ಬೆಂಗಳೂರು, ಡಿ. 19: ಲಿಂಗನಮಕ್ಕಿ ಜಲಾಶಯಕ್ಕಾಗಿ (Linganamakki Dam) ತಮ್ಮ ಭೂಮಿ ಕಳೆದುಕೊಂಡ ಸಂತ್ರಸ್ತರು ಮತ್ತು ಉಳಿಮೆ ಜಾಗದ ಭೂಮಿ ಹಕ್ಕು ನೀಡುವಂತೆ ಆಗ್ರಹಿಸಿ ಕಳೆದ 6 ದಶಕಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಕೊನೆಗೂ ಸರ್ಕಾರ ಸ್ಪಂದಿಸಿದೆ.
ಈ ಕುರಿತಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಮತ್ತು ಕಾನೂನು ಇಲಾಖೆ ಹಾಗೂ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಅವರು ಭೂಮಿಯ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತ್ವರಿತವಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
1958ರಿಂದ 1969ರ ನಡುವೆ ನಡೆದ ರಾಜ್ಯಕ್ಕೆ ಬೆಳಕು ನೀಡುವ ಲಿಂಗನಮಕ್ಕಿ ಜಲಾಶಯ ನಿರ್ಮಾಣ ಮತ್ತು ಜಲ ವಿದ್ಯುತ್ ಯೋಜನೆಯ ನಿರ್ಮಾಣದ ವೇಳೆ ರೈತರು ಗಣನೀಯ ಪ್ರಮಾಣದಲ್ಲಿ ತಮ್ಮ ಭೂಮಿ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ.
ಇಂತಹ ಸಂತ್ರಸ್ತ ಕುಟುಂಬಗಳಿಗೆ ನೀಡಲು ಸುಮಾರು 9136 ಎಕರೆ 27 ಗುಂಟೆ ಅರಣ್ಯ ಭೂಮಿಯನ್ನು ಬಿಡುಗಡೆ ಮಾಡಲಾಗಿದೆ. ಇದನ್ನು ಅಂದಿನ ಮೈಸೂರು ಅರಣ್ಯ ನಿಯಂತ್ರಣ ಕಾಯಿದೆ -1900 ರ ಸೆಕ್ಷನ್ 30 ರಡಿ ಡಿ ಮೀಸಲು ಇಡಲಾಗಿತ್ತು. ಆದರೆ ಅದು ಅಧಿಸೂಚನೆ ಹೊರಡಿಸಿರಲಿಲ್ಲ, ಬಿಡುಗಡೆಯಾದ ಈ ಜಾಗದಲ್ಲಿ ಸಂತ್ರಸ್ತ ಕುಟುಂಬಗಳು ವಾಸಿಸುತ್ತಿದ್ದು ಅವರಿಗೆ ಸರ್ಕಾರದ ಸೌಲಭ್ಯ ಲಭಿಸುತ್ತಿಲ್ಲ. ಹೀಗಾಗಿ ಸಮಸ್ಯೆ ಉಂಟಾಗಿದೆ.
ಇದನ್ನು ಮನಗಂಡು ಸರ್ಕಾರ 2015-2017ರ ನಡುವೆ ಅರಣ್ಯ ಭೂಮಿಯನ್ನು ಡಿ ರಿಸರ್ವ್ ಮಾಡಿತು. ಆದರೆ ಈ ಆದೇಶಕ್ಕೆ ಮುನ್ನ ಭಾರತ ಸರ್ಕಾರದಿಂದ ಪೂರ್ವಾನುಮತಿ ಪಡೆದಿಲ್ಲ ಎಂದು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ನ್ಯಾಯಾಲಯದ ಆದೇಶದನ್ವಯ ಸರ್ಕಾರ ತನ್ನ ಆದೇಶ ಹಿಂಪಡೆಯಿತು. ಈಗ 23.03.203ರಂದು 9129 ಎಕರೆ ಭೂಮಿ ಡಿ ರಿಸರ್ವ್ ಮಾಡವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ಈ ಎಲ್ಲದರ ಹಿನ್ನೆಲೆಯಲ್ಲಿ ಇಂದು ಕಾನೂನು ಇಲಾಖೆ ಉನ್ನತಾಧಿಕಾರಿಗಳು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಲಾಗಿದ್ದು, ಎಲ್ಲ ಸಂತ್ರಸ್ತರಿಗೂ ನ್ಯಾಯ ದೊರಕಬಹುದು ಎಂಬ ಭರವಸೆಯನ್ನು ಸಚಿವರು ವ್ಯಕ್ತಪಡಿಸಿದರು.
ಹುಲಿ ಉಗುರು:
ವನ್ಯ ಜೀವಿಗಳ ಅಂಗಾಂಗದ ವಸ್ತುಗಳನ್ನು ಇಟ್ಟುಕೊಳ್ಳಲು ಕಾನೂನಿನಲ್ಲಿ ಅಕಾಶವಿಲ್ಲದ ಕಾರಣ, ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡಬಹುದು, ಕೇರಳ ಸರ್ಕಾರ ಕೈಗೊಂಡ ನಿರ್ಧಾರ ಮತ್ತು ನಮ್ಮ ಸರ್ಕಾರದ ಉದ್ದೇಶಿತ ನಿರ್ಧಾರ ವಿಭಿನ್ನವಾಗಿದ್ದು, ಈ ನಿಟ್ಟಿನಲ್ಲಿ ಕಾನೂನು ಇಲಾಖೆಯೊಂದಿಗೆ ಚರ್ಚಿಸಿ ಕಡತವನ್ನು ಪುನರ್ ಮಂಡಿಸಲು ಸೂಚನೆ ನೀಡಲಾಗಿದೆ.
ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಲಾಗುವುದು. ಕಾನೂನಿನ ಅರಿವಿಲ್ಲದೆ ತಮ್ಮ ಬಳಿ ವನ್ಯ ಜೀವಿಗಳ ಅಂಗಾಂಗದ ವಸ್ತುಗಳನ್ನು ನೋಂದಣಿ ಮಾಡದೆ ಇಟ್ಟುಕೊಂಡಿರುವ ಮುಗ್ದ ಜನತೆಗೆ ಕಿರುಕುಳ ಆಗದ ರೀತಿಯಲ್ಲಿ ಒಂದು ಬಾರಿ ಕೊನೆಯ ಅವಕಾಶ ನೀಡಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.
ಇದಕ್ಕೂ ಮುನ್ನ ವಿಕಾಸಸೌಧದ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕೇಂದ್ರ ಸರ್ಕಾರದ ಉನ್ನತಾಧಿಕಾರಿ ಮಹೇಶ್, ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜಯ್ ಬಿಜ್ಜೂರ್, ಅರಣ್ಯ ಮತ್ತು ಕಾನೂನು ಇಲಾಖೆಯ ಉನ್ನತಾಧಿಕಾರಿಗಳು ಭಾಗಿಯಾಗಿದ್ದರು.


4 ಪ್ರತಿಕ್ರಿಯೆಗಳು
Если вы хотите повысить безопасность и удобство маневрирования, рекомендуем камера заднего вида для грузовика.
Установка камеры заднего вида на грузовик требует учета нескольких важных технических аспектов.
Если вы хотите купить летние шины недорого, то у нас вы найдете лучшие предложения и выгодные цены.
Хорошо подобранная летняя резина обеспечивает уверенное вождение и минимизирует риск аварий.
Если вам нужна машина с водителем в аренду, обращайтесь к профессионалам!
Для экономии стоит оформлять заказ заранее, особенно в праздничные дни.
Если вам необходима аренда авто с водителем, то наши предложения по аренде авто с водителем в Новосибирске идеально подойдут для комфортных поездок.
Аренда автомобиля с водителем в Новосибирске позволяет легко ориентироваться в городе и не заботиться о дорожной обстановке.
Такая услуга пользуется популярностью среди бизнесменов и туристов, которые хотят сэкономить время.
Перед бронированием стоит уточнить наличие дипломов и лицензий у водителя, а также условия страхования.
Перед заключением договора стоит сравнить условия, чтобы выбрать наиболее выгодный и надежный вариант.
Аренда авто с водителем позволяет путешествовать по городу без лишних забот и в комфортных условиях.
Современные сервисы позволяют оформить заказ за несколько минут и выбрать подходящий автомобиль.
В заключение, аренда авто с водителем в Новосибирске — это надежное решение для деловых поездок и отдыха.