ಬೆಂಗಳೂರು, ನ.25- ಗಾಂಜಾ, ಮೊದಲಾದ ಮಾದಕವಸ್ತುಗಳ ಸೇವನೆ, ಮೊಬೈಲ್ ಬಳಕೆ,ಅಪರಾಧ ಕೃತ್ಯಗಳಿಗೆ ಪಿತೂರಿ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಿಂದ ಸುದ್ದಿಯಾಗಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೊಲೆ ಆರೋಪಿ ಖೈದಿ ಭರ್ಜರಿ ಹುಟ್ಟಹಬ್ಬ ಆಚರಣೆ ಮಾಡಿಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ.
ವಿಚಾರಣಾಧೀನ ಖೈದಿಯಾಗಿ ಜೈಲಿನಲ್ಲಿರುವ ಉಮೇಶ್, ಕಳೆದ ತಿಂಗಳು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಮಾತ್ರವಲ್ಲ ಜೈಲು ಅಧಿಕಾರಿಗಳು ಬರ್ತ್ಡೇಗೆ ಜೈಲಿನಲ್ಲೆ ಅಕರ್ಷಕ ವೇದಿಕೆ ಸಜ್ಜು ಮಾಡಿ ಕೊಟ್ಟಿದ್ದಾರೆ ಎಂಬ ಆರೋಪವೂ ಇದೆ.
ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲೇ ಬೆಂಬಲಿಗರೊಂದಿಗೆ ಕೇಕ್ ಕಟ್ ಮಾಡಿ ಸೆಲಬ್ರೆಷನ್ ಮಾಡಿಕೊಂಡಿದ್ದಾನೆ. ಒಳಗಡೆ ಅಷ್ಟೇ ಅಲ್ಲದೇ ಸೆಂಟ್ರಲ್ ಜೈಲ್ ಮುಂದೆಯೂ ಆತನ ಬೆಂಬಲಿಗರು ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ.
ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆನಂದ್ ಎಂಬುವರ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಉಮೇಶ್ ಜೈಲು ಸೇರಿದ್ದಾನೆ.
ಜೈಲಿನಲ್ಲಿ ಈತ ತನ್ನ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾನೆ.ಜೈಲು ಅಧಿಕಾರಿಗಳ ಸಹಾಯ ಇಲ್ಲದೇ ಖೈದಿಯ ಭರ್ಜರಿ ಬರ್ತ್ಡೇ ಆಚರಣೆ ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ ಆಗಿದೆ. ಆದರೆ ಇಷ್ಟೆಲ್ಲ ಬೆಳವಣಿಗೆ ಆದರೂ ಕೂಡ ಜೈಲಿನ ಮೇಲಧಿಕಾರಿಗಳು ತಮಗಿದರ ಮಾಹಿತಿ ಇಲ್ಲ ಎನ್ನುತ್ತಿದ್ದಾರೆ.
ಈ ಹಿಂದೆ ಹಲವು ಸಲ ಪರಪ್ಪನ ಅಗ್ರಹಾರ ಜೈಲಿಗೆ ಮೇಲಧಿಕಾರಿಗಳು ದಿಡೀರ್ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಕೈದಿಗಳ ಬಳಿ ಮೊಬೈಲ್ ಫೋನ್, ಗಾಂಜಾ ಮತ್ತಿತರ ವಸ್ತುಗಳು ದೊರೆತಿದ್ದವು. ಅದಾದ ಬಳಿಕ ಅಲ್ಲಿನ ನಿಯಮಗಳನ್ನು ಬಿಗಿ ಮಾಡಲಾಗಿದೆ. ಆದರೂ ಇಂಥ ಪ್ರಕರಣಗಳು ನಡೆಯುತ್ತಿವೆ.


2 ಪ್ರತಿಕ್ರಿಯೆಗಳು
Torne-se VIP do Betano desde o primeiro dia. Desbloqueie até €500 de bônus de boas-vindas https://betanogame.org/pt/bonuses/ e aproveite jogos exclusivos de cassino ao vivo. Ganhe muito e saque rápido.
Mostbet entrega tudo o que vocГЄ espera de um cassino top: venha conferir – https://mostbetpt.pro/ , Entre agora e descubra o cassino que estГЎ na boca do povo: Mostbet .