ಬೆಂಗಳೂರು, ಜ.12- ಐಪಿಎಸ್ (IPS) ಅಧಿಕಾರಿಗಳು ಆಯಕಟ್ಟಿನ ಹುದ್ದೆ ಬಯಸುವುದು ಸಹಜ.ಇದಕ್ಕಾಗಿ ಅವರು ಅಧಿಕಾರಸ್ಥ ರಾಜಕಾರಣಿಗಳ ಶಿಫಾರಸುಗಳನ್ನು ಪಡೆಯಲು ಪರದಾಡುತ್ತಾರೆ.ಅದರಲ್ಲೂ ರಾಜ್ಯ ಸರ್ಕಾರದ ವಿವಿಧ ಹುದ್ದೆಗಳು ಇವರಿಗೆ ಅತ್ಯಂತ ಆಕರ್ಷಣೆ.
ಹೀಗಾಗಿ ಯಾರೂ ಕೂಡ ಕೇಂದ್ರ ಸರ್ಕಾರದ ಸೇವೆಗೆ ತೆರಳಲು ಬಯಸುವುದಿಲ್ಲ. ಈಗ ಕೇಂದ್ರ ಸರ್ಕಾರದಲ್ಲಿ ಹಲವು ಐಪಿಎಸ್ ಹುದ್ದೆಗಳು ಖಾಲಿ ಇವೆ.ಇದರಿಂದ ದೈನಂದಿನ ಆಡಳಿತದಲ್ಲಿ ಸಾಕಷ್ಟು ತೊಂದರೆಯಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಇಲಾಖೆ,ಕೇಂದ್ರ ಸೇವೆಗೆ ರಾಜ್ಯ ಪೊಲೀಸ್ ಇಲಾಖೆಯ 28 ಮಂದಿ ಐಪಿಎಸ್ ಅಧಿಕಾರಿಗಳು ನಿಯೋಜನೆಗೊಳ್ಳಲು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.
ಕೇಂದ್ರ ಸೇವೆಗೆ ನಿಯೋಜನೆಗೊಂಡಿರುವ 28 ಮಂದಿ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕೇಂದ್ರ ಗೃಹ ಇಲಾಖೆಯು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ಐಪಿಎಸ್ ಅಧಿಕಾರಿಗಳಾದ ನಿಮಿತ್ ಗೋಯಲ್, ಬಿ.ಎಂ. ಲಕ್ಷ್ಮೀಪ್ರಸಾದ್, ನಿಕ್ಕಂ ಪ್ರಕಾಶ್ ಅಮಿತ್, ಇಲಾಕಿಯಾ ಕರುಣಾಕರನ್, ಡಾ. ಭೀಮಾಶಂಕರ ಗುಳೇದ, ರಾಹುಲ್ ಕುಮಾರ್ ಶಹಾಪುರವಾಡ್, ಧರ್ಮೇಂದ್ರಕುಮಾರ್ ಮೀನಾ, ಉಳಿದಂತೆ ಕೆಎಸ್ಪಿಎಸ್ನಿಂದ ಮುಂಬಡ್ತಿ ಹೊಂದಿದ ಐಪಿಎಸ್ ಅಧಿಕಾರಿಗಳಾದ ಸಿ.ಬಿ. ವೇದಮೂರ್ತಿ, ಶ್ರೀನಾಥ್ ಜೋಶಿ, ಗಿರೀಶ್, ದೇವರಾಜ್ ಸೇರಿ 21 ಮಂದಿ ಕರ್ನಾಟಕ ಮೂಲದ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜಿಸಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ 215 ಐಪಿಎಸ್ ಹುದ್ದೆಗಳಿದ್ದು, ಈ ಪೈಕಿ 150 ಮಂದಿ ನೇರವಾಗಿ ಭಾರತೀಯ ಪೊಲೀಸ್ ಸೇವೆಯಿಂದ ಆಯ್ಕೆಯಾಗಿದ್ದಾರೆ. 65 ಮಂದಿ ಕೆಎಸ್ಪಿಎಸ್ನಿಂದ ಐಪಿಎಸ್ಗಳಾಗಿ ಬಡ್ತಿ ಪಡೆದಿದ್ದಾರೆ. 215 ಮಂದಿ ಐಪಿಎಸ್ ಪೈಕಿ ಶೇ 40 ರಷ್ಟು ಅಂದರೆ 46 ಮಂದಿ ಕೇಂದ್ರ ಸೇವೆಗೆ ತೆರಳಬೇಕೆಂಬ ನಿಯಮವಿದೆ. ಆದರೆ, ಸದ್ಯ 14 ಮಂದಿ ಅಧಿಕಾರಿಗಳಷ್ಟೇ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ 28 ಮಂದಿಯನ್ನು ಕೇಂದ್ರ ಸೇವೆಗೆ ಬರುವಂತೆ ಸೂಚಿಸಲಾಗಿದೆ
ಹಲವು ಅಧಿಕಾರಿಗಳು ಕೇಂದ್ರ ಸೇವೆಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ


2 ಪ್ರತಿಕ್ರಿಯೆಗಳು
Spela smartare på Betano https://betanogame.org/sv/. Nya medlemmar får €500 välkomstbonus och free spins på de bästa slotsen. Gå med i vinnargemenskapen idag.
Your golden moment is waiting behind the next reel – https://mirtazapinec.com , The lights flash for you — not for everyone .