Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ವಾತಂತ್ರ್ಯದ ದಿನದಂದು ದಾಳಿಗೆ ಸಂಚುಉಗ್ರ ಸಬಾವುದ್ದೀನ್ ಸೆರೆ
    ಸುದ್ದಿ

    ಸ್ವಾತಂತ್ರ್ಯದ ದಿನದಂದು ದಾಳಿಗೆ ಸಂಚು
    ಉಗ್ರ ಸಬಾವುದ್ದೀನ್ ಸೆರೆ

    vartha chakraBy vartha chakraಆಗಷ್ಟ್ 10, 2022Updated:ಆಗಷ್ಟ್ 10, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಲಖನೌ(ಉತ್ತರ ಪ್ರದೇಶ),ಆ.10-75ನೇ ಸ್ವಾತಂತ್ರ್ಯದ ದಿನದಂದು ದೇಶದಲ್ಲಿ ಉಗ್ರ ದಾಳಿ ನಡೆಸುವ ಸಂಚು ರೂಪಿಸಿದ್ದ ಅಸಾದುದ್ದೀನ್​ ಓವೈಸಿ ಪಕ್ಷದ ಸದಸ್ಯ, ಐಸಿಸ್​ ಉಗ್ರರ ನಂಟು ಹೊಂದಿದ್ದ ಭಯೋತ್ಪಾದಕನೊಬ್ಬನನ್ನು ರಾಜ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಅಜಂಗಢ ಜಿಲ್ಲೆಯ ಅಮಿಲೋ ಪ್ರದೇಶದ ಎಲೆಕ್ಟ್ರೀಷಿಯನ್​ ಆಗಿದ್ದ ಎಐಎಂಐಎಂ ಪಕ್ಷದ ಸಬಾವುದ್ದೀನ್​ ಅಜ್ಮಿ ಆಲಿಯಾಸ್​ ಬೈರಾಮ್​ ಖಾನ್​ ಬಂಧಿತ ಉಗ್ರನಾಗಿದ್ದಾನೆ. ಉಗ್ರ ಸಬಾವುದ್ದೀನ್ ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖರನ್ನು ಕೊಲೆ ಮಾಡುವ ಗುರಿಯನ್ನು​ ನೀಡಲಾಗಿತ್ತು. ಹೀಗಾಗಿ ಆರ್‌ಎಸ್‌ಎಸ್ ಹೆಸರಿನಲ್ಲಿ ನಕಲಿ ಇ-ಮೇಲ್ ಐಡಿ ಮತ್ತು ಫೇಸ್‌ಬುಕ್ ಖಾತೆಯನ್ನು ರಚಿಸಿ ಅದರಿಂದ ನಾಯಕರ ಸಂಪರ್ಕ ಬೆಳೆಸಿಕೊಳ್ಳುತ್ತಿದ್ದ.
    ಮುಂಬೈನಲ್ಲಿ ಈ ಮೊದಲು ಎಲೆಕ್ಟ್ರೀಷಿಯನ್​ ಆಗಿದ್ದ ಉಗ್ರ ಅಜ್ಮಿ ಐಸಿಸ್​ ವಿಚಾರಧಾರೆಗಳಿಗೆ ಒಳಗಾಗಿ ಭಾರತದಲ್ಲಿ ಇಸ್ಲಾಮಿಕ್​ ಸ್ಟೇಟ್​, ಷರಿಯಾ ಕಾನೂನು ಜಾರಿ ಮಾಡುವ ಕುರಿತು ಚಿಂತನೆಯಲ್ಲಿ ತೊಡಗಿದ್ದ. ಜನರಿಗೆ ಹಲವು ಆಮಿಷವೊಡ್ಡಿ ಸಾಮಾಜಿಕ ಮಾಧ್ಯಮಗಳಲ್ಲಿ ಐಸಿಸ್ ಬಗ್ಗೆ ಪ್ರಚಾರ ಮಾಡಲು ಪ್ರೇರೇಪಿಸುತ್ತಿದ್ದ. ಈತ ಹಲವಾರು ವಿಡಿಯೋಗಳನ್ನು ಮಾಡಿ ಹರಿಬಿಟ್ಟಿದ್ದ.
    ಉಗ್ರ ಅಜ್ಮಿ ವಿಚಾರಣೆಗೆ ಒಳಪಡಿಸಿ, ಆತನ ಮೊಬೈಲ್ ಪರಿಶೀಲಿಸಿದಾಗ ಭಯೋತ್ಪಾದನೆ ಸೃಷ್ಟಿಸಲು ಐಸಿಸ್​​ನ ಟೆಲಿಗ್ರಾಮ್ ಚಾನೆಲ್ “ಅಲ್-ಸಕ್ರ್ ಮೀಡಿಯಾ”ಗೆ ಸೇರಿಕೊಂಡಿದ್ದ ಎಂಬುದು ಬೆಳಕಿಗೆ ಬಂದಿದೆ.
    ಪಾಕ್​ ಜೊತೆ ನಂಟು:
    ಈ ಉಗ್ರನ ಜಾಡು ಪತ್ತೆ ಮಾಡಿದಷ್ಟು ವಿಸ್ತಾರವಾಗುತ್ತಿದೆ. ಉತ್ತರಪ್ರದೇಶದಲ್ಲಿ ಇದ್ದುಕೊಂಡೇ ಆಫ್ರಿಕಾದಿಂದ ನಡೆಸಲಾಗುತ್ತಿರುವ ಉಗ್ರ ಸಂಘಟನೆಯಾದ ಅಬುಬಕರ್​ ಅಲ್​ ಸೋಮಾನಿ ಗ್ರೂಪ್​ನ ಭಾಗವಾಗಿದ್ದ. ಇದರಿಂದ ಆತ ಬಾಂಬ್​ ತಯಾರಿಸುವ ಬಗ್ಗೆ ಮಾಹಿತಿ ಪಡೆಯುತ್ತಿದ್ದ. ಇದಲ್ಲದೇ, ಪಾಕಿಸ್ತಾನ, ಸಿರಿಯಾ, ಇರಾಕ್​ನ ಐಸಿಸ್​ ಉಗ್ರರ ಜೊತೆಗೂ ನಂಟು ಹೊಂದಿದ್ದ ಎಂಬುದು ತಿಳಿದು ಬಂದಿದೆ.
    ಎಲೆಕ್ಟ್ರಾನಿಕ್ ಬಾಂಬ್​, ಗ್ರೆನೇಡ್​ನಂತಹ ಅಪಾಯಕಾರಿ ಸ್ಫೋಟಕಗಳನ್ನು ಹೇಗೆ ತಯಾರಿಸುವುದು ಎಂಬುದನ್ನು ಕಲಿತಿದ್ದ. ಐಸಿಸ್​ಗೆ ದೇಶದ ಮುಸ್ಲಿಂ ಯುವಕರ ಸೇರುವಂತೆ ಪ್ರೇರೇಪಿಸುತ್ತಿದ್ದ. ಬಂಧಿತನಿಂದ ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಕಾರ್ಟ್ರಿಡ್ಜ್‌ಗಳು, ಬಾಂಬ್‌ಗಳನ್ನು ತಯಾರಿಸಲು ಬಳಸುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.ಉಗ್ರನ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ(ತಡೆ) ಕಾಯ್ದೆ ಹಾಗು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
    ಕೊಲ್ಲುವ ಟಾಸ್ಕ್:
    ಇನ್ನು ಆತಂಕಕಾರಿ ವಿಚಾರವೆಂದರೆ ಬಂಧಿತ ಉಗ್ರ ಸಬಾವುದ್ದೀನ್​ ಅಜ್ಮಿಗೆ ಆರ್​ಎಸ್​ಎಸ್​ ನಾಯಕರನ್ನು ಕೊಲ್ಲುವ ಟಾಸ್ಕ್​ ನೀಡಲಾಗಿತ್ತು. ದೇಶದಲ್ಲಿ ಹಲವು ಕೋಮು ಗಲಭೆಗಳಿಗೆ ಸಂಘ ಕಾರಣ ಎಂದು ತಿಳಿದಿದ್ದ ಈತ, ಪ್ರಮುಖರ ಹತ್ಯೆಗೆ ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ.

    jammu kashmir terroristst ಉಗ್ರ ಕಾನೂನು ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಜಮೀರ್ ಅಹ್ಮದ್ ಹೇಳಿದ ಹಾಗೆ ಏನೂ ಆಗಲ್ಲ…!!
    Next Article ಅವಧಿ ಪೂರ್ಣ ಆಗುವವರೆಗೆ ಬೊಮ್ಮಾಯಿಯವರೇ ಮುಖ್ಯಮಂತ್ರಿ: ನಳಿನ್ ಕುಮಾರ್ ಕಟೀಲ್
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    • Waltertig ರಲ್ಲಿ ಚಾಮುಂಡಿ ಬೆಟ್ಟದಲ್ಲಿ ಇದನ್ನು ಮಾಡುವಂತಿಲ್ಲ.
    • Anthonyroape ರಲ್ಲಿ ಎಲ್‌.ಕೆ. ಅತೀಕ್‌ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ | LK Atheeq
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe