Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆ ಅಖಾಡದಲ್ಲಿ ಅಕ್ರಮದ್ದೆ ಬಾರಿ ಸದ್ದು | Lok Sabha 2024
    ರಾಜ್ಯ

    ಲೋಕಸಭೆ ಅಖಾಡದಲ್ಲಿ ಅಕ್ರಮದ್ದೆ ಬಾರಿ ಸದ್ದು | Lok Sabha 2024

    vartha chakraBy vartha chakraಏಪ್ರಿಲ್ 16, 202431 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.16: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ವ್ಯಾಪಕ ಪ್ರಮಾಣದ ಅಕ್ರಮ ನಡೆಯುತ್ತಿವೆ. ಮತದಾರರನ್ನು ಒಲಿಸಿಕೊಳ್ಳಲು ರಾಜಕೀಯ ಪಕ್ಷಗಳು ಹಣ ,ಮದ್ಯ ಚಿನ್ನಾಭರಣ ನೀಡುತ್ತಿದ್ದು ಇದರ ಮೇಲೆ ಹದ್ದಿನಕಣ್ಣಿಟ್ಟಿರುವ ಆಯೋಗ ಮಾಡುತ್ತಿರುವ ಜಪ್ತಿ ದಾಖಲೆ ಪ್ರಮಾಣದಲ್ಲಿ ನಡೆಯುತ್ತಿದೆ.
    ಇದಷ್ಟೇ ಅಲ್ಲ, ದೂರುಗಳ ಸುರಿಮಳೆಯೂ ಆಗುತ್ತಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಬಂದಾಗಿನಿಂದಲೂ ಇಲ್ಲಿಯವರೆಗೆ ವರೆಗೆ 368.91 ಕೋಟಿ ರೂಪಾಯಿ ಮೌಲ್ಯದ ಹಣ ಹಾಗೂ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
    ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಇಲ್ಲಿಯವರೆಗೆ 1,751 ಎಫ್‌ ಐಆರ್ ದಾಖಲಿಸಿದ್ದು, 1,388 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಚುನಾವಣೆ ಅಕ್ರಮ ಹಾಗೂ ನೀತಿ ಸಂಹಿತೆ ಉಲ್ಲಂಘನೆ ಕುರಿತು ರಾಜಕೀಯ ಪಕ್ಷಗಳು ಮತ್ತು ನಾಗರಿಕರು ಸಿವಿಜಿಲ್ ಅಪ್ಲಿಕೇಶನ್ ಮೂಲಕ ನೀಡಿರುವ 23,362 ಸ್ವೀಕರಿಸಲಾಗಿದೆ. ಈ ಪೈಕಿ 13,935 ದೂರುಗಳು ಅನುಮತಿ ಇಲ್ಲದ ಪೋಸ್ಟರ್, ಬ್ಯಾನರ್ ಗಳಿಗೆ ಸಂಬಂಧಿಸಿದ್ದರೆ, 1,076 ದೂರುಗಳು ಕಡ್ಡಾಯ ಘೋಷಣೆಯಿಲ್ಲದ ಪೋಸ್ಟರ್ ಗಳಿಗೆ ಸಂಬಂಧಿಸಿವೆ ಎಂದು ಚುನಾವಣೆ ಆಯೋಗದ ಪ್ರಕಟಣೆ ತಿಳಿಸಿದೆ.
    ಹಣ ವಿತರಣೆ ಬಗ್ಗೆ 191 ಉಚಿತ ಉಡುಗೊರೆ, ಕೂಪನ್‍ಗಳಿಗೆ ಸಂಬಂಧಿಸಿದಂತೆ 113, ಮದ್ಯ ಹಂಚಿಕೆಗೆ ಸಂಬಂಧಪಟ್ಟಂತೆ 129 ಸೇರಿದಂತೆ ವಿವಿಧ ರೀತಿಯ ದೂರುಗಳನ್ನು ಸಲ್ಲಿಸಲಾಗಿದೆ.
    ಒಟ್ಟು 22,045 ದೂರುಗಳು ಸರಿಯಾಗಿವೆ ಎಂದು ಕಂಡುಹಿಡಿದು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    ಇ-ಮೇಲ್ ಮೂಲಕ 183, ಪತ್ರಗಳ ಮೂಲಕ 568 ಹಾಗೂ ಸಾಮಾಜಿಕ ಜಾಲತಾಣ ಮಾಧ್ಯಮದ ಮೂಲಕ 53 ದೂರುಗಳನ್ನು ಸ್ವೀಕರಿಸಿದ್ದು, ಒಟ್ಟು 860 ದೂರುಗಳನ್ನು ವಿಲೇವಾರಿ ಮಾಡಲಾಗಿದೆ.
    ಸುವಿಧ ಅಡಿಯಲ್ಲಿ ಅನುಮತಿಗಾಗಿ 5,337 ಅರ್ಜಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 3,918 ಅರ್ಜಿಗಳನ್ನು ಅಂಗೀಕರಿಸಿದ್ದು, 833 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 220 ಅರ್ಜಿಗಳನ್ನು ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
    ಪೊಲೀಸ್ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು 104.27 ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದರೆ, ಅಬಕಾರಿ ಇಲಾಖೆಯವರು 160.33 ಕೋಟಿ ರೂ. ಮೌಲ್ಯದ ಮದ್ಯ, ಡ್ರಗ್ಸ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

    ಆದಾಯ ತೆರಿಗೆ ಇಲಾಖೆಯವರು 13.80 ಕೋಟಿ ರೂ. ಮೌಲ್ಯದ ನಗದು, ಚಿನ್ನ, ಬೆಳ್ಳಿ, ವಜ್ರದ ವಸ್ತುಗಳನ್ನು ವಶಪಡಿಸಿಕೊಂಡಿದ್ದರೆ, ವಾಣಿಜ್ಯ ತೆರಿಗೆ ಅಧಿಕಾರಿಗಳು 79.51 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
    ಅಬಕಾರಿ ಇಲಾಖೆಯವರು 35.24 ಲಕ್ಷ ರೂ. ಮೌಲ್ಯದ 4,978.485 ಲೀ ಮದ್ಯವನ್ನು ಜೆ.ಪಿ.ನಗರದಲ್ಲಿ ಮತ್ತು ವಿದ್ಯಾಪೀಠ ವೃತ್ತದಲ್ಲಿ ವಶಪಡಿಸಿಕೊಂಡಿದ್ದಾರೆ.77.84 ಲಕ್ಷ ರೂ. ಮೌಲ್ಯದ 4,371.970 ಲೀ ಮದ್ಯವನ್ನು ಬೆಂಗಳೂರು ವಿಹಾರ ಕೇಂದ್ರ ಹಾಗೂ ಬನಶಂಕರಿಯಲ್ಲಿ ವಶಪಡಿಸಿಕೊಂಡಿದ್ದರೆ, 20 ಲಕ್ಷ ರೂ. ನಗದನ್ನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    BJP Congress Karnataka lok sabha lok sabha 2024 News Politics ಚಿನ್ನ ಚುನಾವಣೆ ಡ್ರಗ್ಸ್ ರಾಜಕೀಯ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಈಶ್ವರಪ್ಪ ಅವರಿಗೆ ಹೈಕಮಾಂಡ್ ಕೊಟ್ಟ ಬಂಪರ್ ಆಫರ್ | Eshwarappa
    Next Article ಬಿಜೆಪಿಗೆ ಗುಡ್ ಬೈ ಹೇಳಿದ ಕರಡಿ ಸಂಗಣ್ಣ ಕಾಂಗ್ರೆಸ್ ಸೇರಲು ಸಜ್ಜು | Karadi Sanganna
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • slot blogs network ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • izzapoyaomskvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • JeremyPah ರಲ್ಲಿ ಎಸ್ಕಾರ್ಟ್ ಸರ್ವಿಸ್ ಹೆಸರಲ್ಲಿ ವಂಚಿಸಿದ್ದು ಹೀಗೆ..
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe