೆಂಬರ್ 5, 2025

    ಹೀಗೂ ಒಂದು ಆರತಕ್ಷತೆ.

    ಡಿಸೆಂಬರ್ 5, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_vrSa ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • RichardLib ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • mine_cwSa ರಲ್ಲಿ ವಿಧಾನಸೌಧದ ಮುಂಬಾಗ ಸೀಮೆಎಣ್ಣೆ ಸುರಿದುಕೊಂಡ ದಂಪತಿ | Vidhana Soudha
    Latest Kannada News

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe