ಬೆಂಗಳೂರು. ಜ, 6- ಸೇವೆ ಖಾಯಂಗೊಳಿಸಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರಿಗೆ (Guest Lecturer) ಸೇವಾನುಭವದ ಆಧಾರದಲ್ಲಿ ಗೌರವಧನವನ್ನು 5 ಸಾವಿರ ರೂಪಾಯಿಗಳಿಂದ 8 ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಕಾನೂನು ಮತ್ತು ತಾಂತ್ರಿಕ ಕಾರಣದಿಂದಾಗಿ ಅವರ ಸೇವೆ ಖಾಯಂ ಸಾಧ್ಯವಿಲ್ಲ ಎಂದು ಹೇಳಿದ್ದು, ಅವರಿಗೆ ಇನ್ನಿತರ ಸೌಲಭ್ಯಗಳನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ.
ಅತಿಥಿ ಉಪನ್ಯಾಸಕರ ಮುಷ್ಕರ ಕುರಿತಂತೆ ಅವರು
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಮಾಜಿ MLC ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಅವರ ಬೇಡಿಕೆಗಳ ಕುರಿತು ಚರ್ಚಿಸಿದರು.
ಅತಿಥಿ ಉಪನ್ಯಾಸಕರ (Guest Lecturer) ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ.
ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು.
ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
ಇದರೊಂದಿಗೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಡು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರು.
ಇದರೊಂದಿಗೆ ನೇಮಕಾತಿಯಲ್ಲಿ ಅವರ ಸೇವಾನುಭವ ಆಧರಿಸಿ, ವೈಟೇಜ್ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ, ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್ ಪ್ರಕ್ರಿಯೆ ಸರಳೀಕರಣಗೊಳಿಸಲು ಸಹ ಸಮ್ಮತಿಸಿ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗಯವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಿಗೆ ಮನವಿ ಮಾಡಿದರು.
ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ. ಜಗದೀಶ್ ಮತ್ತು ಇತರ ಹಿರಿಯ ಅಧಿಕಾರಿಗಳು, ಅತಿಥಿ ಉಪನ್ಯಾಸಕರ ಪ್ರತಿನಿಧಿಗಳು ಭಾಗವಹಿಸಿದ್ದರು.

8 ಪ್ರತಿಕ್ರಿಯೆಗಳು
mcluck Texas https://mcluckcasinogm.com/ mcluck casino
Awaken your inner gambler with intuitive interfaces and easy navigation. In crown coins, new players get matched deposits. Play smart and win big!
Nothing compares to the thrill of watching symbols tumble in Sweet Bonanza! Scatters sweet bonanza tumble feature unlock a world of multiplier mayhem and huge win chains. Start your sweet adventure right now!
Stamp your claim on colossal casino wins. buffalo slot machine near me brings Aristocrat’s best: retriggering free games and golden buffalo riches. Play boldly!
Get your free Sweeps Coins welcome package at chumba casino free coins. Enjoy non-stop slot excitement with the chance to redeem real rewards. The fun starts here!
From $1 bets to $100k+ cashouts — pragmatic play stake handles it all smoothly. Provably fair games + weekly raffles = non-stop excitement. Come play.
DraftKings slots Casino—where big offers meet big wins. Unlock 500 spins with $5 played + up to $1K safety on losses. Spin and succeed!
Prestante preplacet! Generika za super ceny > opravdovalekarna.cz
Xenical genericky