Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರೀಕ್ಷೆ ಹುಸಿಗೊಳಿಸಿದ Budget
    ವಾಣಿಜ್ಯ

    ನಿರೀಕ್ಷೆ ಹುಸಿಗೊಳಿಸಿದ Budget

    vartha chakraBy vartha chakraಫೆಬ್ರವರಿ 1, 2023Updated:ಮಾರ್ಚ್ 20, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು
    ಕೇಂದ್ರ ಸರಕಾರದ ಚುನಾವಣೆ ಕಾಲದ ಬಜೆಟ್ನಲ್ಲಿ ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ 5300ಕೋಟಿ ರೂಪಾಯಿ ಬಿಡುಗಡೆ ಮಾಡಿರುವ ಕ್ರಮ ಸ್ವಾಗತಾರ್ಹವಾಗಿದೆ. ಆದರೂ ರಾಜ್ಯಕ್ಕೆ ಚುನಾವಣೆ ಕಾಲದಲ್ಲಾದರೂ ಇನ್ನಷ್ಟು ಹೊಸ ಯೋಜನೆಗಳು ಬರಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ ಎಂದು JDS ವ್ಯಾಖ್ಯಾನಿಸಿದೆ. ‘ಈ Budget ಬಗ್ಗೆ ತಮಗೆ ಭಾರಿ ನಿರೀಕ್ಷೆಯಿತ್ತು ಆದರೆ, ಸಚಿವೆ ನಿರ್ಮಲಾ ಸೀತಾರಾಮನ್ ಅದನ್ನು ಹುಸಿಗೊಳಿಸಿದ್ದಾರೆ’ ಎಂದು JDS ನಾಯಕ ಶರವಣ ಹೇಳಿದ್ದಾರೆ.

    ‘ಮೂಲಭೂತ ಸೌಕರ್ಯ, ನಿರುದ್ಯೋಗ ನಿವಾರಣೆ, ನಗರಾಭಿವೃದ್ದಿ ವಿಚಾರದಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಮೀಸಲಿಡಲಾಗಿದೆ ಆದರೂ, ಕರ್ನಾಟಕದ ಬಗ್ಗೆ ಸ್ಪಷ್ಟ ಚಿತ್ರಣವಿಲ್ಲದ ಬಜೆಟ್ ಇದಾಗಿದೆ’ ಎಂದು ಟೀಕಿಸಿದ್ದಾರೆ. ‘ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಮಹದಾಯಿ, ಮೇಕೆದಾಟು ಯೋಜನೆಗಳ ವಿಚಾರದಲ್ಲಿ ಬಜೆಟ್ ಯಾವ ಸ್ಪಂದನೆಯನ್ನು ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಒತ್ತಡಕ್ಕೆ ಕೇಂದ್ರ ಮಣಿದಿಲ್ಲ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳುವ ರೀತಿ ಡಬಲ್ ಇಂಜಿನ್ ಸರಕಾರದ ಸಾಧನೆ, ಸಮನ್ವಯತೆ ಸುಳ್ಳು ಎನ್ನುವುದು ಮೇಲ್ನೋಟಕ್ಕೆ ಸಾಬೀತಾಗಿದೆ’ ಎಂದಿದ್ದಾರೆ.

    ‘ಎತ್ತಿನ ಹೊಳೆ ಯೋಜನೆಯ ಬಗ್ಗೆಯೂ ಸರಕಾರ ಚಕಾರವೆತ್ತಿಲ್ಲ. ಇನ್ನು ರಾಜ್ಯದ ಮಹತ್ವಾಕಾಂಕ್ಷೆಯ ರೈಲ್ವೆ ಯೋಜನೆಗಳ ಬಗ್ಗೆ ನಿರ್ದಿಷ್ಟ ಭರವಸೆಗಳು ಈಡೇರಿಲ್ಲ. ಅದರಲ್ಲೂ ವಿಶೇಷವಾಗಿ ಕಳೆದ ಬಜೆಟ್ನಲ್ಲಿ ಘೋಷಿಸಿದ ಬೆಂಗಳೂರು ಸಬರ್ಬನ್ ರೈಲ್ವೆ ಯೋಜನೆಗೆ ಯಾವುದೇ ನಿರ್ದಿಷ್ಟ ನೆರವಿನ ಪ್ರಸ್ತಾಪವಿಲ್ಲ’ ಎಂದು ಹೇಳಿದ್ದಾರೆ. ‘ಇನ್ನು ಮುಖ್ಯವಾಗಿ ರೈತರ ವಿಚಾರದಲ್ಲಿ ಕೇಂದ್ರ ಸರಕಾರ ಈ ಬಜೆಟ್ ನಲ್ಲಿ ಯಾವುದೇ ಮಹತ್ತರ ಕೊಡುಗೆ ನೀಡಿಲ್ಲ. ರೈತರ ಖಾತೆಗೆ ನೇರವಾಗಿ ರವಾನಿಸುವ 6 ಸಾವಿರ ರೂಪಾಯಿ ಹಣವನ್ನು ಹೆಚ್ಚಿಸುವ ನಿರೀಕ್ಷೆ ಹುಸಿಯಾಗಿದೆ. ಸಿರಿಧಾನ್ಯ ಅಭಿವೃದ್ದಿ ಬಗ್ಗೆ ಘೋಷಣೆ ಹೊರಡಿಸಲಾಗಿದೆಯಾದರೂ, ಹೊಸ ರೀತಿಯಲ್ಲಿ ಅದರ ಬೆಳೆಗಾರರಿಗೆ ಸ್ಥಿರತೆ ತಂದುಕೊಡುವ ನಿಟ್ಟಿನಲ್ಲಿ ಕನಿಷ್ಠ ಬೆಂಬಲ ಬೆಲೆ ವ್ಯಾಪ್ತಿಯಲ್ಲಿ ತರುವ ಬಗ್ಗೆ ರಾಷ್ಟ್ರೀಯ ನೀತಿಯನ್ನು ಘೋಷಿಸುವಲ್ಲಿ ಈ ಬಜೆಟ್ ವಿಫಲ ಆಗಿದೆ’ ಎಂದು ತಿಳಿಸಿದ್ದಾರೆ.

    ‘ರಾಜ್ಯಕ್ಕೆ ಯೋಜನಾ ಆಯೋಗದ ಶಿಫಾರಸಿನಂತೆ ಹೆಚ್ಚುವರಿ ಅನುದಾನ ನೀಡುವ ವಿಚಾರದ ಬಗ್ಗೆಯೂ ಈ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಇಲ್ಲ. ಒಟ್ಟಾರೆ ನಮ್ಮವರೇ ಆದ, ನಮ್ಮದೇ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾದ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಚುನಾವಣೆ ಕಾಲದಲ್ಲಾದರೂ ಸಮಗ್ರವಾಗಿ ಬಂಪರ್ ಕೊಡುಗೆ ನೀಡುತ್ತಾರೆಂಬ ನಿರೀಕ್ಷೆ ಹುಸಿಯಾಗಿದೆ’ ಎಂದು ಹೇಳಿದ್ದಾರೆ.

    #budget #JDS #nirmala sitharaman Bangalore Government JDS Karnataka ಚುನಾವಣೆ ನರೇಂದ್ರ ಮೋದಿ ಬೊಮ್ಮಾಯಿ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleHindenburg ನ ಆರೋಪಗಳನ್ನು ಒಪ್ಪಿಕೊಂಡರೆ Adani?
    Next Article Budget ನಲ್ಲಿ ಬಯಲು ಸೀಮೆಗೆ ನಿರ್ಮಲಾ ಬಂಪರ್ ಕೊಡುಗೆ!
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. 3pn7l on ಜೂನ್ 4, 2025 8:45 ಫೂರ್ವಾಹ್ನ

      get clomid for sale buying generic clomid pill buy cheap clomiphene pill can i order cheap clomid online can i get clomiphene online order generic clomiphene without rxРіРѕРІРѕСЂРёС‚: where to buy generic clomid pill

      Reply
    2. cheap female cialis on ಜೂನ್ 10, 2025 4:56 ಫೂರ್ವಾಹ್ನ

      More articles like this would remedy the blogosphere richer.

      Reply
    3. bactrim and flagyl on ಜೂನ್ 11, 2025 11:17 ಅಪರಾಹ್ನ

      With thanks. Loads of knowledge!

      Reply
    4. hmsni on ಜೂನ್ 19, 2025 11:45 ಫೂರ್ವಾಹ್ನ

      inderal 10mg sale – buy inderal without a prescription purchase methotrexate without prescription

      Reply
    5. ujq6n on ಜೂನ್ 22, 2025 7:55 ಫೂರ್ವಾಹ್ನ

      amoxicillin usa – amoxil generic buy ipratropium 100mcg sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DerricktaG ರಲ್ಲಿ ಗೌರಿ ಹಬ್ಬಕ್ಕೆ ಶಿವಕುಮಾರ್ ಗಂಗೆ ಪೂಜೆ
    • 3jqd1 ರಲ್ಲಿ ಮಂಗಳಮುಖಿಯ‌ ಈ ಸಾಧನೆ ನೋಡಿ.
    • EdwardNor ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe