Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IND vs AUS: ಸ್ಟಾರ್ಕ್ ಮಿಂಚಿನ ದಾಳಿ 180 ರನ್​ಗಳಿಗೆ ಭಾರತ ಆಲೌಟ್
    ಕ್ರೀಡೆ

    IND vs AUS: ಸ್ಟಾರ್ಕ್ ಮಿಂಚಿನ ದಾಳಿ 180 ರನ್​ಗಳಿಗೆ ಭಾರತ ಆಲೌಟ್

    vartha chakraBy vartha chakraಡಿಸೆಂಬರ್ 6, 202436 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಡಿಲೇಡ್ ಟೆಸ್ಟ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 180 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಕಾಂಗರೂ ವೇಗಿಗಳ ದಾಳಿಗೆ ನಲುಗಿದ ಟೀಂ ಇಂಡಿಯಾ ಮೊದಲ ದಿನದಾಟದ ಎರಡನೇ ಸೆಷನ್​ನಲ್ಲೇ ತನ್ನ ಮೊದಲ ಇನ್ನಿಂಗ್ಸ್​ಗೆ ಅಂತ್ಯ ಹಾಡಿತು. ಟೀಂ ಇಂಡಿಯಾ ಪರ ಕೊನೆಯಲ್ಲಿ ಏಕಾಂಗಿ ಹೋರಾಟ ನೀಡಿದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ 42 ರನ್​ಗಳ ಇನ್ನಿಂಗ್ಸ್ ಆಡಿದರು. ಟಾಪ್ ಆರ್ಡರ್​ನಲ್ಲಿ ಕೆಎಲ್ ರಾಹುಲ್ ಹಾಗೂ ಶುಭ್​ಮನ್ ಗಿಲ್ ಕ್ರಮವಾಗಿ 37 ಮತ್ತು 31 ರನ್​ಗಳ ಕಾಣಿಕೆ ನೀಡಿದರು. ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ.ಅಡಿಲೇಡ್‌ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ನಾಯಕನ ಈ ನಿರ್ಧಾರ ತಪ್ಪು ಎಂಬುದು ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಸಾಭೀತಾಯಿತು. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಅಡಿಲೇಡ್‌ನಲ್ಲಿ ಮೊದಲ ಎಸೆತದಲ್ಲೇ ಔಟಾದರು. ಆದರೆ ಆ ಬಳಿಕ ಕೆಎಲ್ ರಾಹುಲ್ ಮತ್ತು ಶುಭ್​ಮನ್ ಗಿಲ್ ಜೊತೆಗೂಡಿ ಈ ಇಬ್ಬರೂ ಎರಡನೇ ವಿಕೆಟ್‌ಗೆ 69 ರನ್‌ಗಳ ಜೊತೆಯಾಟವನ್ನು ಮಾಡಿದರು. ಆದರೆ ಕೆಎಲ್ ರಾಹುಲ್ ಔಟಾದ ಬಳಿಕ ಭಾರತದ ಇನ್ನಿಂಗ್ಸ್ ತತ್ತರಿಸಿತು.ವಿರಾಟ್ ಕೊಹ್ಲಿ ಬಂದ ಕೂಡಲೇ ಅತ್ಯಂತ ಕೆಟ್ಟ ಶಾಟ್ ಆಡುವ ಮೂಲಕ ವಿಕೆಟ್ ಕಳೆದುಕೊಂಡರು. ಅವರು ಮಿಚೆಲ್ ಸ್ಟಾರ್ಕ್‌ ಎಸೆತದಲ್ಲಿ ಸ್ಲಿಪ್ಸ್‌ನಲ್ಲಿ ನಿಂತಿದ್ದ ಸ್ಟೀವ್ ಸ್ಮಿತ್​ಗೆ ಕ್ಯಾಚಿತ್ತು ಔಟಾದರು. ಇದಾದ ಬಳಿಕ ಶುಭ್​ಮನ್ ಗಿಲ್ 31 ರನ್​ಗಳ ವೈಯಕ್ತಿಕ ಸ್ಕೋರ್​ನಲ್ಲಿ ಬೋಲ್ಯಾಂಡ್​ಗೆ ವಿಕೆಟ್ ನೀಡಿದರು. ಇದಾದ ಬಳಿಕ ನಾಯಕ ರೋಹಿತ್ ಶರ್ಮಾ ಕೂಡ ಕೇವಲ 3 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ತಂಡವು ವಿಕೆಟ್‌ಕೀಪರ್ ರಿಷಬ್ ಪಂತ್ ಅವರಿಂದ ರನ್​ಗಳ ಭರವಸೆ ಹೊಂದಿತ್ತು. ಆದರೆ ಪಂತ್ ಕೂಡ ಕಮಿನ್ಸ್ ಅವರ ಶಾರ್ಟ್ ಬಾಲ್‌ನಲ್ಲಿ 21 ರನ್‌ಗಳಿಸಿ ಕ್ಯಾಚಿತ್ತು ಔಟಾದರು. ಇದರಿಂದ ಭಾರತ ತಂಡದ 6 ವಿಕೆಟ್‌ಗಳು 109 ರನ್‌ಗಳಿಗೆ ಪತನಗೊಂಡವು.ಒಂದೆಡೆ ಭಾರತದ ಇತರೆ ಬ್ಯಾಟ್ಸ್​ಮನ್​ಗಳು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೆ, ಮತ್ತೊಂದೆಡೆ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಆಲ್ ರೌಂಡರ್ ನಿತೀಶ್ ರೆಡ್ಡಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ನಿತೀಶ್ ರೆಡ್ಡಿ ತಮ್ಮ ಇನ್ನಿಂಗ್ಸ್‌ನಲ್ಲಿ 3 ಸಿಕ್ಸರ್ ಮತ್ತು 3 ಬೌಂಡರಿ ಸಹಿತ 42 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ನಿತೀಶ್ ಅವರ ಈ 42 ರನ್​ಗಳ ಕಾಣಿಕೆ ಇಲ್ಲದಿದ್ದರೆ ಭಾರತ ಇನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಆಗುತ್ತಿತ್ತು. ಆಸೀಸ್ ಪರ ಮಾರಕ ದಾಳಿ ನಡೆಸಿದ ಮಿಚೆಲ್ ಸ್ಟಾರ್ಕ್ ಕೇವಲ 48 ರನ್ ನೀಡಿ 6 ವಿಕೆಟ್ ಪಡೆದರು. ಇದು ಭಾರತದ ವಿರುದ್ಧ ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

     

    Bangalore Government Karnataka News Politics Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಮತ್ತೆ ಸಿಕ್ತು ಡ್ರಗ್ಸ್
    Next Article ಬಗೆಹರಿಯಲಿದೆಯಾ ಬಿಜೆಪಿ ಬಿಕ್ಕಟ್ಟು.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • online drugstore ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • DanielCix ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • https://mellstroy-casino.io ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe