ಬೆಂಗಳೂರು, ನ.28- ಸುಗಮ ಆಡಳಿತ ಹಾಗೂ ಶಾಸಕರ ಅಸಮಾಧಾನ ತಣಿಸುವ ದೃಷ್ಟಿಯಿಂದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಪ್ರಕ್ರಿಯೆ ಆರಂಭಿಸಿದ್ದು, ಮೊದಲ ಹಂತದಲ್ಲಿ 39 ಮಂದಿ ಶಾಸಕರಿಗೆ ಅಧಿಕಾರ ಸಿಗಲಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಇಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದು, ಸಂಭಾವ್ಯರ ಪಟ್ಟಿ ಸಿದ್ದಪಡಿಸಿದ್ದು,ವರಿಷ್ಠರ ಅನುಮೋದನೆಗೆ ರವಾನಿಸಲು ತೀರ್ಮಾನಿಸಿದರು.
ಮೊದಲ ಹಂತದಲ್ಲಿ ಶಾಸಕರಿಗೆ ಮಾತ್ರ ಅಧಿಕಾರ ನೀಡುತ್ತಿದ್ದು,ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ಸಮಯದಲ್ಲಿ ಅಥವಾ ಅದರ ನಂತರದಲ್ಲಿ ನೇಮಕಾತಿ ಆದೇಶ ಹೊರ ಬೀಳುವ ನಿರೀಕ್ಷೆಗಳಿವೆ.
ಮೂಲಗಳ ಪ್ರಕಾರ ಪ್ರಸಾದ್ ಅಬ್ಬಯ್ಯ, ಮಹಾಂತೇಶ ಕೌಜಲಗಿ,ರಮೇಶ್ ಬಂಡಿಸಿದ್ದೇಗೌಡ
ಪ್ರಕಾಶ್ ಕೋಳಿವಾಡ, ವಿಜಯಾನಂದ ಕಾಶಪ್ಪನವರ್, ಎಂ.ವೈ.ಪಾಟೀಲ್, ಅಲ್ಲಮಪ್ರಭು ಪಾಟೀಲ್, ಬಸನಗೌಡ ದದ್ದಲ್, ಯಶವಂತರಾಯ ಗೌಡ ವಿಠಲಗೌಡ ಪಾಟೀಲ್, ಹಂಪನಗೌಡ ಬಾದರ್ಲಿ, ರಾಘವೇಂದ್ರ ಹಿಟ್ನಾಳ್, ಶ್ರೀನಿವಾಸ್ ಮಾನೆ, ಜಿ.ಎನ್.ಗಣೇಶ್, ಈ ತುಕಾರಾಮ್, ಟಿ.ರಘುಮೂರ್ತಿ, ಬೇಳೂರು ಗೋಪಾಲಕೃಷ್ಣ, ಟಿ.ಡಿ.ರಾಜೇಗೌಡ, ಡಾ.ರಂಗನಾಥ್, ಎಸ್.ಆರ್.ಶ್ರೀನಿವಾಸ್, ಕೆ.ವೈ.ನಂಜೇಗೌಡ, ರಿಜ್ವಾನ್ ಅರ್ಷದ್, ಪ್ರಿಯಾಕೃಷ್ಣ, ಬಿ.ಶಿವಣ್ಣ, ಎಚ್.ಸಿ.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ, ವಿನಯ್ಕುಲಕರ್ಣಿ, ನರೇಂದ್ರಸ್ವಾಮಿ ಅವರ ಹೆಸರುಗಳು ಸಂಭವನೀಯರ ಪಟ್ಟಿಯಲ್ಲಿ ಸೇರಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಯ್ಕೆ ಪ್ರಕ್ರಿಯೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಆಯ್ಕೆ ಪಟ್ಟಿ ಇನ್ನೂ ಅಂತಿಮವಾಗಿಲ್ಲದಿರುವುದರಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ” ಎಂದು ಹೇಳಿದರು.


2 ಪ್ರತಿಕ್ರಿಯೆಗಳು
Discover why players love Betano Casino https://betanogame.org/. Claim your €500 welcome bonus and dive into live dealer action. Sports betting, slots and tournaments – everything you need in one place.
Mostbet: diversГЈo garantida + bГґnus gigante esperando por vocГЄ – https://mostbetpt.pro/ , Mostbet traz para vocГЄ o melhor do entretenimento com recompensas Г altura .