Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲು ಭಯದಿಂದ ಹಾರ್ದಿಕ್ ಬಿಜೆಪಿಗೆ ಹಾರಿದ್ರಾ?
    ಸುದ್ದಿ

    ಜೈಲು ಭಯದಿಂದ ಹಾರ್ದಿಕ್ ಬಿಜೆಪಿಗೆ ಹಾರಿದ್ರಾ?

    vartha chakraBy vartha chakraಜೂನ್ 8, 2022Updated:ಜೂನ್ 8, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ: ನಿರೀಕ್ಷೆಯಂತೆಯೇ ಗುಜರಾತ್‌ನ ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಅವರು ಬಿಜೆಪಿ ಸೇರಿದ್ದಾರೆ. 28 ವರ್ಷದ ಹಾರ್ದಿಕ್ ಅವರಿಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕೇಸರಿ ಶಾಲು ಮತ್ತು ಟೊಪ್ಪಿ ಹಾಕಿ ಪಕ್ಷಕ್ಕೆ ಸ್ವಾಗತಿಸಲಾಗಿದೆ. ಗುಜರಾತ್ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳಿರುವಾಗ, ಒಂದು ಕಾಲದ ಹಾರ್ಡ್‌ಕೋರ್ ಬಿಜೆಪಿ ವಿರೋಧಿ ಹಾರ್ದಿಕ್ ಪಟೇಲ್ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಗಿದಿದ್ದಾರೆ.
    ಹಾರ್ದಿಕ್ ಪಟೇಲ್ ಆಗಮನ ಬಿಜೆಪಿಗೆ ವರದಾನವೇ ಅಥವಾ ಶಾಪವೇ ಎಂಬ ಬಗ್ಗೆ ಚರ್ಚೆಗಳು ಶುರುವಾಗಿವೆ. ಆದರೆ ಅವರ ಪಕ್ಷ ಸೇರ್ಪಡೆ ಬಿಜೆಪಿಯ ಅನೇಕ ನಾಯಕರಿಗೆ ಅಸಮಾಧಾನ ಮೂಡಿಸಿದೆ ಎನ್ನುವುದು ಅವರ ಸೇರ್ಪಡೆ ಕಾರ್ಯಕ್ರಮವೇ ಸೂಚನೆ ನೀಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿಆರ್ ಪಾಟೀಲ್ ಅವರನ್ನು ಹೊರತುಪಡಿಸಿ ಗುಜರಾತ್ ಬಿಜೆಪಿಯ ಯಾವ ನಾಯಕರೂ ಹಾಜರಿರಲಿಲ್ಲ. ಕಾಂಗ್ರೆಸ್‌ನಲ್ಲಿ ಉನ್ನತ ಹುದ್ದೆ ನೀಡಿದ್ದರೂ, ತಮ್ಮನ್ನು ಪಕ್ಷದ ಚಟುವಟಿಕೆಗಳಲ್ಲಿ ಕಡೆಗಣಿಸಲಾಗುತ್ತಿದೆ ಮತ್ತು ತಮ್ಮನ್ನು ಯಾವ ನಾಯಕರೂ ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ಅವರು ಕಾಂಗ್ರೆಸ್ ತೊರೆದಿದ್ದರು. ಪಕ್ಷ ತ್ಯಜಿಸುವ ದಿನ ಹತ್ತಿರವಾದಾಗ ಬಿಜೆಪಿಯನ್ನು ಹೊಗಳುವ ರಾಜಕಾರಣ ಆರಂಭಿಸಿದ್ದರು. ‘ಯಶಸ್ವಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸಣ್ಣ ಸಿಪಾಯಿಯಂತೆ ದೇಶ ಸೇವೆ ಕೆಲಸ ಮಾಡುತ್ತೇನೆ’ ಎಂದು ಬರೆದುಕೊಂಡಿದ್ದರು.
    ಸೈದ್ಧಾಂತಿಕ ನಿಲುವು ಹೊಂದಿರುವ ಪಕ್ಷಕ್ಕೆ ಜಿಗಿದಿರುವ ಕುರಿತು ಕೇಳಿದ ಪ್ರಶ್ನೆಗಳಿಗೆ ಹಾರ್ದಿಕ್ ಪಟೇಲ್ ಉತ್ತರ ನೀಡದೆ ನುಣುಚಿಕೊಂಡಿದ್ದಾರೆ.
    ರಾಜಕೀಯ ಮಹತ್ವಾಕಾಂಕ್ಷೆಗಿಂತ ಹಲವು ಕೇಸ್‌ಗಳನ್ನು ಹೊತ್ತುಕೊಂಡಿರುವ ಹಾರ್ದಿಕ್ ಪಟೇಲ್, ಮತ್ತೆ ಜೈಲಿಗೆ ಹೋಗುವ ಅನಿವಾರ್ಯತೆ ತಪ್ಪಿಸಿಕೊಳ್ಳಲು ಅಥವಾ ಜೈಲಿಗೆ ಹೋಗುವ ಭಯದಿಂದ ದೂರವಾಗಲು ಬಿಜೆಪಿ ಸೇರಿದ್ದಾರೆ ಎನ್ನಲಾಗುತ್ತಿದೆ.
    ಈ ವಿಚಾರದಲ್ಲಿ ಹಾರ್ದಿಕ್ ಪಟೇಲ್ ಬಿಜೆಪಿಯ ಒತ್ತಡ ತಂತ್ರಕ್ಕೆ ಬಲಿಯಾದರಾ ಎಂಬ ಚರ್ಚೆಗಳು ಗುಜರಾತ್‌ನಲ್ಲಿ‌ ಜೋರಾಗಿಯೇ ನಡೆದಿವೆ.
    ಪಾಟಿದಾರ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು 2017-18ರಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ನೇತೃತ್ವ ವಹಿಸಿದ್ದ ಹಾರ್ದಿಕ್ ಪಟೇಲ್, ನಾಯಕರಾಗಿ ಗುರುತಿಸಿಕೊಂಡಿದ್ದರು. ಬಳಿಕ ಹೋದಲ್ಲಿ ಬಂದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು.
    ಪಾಟಿದಾರ್ ಪ್ರತಿಭಟನೆಯಲ್ಲಿ ಹಾರ್ದಿಕ್ ಪಟೇಲ್ ಗುರುತಿಸಿಕೊಂಡಾಗಲೇ ವಿವಾದದ ಕೇಂದ್ರಬಿಂದುವಾಗಿದ್ದರು. ಅವರು ಗನ್ ಮತ್ತು ಪಿಸ್ತೂಲುಗಳನ್ನು ಹಿಡಿದುಕೊಂಡಿರುವ ಚಿತ್ರಗಳು ವೈರಲ್ ಆಗಿದ್ದವು. ಪ್ರತಿಭಟನೆಯ ವೇಳೆ ಕೂಡ ಸೊಂಟಕ್ಕೆ ಗನ್ ಸಿಕ್ಕಿಸಿಕೊಂಡು ಬಂದಿದ್ದರು. ನನಗೆ ಗನ್ ಮತ್ತು ರೈಫಲ್‌ಗಳ ಹುಚ್ಚು ಎಂದು ಹೇಳಿಕೊಂಡಿದ್ದರು.
    ಪಾಟಿದಾರ್ ಅನಾಮತ್ ಆಂದೋಲನ ಸಮಿತಿ (ಪಿಎಎಎಸ್) ಮುಖ್ಯಸ್ಥರಾಗಿದ್ದ ಹಾರ್ದಿಕ್ ಪಟೇಲ್, ಯುವತಿ ಜತೆಗೆ ಸರಸ ಸಲ್ಲಾಪದಲ್ಲಿರುವ ವಿಡಿಯೋ ಕೂಡ 2017ರಲ್ಲಿ ವೈರಲ್ ಆಗಿತ್ತು.
    ನಾನು ಇನ್ನೂ ಮದುವೆಯಾಗಬೇಕಿದೆ. ನಾನೇನು ನಪುಂಸಕನಲ್ಲ. ಬಿಜೆಪಿಯು ಕೆಳಮಟ್ಟದ ರಾಜಕಾರಣಕ್ಕೆ ಇಳಿದಿದೆ. ನನ್ನ ಹೆಸರು ಕೆಡಿಸಲು ಬಿಜೆಪಿ ಸೆಕ್ಸ್ ಸಿಡಿ ಬಿಡುಗಡೆ ಮಾಡಿದೆ ಎಂದು ದೂರಿದ್ದರು.
    ಹಾರ್ದಿಕ್ ಪಟೇಲ್ ಮುಖ್ಯಸ್ಥರಾಗಿದ್ದ ಪಿಎಎಎಸ್‌ನಲ್ಲಿ ಸಂಚಾಲಕರಾಗಿದ್ದ ಬಿಜೆಪಿ ಮುಖಂಡ ವರುಣ್ ಪಟೇಲ್ ಅವರು ಹಾರ್ದಿಕ್ ಪಟೇಲ್ ಪಕ್ಷ ಸೇರ್ಪಡೆಗೆ ನೇರ ವಿರೋಧ ವ್ಯಕ್ತಪಡಿಸಿದ್ದರು. “ಹಾರ್ದಿಕ್ ಪಟೇಲ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಾಕಷ್ಟು ಹೋರಾಟ ನಡೆಸಿದ್ದಾರೆ. ಇದು ಎರಡು ರಾಜಕೀಯ ಪಕ್ಷಗಳ ಜಗಳವಷ್ಟೇ ಆಗಿರಲಿಲ್ಲ. ಇದು ಬಹಳ ವೈಯಕ್ತಿಕ ವಿಚಾರ. ನಾವು ವೈಯಕ್ತಿಕ ದಾಳಿಗಳಿಗೆ ಒಳಗಾಗಿದ್ದೆವು. ಹೀಗಾಗಿ ಬಿಜೆಪಿಯ ತಳಮಟ್ಟದ ಕಾರ್ಯಕರ್ತರು, ಹಾರ್ದಿಕ್ ಪಟೇಲ್ ಬಿಜೆಪಿ ಸೇರುವುದನ್ನು ಇಷ್ಟಪಡುವುದಿಲ್ಲ” ಎಂದಿದ್ದರು. ಬಿಜೆಪಿ ಸೇರ್ಪಡೆಗೂ ಮುನ್ನ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಹಾರ್ದಿಕ್ ಪಟೇಲ್ ಈ ಹಿಂದೆ ನೀಡಿದ್ದ ಹೇಳಿಕೆಗಳು ಮತ್ತು ವಿಡಿಯೋಗಳು ಮತ್ತೆ ಚಾಲ್ತಿಗೆ ಬಂದಿವೆ. ಆದರೆ ಬಿಜೆಪಿ ಹಾಗೂ ಅದರ ನಾಯಕರ ವಿರುದ್ಧ ತಾವು ಮಾಡಿದ್ದ ಹಳೆಯ ಪೋಸ್ಟ್‌ಗಳನ್ನು ಅವರು ತಮ್ಮ ಖಾತೆಗಳಿಂದ ಡಿಲೀಟ್ ಮಾಡಿದ್ದಾರೆ. ಆದರೂ ಈ ಬಗೆಗಿನ ಚರ್ಚೆ ಮಾತ್ರ ನಿಂತಿಲ್ಲ.

    News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleRSS ಅಂದ್ರೆ ನಮಗೆ ತಾಯಿ ಇದ್ದಂತೆ- ಸಚಿವ ನಿರಾಣಿ
    Next Article ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ ; ಇದೊಂದು ಸ್ತ್ರೀ ವಿರೋಧಿ ಪಠ್ಯಪುಸ್ತಕ – ದಿವ್ಯಪ್ರಭಾ ಚಿಲ್ತಡ್ಕ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • yojq8 ರಲ್ಲಿ ಕಾಂಗ್ರೆಸ್ ನಿಂದ ಮಂತ್ರಿಗಳ ಕುಟುಂಬ ಸದಸ್ಯರು ಚುನಾವಣಾ ಅಖಾಡಕ್ಕೆ | Congress
    • KennethSOYNC ರಲ್ಲಿ ವೇತನ ತಾರತಮ್ಯ ಸರಿಪಡಿಸಲು ಕ್ರಮ
    • KennethSOYNC ರಲ್ಲಿ EDಗೆ ಸುಪ್ರೀಂ ಕೋರ್ಟ್ ತಪರಾಕಿ | Supreme Court
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe