Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಮುಂದೆ ಜಗದೀಶ್ ಶೆಟ್ಟರ್ ಇಟ್ಟ ಬೇಡಿಕೆ ಏನು ಗೊತ್ತಾ | Jagadish Shettar
    ಸುದ್ದಿ

    ಸಿಎಂ ಮುಂದೆ ಜಗದೀಶ್ ಶೆಟ್ಟರ್ ಇಟ್ಟ ಬೇಡಿಕೆ ಏನು ಗೊತ್ತಾ | Jagadish Shettar

    vartha chakraBy vartha chakraಡಿಸೆಂಬರ್ 17, 20231 ಟಿಪ್ಪಣಿ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಧಾರವಾಡ,ಡಿ.17: ಕಳೆದ ವಿಧಾನಸಭೆ ಚುನಾವಣೆ‌ ಸಮಯದಲ್ಲಿ ಬಿಜೆಪಿ ನಾಯಕತ್ವಕ್ಕೆ ಸೆಡ್ಡು ಹೊಡೆದು ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ಲೋಕಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಪ್ರಮುಖ ಅಸ್ತ್ರವಾಗಿ ಬಳಸಲು ಕಾಂಗ್ರೆಸ್ ತೀರ್ಮಾನಿಸಿದೆ.
    ಈ‌ ಹಿನ್ನೆಲೆಯಲ್ಲಿ ಶೆಟ್ಟರ್ ಅವರಿಗೆ ಹೊಸ ಜವಾಬ್ದಾರಿ ಕೊಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮುತುವರ್ಜಿ ವಹಿಸಿದ್ದಾರೆ. ವಿಧಾನಸಭೆ ಚುನಾವಣೆ ವೇಳೆ ಅವರು,ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದಾಗಿ ರಾಜಕೀಯ ಪಲ್ಲಟಗಳಾಗಿತ್ತು. ಕಾಂಗ್ರೆಸ್ 135 ಸ್ಥಾನ ಗೆಲ್ಲಲು ಶೆಟ್ಟರ್ ಅವರ ಸೇರ್ಪಡೆಯೂ ಸಹಕಾರಿಯಾಗಿತ್ತು ಎಂಬ ವಿಶ್ಲೇಷಣೆ ಇದೆ.
    ಆದರೆ ,ವಿಧಾನಸಭೆ ಚುನಾವಣೆಯಲ್ಲಿ ಶೆಟ್ಟರ್ ಸೋಲು ಕಂಡಿದ್ದರು. ಆದರೂ ಕಾಂಗ್ರೆಸ್ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಿಸಿದ್ದು,ಮಂತ್ರಿ ಮಾಡಲಿದೆ ಎಂದು ಹೇಳಲಾಗುತಿತ್ತು.ಆದರೆ ಕಾಂಗ್ರೆಸ್ ನಲ್ಲೇ ಮಂತ್ರಿ ಸ್ಥಾನದ ಆಕಾಂಕ್ಷೆ ಹೊಂದಿರುವ ಹಲವಾರು ಹಿರಿಯ ನಾಯಕರು ಇರುವ ಹಿನ್ನೆಲೆಯಲ್ಲಿ ಶೆಟ್ಟರ್ ಅವರಿಗೆ ಮಂತ್ರಿ ಸ್ಥಾನ ಕಲ್ಪಿಸುವುದು ಕಷ್ಟ ಎನ್ನಲಾಗಿದೆ ಈ ಹಿನ್ನೆಲೆಯಲ್ಲಿ ‌ಅವರನ್ನು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಸಿಎಂ ಒಲವು ಹೊಂದಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಇದಕ್ಕೆ ಪೂರಕವೆಂಬಂತೆ ಗದಗ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ‌ಶೆಟ್ಟರ್ ಅವರನ್ನು ಭೇಟಿ ಮಾಡಿದರು.
    ಶೆಟ್ಟರ್ ಅವರು ಇಂದು ತಮ್ಮ 68 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು ಅವರಿಗೆ ಶುಭ ಹಾರೈಸಿದ ಮುಖ್ಯಮಂತ್ರಿಗಳು ನಂತರ ಶೆಟ್ಟರ್ ಕುಟುಂಬ ಸದಸ್ಯರೊಂದಿಗೆ ಉಪಹಾರ ಸೇವಿಸಿದರು.

    ಈ ವೇಳೆ ಶೆಟ್ಟರ್ ಅವರನ್ನು ಕುರಿತು ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವರ ಅಭಿಪ್ರಾಯ ಕೇಳಿದರು ಎನ್ನಲಾಗಿದೆ.ಆದರೆ ಇದನ್ನು ನಯವಾಗಿ ನಿರಾಕರಿಸಿದ ಅವರು ತಾವು ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಇದು ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿದ್ದೇನೆ ಹೀಗಾಗಿ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ನಯವಾಗಿ ನಿರಾಕರಿಸಿದರು ಎಂದು ಗೊತ್ತಾಗಿದೆ.
    ಆದರೆ,ತಾವು ಹಾಗೂ ಪಕ್ಷದ ನಾಯಕತ್ವ ಬಯಸುವುದಾದರೆ ತಮ್ಮ ಪುತ್ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಆಕಾಂಕ್ಷೆ ಹೊಂದಿದ್ದಾರೆ. ಆತನಿಗೆ ಧಾರವಾಡದ ಬದಲಾಗಿ ಹಾವೇರಿ ಅಥವಾ ಬೆಳಗಾವಿ ಕ್ಷೇತ್ರದಲ್ಲಿ ಅವಕಾಶ ನೀಡಬಹುದು ‌ಇಲ್ಲವಾದರೆ ದಾವಣಗೆರೆ ಕ್ಷೇತ್ರದಲ್ಲೂ ಅವಕಾಶ ನೀಡಬಹುದಾಗಿದೆ.ಈ ಕುರಿತಂತೆ ತಾವು ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರೊಂದಿಗೆ ಮಾತನಾಡುತ್ತೇನೆ.ತಾವೂ ಕೂಡಾ ಮಾತನಾಡಬಹುದಾಗಿದೆ ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.

    ಬಿಜೆಪಿಯ ಕೆಲವು ನಾಯಕರು ಈ ವಿಷಯವಾಗಿ ತಮ್ಮನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದಾರೆ. ತಾವು ಬಿಜೆಪಿ ಸೇರಿದರೆ ಈ ಮೂರರಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ತಮ್ಮ ಪುತ್ರನಿಗೆ ಟಿಕೆಟ್ ನೀಡುವುದಾಗಿ ಆಹ್ವಾನಿಸಿದ್ದಾರೆ.ಆದರೆ ತಾವು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ನಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದ ಅವರು ತಾವು ಟಿಕೆಟ್ ನೀಡದೆ ಹೋದರೂ ಕೂಡ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ ಎಂಬ ಭರವಸೆ ನೀಡಿದರು ಎನ್ನಲಾಗಿದೆ.
    ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆಗೆ ಒಬ್ಬೊಬ್ಬ ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಅವರು ನೀಡುವ ವರದಿ ಮತ್ತು ಶಾಸಕರು, ಹಿಂದೆ ಅಭ್ಯರ್ಥಿಗಳಾಗಿದ್ದವರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು’ ಎಂದರು.

    ಅಲ್ಪಸಂಖ್ಯಾತರಿಗೆ ಮೂರು ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು’ ಎಂಬ ಸಚಿವ ಜಮೀರ್ ಅಹ್ಮದ್ ಖಾನ್‌ ಅವರ ಒತ್ತಾಯಕ್ಕೆ ಪ್ರತಿಕ್ರಿಯಿಸಿ, ‘ಹಿಂದೆಯೂ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿತ್ತು. ಈ ಬಾರಿಯೂ ನೀಡುತ್ತೇವೆ. ಆದರೆ, ಬಿಜೆಪಿಯವರು ಅಲ್ಪಸಂಖ್ಯಾತರ ಮತಗಳೇ ಬೇಡ ಎನ್ನುತ್ತಾರೆ. ಅವರು ದೇಶದ ನಾಗರಿಕರಲ್ಲವೇ?‘ ಎಂದು ಪ್ರಶ್ನಿಸಿದರು.
    ಶೀಘ್ರ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರು, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು’ ಎಂದು ತಿಳಿಸಿದರು.
    ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರ ಭೇಟಿಗೆ ಅವಕಾಶ ನೀಡುವಂತೆ ನ.27ರಂದು ಪತ್ರ ಬರೆಯಲಾಗಿದೆ. ಈವರೆಗೂ ಅವಕಾಶ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು,ರಾಜ್ಯದಲ್ಲಿ ₹35 ಸಾವಿರ ಕೋಟಿ ಮೊತ್ತದ ಬೆಳೆ ನಷ್ಟ ಆಗಿದೆ. ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯಡಿ (ಎನ್‌ಡಿಆರ್‌ಎಫ್‌) ರಾಜ್ಯಕ್ಕೆ ₹18 ಸಾವಿರ ಕೋಟಿ ಬರಬೇಕು. ಇದು ಕೇಂದ್ರದ ಹಣವಲ್ಲ. ರಾಜ್ಯದ ಜನರ ತೆರಿಗೆ ಹಣ. ನಾವು ₹4 ಲಕ್ಷ ಕೋಟಿ ತೆರಿಗೆ ಕಟ್ಟುತ್ತೇವೆ. ಕೇಂದ್ರದಿಂದ ನಮಗೆ ವಾಪಸ್ ಬರುವುದು ₹50 ಸಾವಿರ ಕೋಟಿ ಮಾತ್ರ. ಇದು ನ್ಯಾಯವೇ?’ ಎಂದು ಪ್ರಶ್ನಿಸಿದರು.

    Jagadish Shettar ಕಾಂಗ್ರೆಸ್ ಚುನಾವಣೆ ಧಾರವಾಡ ನರೇಂದ್ರ ಮೋದಿ ನ್ಯಾಯ ಬೆಳೆ ನಷ್ಟ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಜ್ಜನ್ ಜಿಂದಾಲ್ ಇಂತಹ ಕೆಲಸ ಮಾಡಿದ್ರಾ | Sajjan Jindal
    Next Article ಕೇರಳದಲ್ಲಿ ಕೋವಿಡ್,ಕೊಡಗಿನಲ್ಲಿ ಕಟ್ಟೆಚ್ಚರ | COVID Variant JN.1
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    1 ಟಿಪ್ಪಣಿ

    1. AlbertGoP on ನವೆಂಬರ್ 29, 2025 4:11 ಫೂರ್ವಾಹ್ನ


      Заботитесь о здоровье, фигуре и красоте?
      Откройте для себя портал 4lifemd.ru — ваш надёжный источник проверенной информации
      о правильном питании, эффективных тренировках, уходе за кожей и гармоничном
      образе жизни! На сайте публикуются материалы, основанные на последних исследованиях
      и рекомендациях врачей, диетологов и фитнес-экспертов.

      Узнайте, как сбалансировать рацион, укрепить иммунитет,
      достичь идеального веса и сохранить молодость без вреда для организма.
      4lifemd.ru — не просто советы, а практические решения для тех, кто выбирает
      осознанное здоровье каждый день. Подписывайтесь, читайте, меняйтесь!

      Читайте полезные статьи и советы на сайте <a href=https://4lifemd.ru/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • iWild Casino Auszahlungslimit ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • GordonIninc ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • "Lemon Casino Bonus" ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe