Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐಸಿಸ್ ನ ಮೊದಲ ಆತ್ಮಾಹುತಿ ದಾಳಿಕೋರ
    ರಾಜ್ಯ

    ಐಸಿಸ್ ನ ಮೊದಲ ಆತ್ಮಾಹುತಿ ದಾಳಿಕೋರ

    vartha chakraBy vartha chakraಆಗಷ್ಟ್ 22, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತಿರುವನಂತಪುರಂ (ಕೇರಳ),ಆ.22– ಜಗತ್ತಿನಾದ್ಯಂತ ಭೀಕರ ದಾಳಿಯ ಮೂಲಕ ಹಲವರ ಸಾವು-ನೋವಿಗೆ ಕಾರಣವಾಗಿರುವ ಐಸಿಸ್ ಸಂಘಟನೆಯಲ್ಲಿ ಮೊದಲ ಆತ್ಮಾಹುತಿ ದಾಳಿಕೋರನಾಗಿ ಕೆಲಸ ಮಾಡಿದ ಉಗ್ರ ಬೆಂಗಳೂರಿನಲ್ಲಿ ನೆಲೆಸಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಎನ್ನುವ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.
    ಮೊದಲ ಆತ್ಮಾಹುತಿ ದಾಳಿಕೋರ ಎಂಬ ಕುಖ್ಯಾತಿ ಹೊಂದಿದಾತ ಬೆಂಗಳೂರಿನಲ್ಲಿ ನೆಲೆಸಿದ್ದ ಕೇರಳ ಮೂಲದ ವ್ಯಕ್ತಿಯಾಗಿದ್ದ. ಈತನನ್ನು ಹೊಗಳಿ ಐಸಿಸ್‍ನ ಖೊರಾಸನ್ ಘಟಕ ತನ್ನ ಮುಖವಾಣಿಯಾದ ವಾಯ್ಸ್ ಅಫ್ ಖೊರಾಸನ್‍ನಲ್ಲಿ ಲೇಖನ ಪ್ರಕಟಿಸಿದೆ. ಲಿಬಿಯಾದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಿಸಿ ಹಲವರ ಸಾವಿಗೆ ಎಂಜಿನಿಯರ್ ಬಗ್ಗೆ ಲೇಖನ ಪ್ರಕಟಿಸಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಮಾಹಿತಿ ಪಡೆದು ತನಿಖೆಯನ್ನು ಚುರುಕುಗೊಳಿಸಿದೆ.
    ಐಸಿಸ್ ಸಂಘಟನೆಗಳಲ್ಲಿ ಆತ್ಮಾಹುತಿ ಬಾಂಬರ್‌ಗಳನ್ನು ಅತ್ಯಂತ ಉಗ್ರ ವ್ಯಕ್ತಿಗಳೆಂದು ಹೇಳಲಾಗಿದೆ. ಕೇರಳದಿಂದ ತೆರಳಿದ್ದ ಯುವಕ ಹೀಗೆ ಆತ್ಮಾಹುತಿ ಬಾಂಬರ್ ಆದ ಮೊದಲ ಭಾರತೀಯ ಎಂದು ಖೊರಾಸನ್ ಪತ್ರಿಕೆ ಹೊಗಳಿದೆ. ಭಯೋತ್ಪಾದಕ ಈ ವ್ಯಕ್ತಿ ಮೂಲತಃ ಕ್ರಿಶ್ಚಿಯನ್ ಆಗಿದ್ದು, ಬೆಂಗಳೂರಿನಲ್ಲಿ ಕೆಲ ಕಾಲ ಎಂಜಿನಿಯರ್ ಆಗಿ ಕೆಲಸ ಮಾಡಿ ಬಳಿಕ ದುಬೈಗೆ ತೆರಳಿ ಕೆಲಸಕ್ಕೆ ಸೇರಿಕೊಂಡಿದ್ದ. ಅಲ್ಲಿನ ಐಸಿಸ್ ಸ್ಲೀಪರ್ ಸೆಲ್‍ಗಳ ಸಂಪರ್ಕಕ್ಕೆ ಬಂದು ಭಯೋತ್ಪಾದನಾಗಿ ತರಬೇತಿ ಪಡೆದು, ಕೊನೆಗೆ 2015-16ರಲ್ಲಿ ಲಿಬಿಯಾದಲ್ಲಿ ಬಾಂಬ್ ಸ್ಫೋಟಿಸಿಕೊಂಡು ಹಲವರನ್ನು ಕೊಂದು ತಾನೂ ಸಾವನ್ನಪ್ಪಿದ್ದ.
    ಐಸಿಸ್ ಖೊರಾಸನ್ ತನ್ನ ಪತ್ರಿಕೆಯಲ್ಲಿ ‘ಮೆಮೋರೀಸ್ ಆಫ್ ಶುಹಾದ’ ಎಂಬ ಲೇಖನದಲ್ಲಿ ಕೇರಳದ ಆತ್ಮಾಹುತಿ ದಾಳಿಕೋರನನ್ನು ಸ್ಮರಿಸಿದೆ,
    ಈತ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಕೆಲಸ ಮಾಡುವಾಗ ಜಿಹಾದ್‍ಗೆ ಆಕರ್ಷಿತನಾಗಿ ಮತಾಂತರಗೊಂಡು ಐಸಿಸ್ ಸೇರಿದ್ದ. ಆರಂಭದಲ್ಲಿ ಯೆಮನ್‍ಗೆ ಹೋಗಿ ಹೆಚ್ಚಿನ ತರಬೇತಿ ಪಡೆಯುವ ಈತನ ಕನಸು ನನಸಾಗಿರಲಿಲ್ಲ.
    ಬಳಿಕ ಲಿಬಿಯಾದಲ್ಲಿ ತರಬೇತಿ ವಡೆಯುವ ಅವಕಾಶದ ಬಗ್ಗೆ ಐಸಿಸ್‍ನಿಂದ ಸಂದೇಶ ಬಂದಿತ್ತು. ಆತ ಕ್ರೈಸ್ತನಾಗಿದ್ದ ಕಾರಣ, ಆತನ ಲಿಬಿಯಾ ಭೇಟಿ ಬಗ್ಗೆ ಯಾರಿಗೂ ಅನುಮಾನ ಇರಲಿಲ್ಲ. ಹೀಗೆ ಅಲ್ಲಿಗೆ ತೆರಳಿದ್ದ. ಬಳಿಕ ಅಲ್ಲಿ 3 ತಿಂಗಳಲ್ಲೇ ಅತ್ಮಾಹುತಿ ದಾಳಿಯೊಂದನ್ನು ನಡೆಸಿ ಹಲವರನ್ನು ಹತ್ಯೆಗೈದಿದ್ದ. ಎಂಬ ಅಂಶ ಬಯಲಾಗಿದೆ.
    ಕೇರಳದ ಕಾಸರಗೋಡಿನ ಮೊಹ್ಸೀನ್ ಎಂಬಾತ ಅಫ್ಘಾನಿಸ್ತಾನದ ಕಾಬೂಲ್‍ನಲ್ಲಿ 2020ರಲ್ಲಿ ಐಸಿಸ್‌ನ ಆತ್ಮಾಹುತಿ ಬಾಂಬರ್ ಆಗಿ 25 ಜನರನ್ನು ಹತ್ಯೆಗೈದಿದ್ದ. ನಂತರ ಕಾಸರಗೋಡಿನ ಡಾ.ವಿಚಾಸ್ ಎಂಬಾತ ಕಾಬೂಲ್ ಜೈಲಿನ ಮೇಲೆ ಆತ್ಮಾಹುತಿ ದಾಳಿ ನಡೆಸಿ 39 ಜನರನ್ನು ಕೊಂದಿದ್ದ. ಇದಲ್ಲದೇ ಕೇರಳದ 100ಕ್ಕೂ ಹೆಚ್ಚು ಯುವಕರು ಐಸಿಸ್ ಸೇರಲು ಮುಂದಾಗಿದ್ದರು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ.

    isis national news ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಚಿರತೆಗಾಗಿ school ರಜಾ..!?
    Next Article ಮುಸ್ಲಿಂ ಗೆ ಮತಾಂತರವಾದ ಅರ್ಚಕ ಮರಳಿ ಹಿಂದೂ ಧರ್ಮಕ್ಕೆ
    vartha chakra
    • Website

    Related Posts

    ಪರಪ್ಪನ ಅಗ್ರಹಾರ ಜೈಲಿನಿಂದ ನೇಮಕಾತಿ

    ಜುಲೈ 17, 2025

    ಉಪನ್ಯಾಸಕರಲ್ಲ ಇವರು ರಾಕ್ಷಸರು.

    ಜುಲೈ 15, 2025

    ಪೊಲೀಸ್ ಆಡಳಿತಕ್ಕೆ ಮೇಜರ್ ಸರ್ಜರಿ.

    ಜುಲೈ 15, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Акутальные новости ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • Patricktup ರಲ್ಲಿ ಹಾಲು ಕದೀತಾರೆ ಹುಷಾರ್
    • Jamesfluts ರಲ್ಲಿ ಚುರುಕಾದ ನಕ್ಸಲರು.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe