ಭೋಪಾಲ್ (ಮಧ್ಯಪ್ರದೇಶ),ಜು.11– ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವು ದುರುಪಯೋಗವಾಗಿದೆ ಎಂದು ಆರೋಪಿಸಿ ಮೇಧಾ ಪಾಟ್ಕರ್ ಸೇರಿದಂತೆ 11 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬರ್ವಾನಿ ಜಿಲ್ಲೆಯ ಬುಡಕಟ್ಟು ಜನರ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಸೇರಿದಂತೆ 11ಮಂದಿ ರಾಜಕೀಯ ಹಾಗು ದೇಶ ವಿರೋಧಿ ಕಾರ್ಯಕ್ಕಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.
ಮುಂಬೈನಲ್ಲಿ ನೋಂದಣಿಯಾಗಿರುವ ನರ್ಮದಾ ನವನಿರ್ಮಾಣ ಅಭಿಯಾನ (ಎನ್ಎನ್ಎ) ಟ್ರಸ್ಟ್, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ನರ್ಮದಾ ಕಣಿವೆಯ ಬುಡಕಟ್ಟು ವಿದ್ಯಾರ್ಥಿಗಳಿಗೆ ವಸತಿ ಶೈಕ್ಷಣಿಕ ಸೌಲಭ್ಯಗಳನ್ನು ನಡೆಸಲು ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.
ಖಾಸಗಿ ದೂರಿನ ಮೇರೆಗೆ ಮೇಧಾ ಪಾಟ್ಕರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ದೂರುದಾರರು ಕೆಲವು ದಾಖಲೆಗಳನ್ನು ಒದಗಿಸಿದ್ದಾರೆ. ಹಳೆಯ ವಹಿವಾಟಿಗೆ ಸಂಬಂಧಿಸಿದ ಪ್ರಕರಣವಾಗಿರುವುದರಿಂದ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಬರ್ವಾನಿ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಕುಮಾರ್ ಶುಕ್ಲಾ ತಿಳಿಸಿದ್ದಾರೆ.
ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಈ ಬಗ್ಗೆ ಮಾತನಾಡಿ, ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಈ ಆರೋಪಗಳ ಹಿಂದೆ ರಾಜಕೀಯವಿದೆ ಎಂದು ತಿಳಿಸಿದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
