Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನ ದೋಚಿ ಪರಾರಿಯಾಗುವಾಗ ಆಗಿದ್ದೇನು?
    Viral

    ಚಿನ್ನ ದೋಚಿ ಪರಾರಿಯಾಗುವಾಗ ಆಗಿದ್ದೇನು?

    vartha chakraBy vartha chakraಜನವರಿ 29, 202426 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.29- ಚಿನ್ನಾಭರಣಗಳ ಹಾಲ್‌ಮಾರ್ಕ್ ಹಾಗೂ ಜಿ ಎಸ್ ಟಿ ದಾಖಲೆಗಳ ಪರಿಶೀಲನೆಯ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಧಿಕಾರಿಗಳು ಎಂದು ಹೇಳಿಕೊಂಡು ಚಿನ್ನಾಭರಣ ದೋಚಿ ಪರಾರಿಯಾಗುವ ವೇಳೆ ದರೋಡೆಕೋರರು ಸಿನಿಮೀಯ ರೀತಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ.
    ಕೇರಳದ ಎರಾಕುಲಂ ಜಿಲ್ಲೆಯ ಸಂಬತ್ ಕುಮಾರ್ ಅಲಿಯಾಸ್ ಸಂಪತ್(55) ತ್ರಿಶೂರ್ ಜಿಲ್ಲೆಯ ಜೋಶಿ(54) ಉತ್ತರಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಸಂದೀಪ್ ಶರ್ಮಾ(48) ಹಾಗೂ ಅವಿನಾಶ್ ಕುಮಾರ್(27) ಬಂಧಿತ ಆರೋಪಿಗಳಾಗಿದ್ದಾರೆ.

    ಬಂಧಿತ ಆರೋಪಿಗಳು ಇನ್ನೊವಾ ಕಾರಿನಲ್ಲಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ನ ಸ್ಟಿಕ್ಕರ್ ಅಂಟಿಸಿಕೊಂಡು ತಾವು ಬಿಐಎಸ್ ಅಧಿಕಾರಿಗಳು ಎಂದು ಹೇಳಿಕೊಂಡು ಕೆಆರ್ಪುರಂನ ಭಟ್ಟರಹಳ್ಳಿಯ ಆರ್ ಎಂ ಎಸ್ ಕಾಲೋನಿಯ ಮಹಾಲಕ್ಷ್ಮಿ ಜ್ಯುವೆಲರ್ಸ್ ಮೇಲೆ ದಾಳಿ ಮಾಡಿ 45 ನಿಮಿಷ ಕಾರ್ಯಾಚರಣೆ ನಡೆಸಿದರು. ಹಾಲ್ ಮಾರ್ಕ್ ಹಾಕಿಲ್ಲ ಎಂದು ಅಂಗಡಿಯಲ್ಲಿದ್ದ 80 ಲಕ್ಷ  ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡು ಇವೆಲ್ಲವನ್ನೂ ಜಪ್ತಿ ಮಾಡುವುದಾಗಿ ಹೇಳಿದರು.
    ಅಂಗಡಿ ಮಾಲೀಕರಿಗೆ ಬಿಐಎಸ್‌ ಅಧಿಕಾರಿಗಳ ಹೆಸರಲ್ಲಿ ಜಪ್ತಿ ಪ್ರಮಾಣ ಪತ್ರ ನೀಡಿ ಮುಂದಿನ ವಾರ ‌ಚೆನ್ನೈನ ಕಚೇರಿಗೆ ಬಂದು ಕಾನೂನು ಪ್ರಕ್ರಿಯೆ ಮುಗಿಸಿ ಚಿನ್ನ ವಾಪಸ್ ತೆಗೆದುಕೊಂಡು ಹೋಗುವಂತೆ ಹೇಳಿದರು
    ಆನಂತರ ಜಪ್ತಿ ಮಾಡಿದ ಚಿನ್ನವನ್ನು ಕಾರಿನಲ್ಲಿ ತುಂಬಿಕೊಂಡು ಹೋಗುವಾಗ ಸಿಸಿಟಿವಿ ಡಿವಿಆರ್ ತೆಗೆದುಕೊಂಡು ಹೋಗಿದ್ದಾರೆ. ಇದನ್ನು ಕಂಡು ಅನುಮಾನಗೊಂಡ ಚಿನ್ನದ ಅಂಗಡಿ ಕೆಲ ಸಿಬ್ಬಂದಿಗಳು,ಮತ್ತೊಂದು ವಾಹನದಲ್ಲಿ ಇವರ ಕಾರನ್ನು ಹಿಂಬಾಲಿಸಿದ್ದಾರೆ.ಅವರನ್ನು ಕಂಡ ಆರೋಪಿಗಳು ಹೆದರಿ  ತಪ್ಪಿಸಿಕೊಳ್ಳಲು ಮುಂದಾಗಿ ಟಿಸಿ ಪಾಳ್ಯದಲ್ಲಿ ಬೈಕ್ಗಳಿಗೆ ಡಿಕ್ಕಿ ಹೊಡೆದಿದ್ದಾರೆ.

    ಮತ್ತೊಂದೆಡೆ ಅಂಗಡಿ ಮಾಲಿಕರಿಗೂ‌ ಈ ಬಗ್ಗೆ ಅನುಮಾನ ಬಂದು ಕೆಆರ್ಪುರಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರಿಗೆ ಸರಣಿ ಅಪಘಾತದ ಮಾಹಿತಿ ದೊರೆತಿದೆ.
    ಕೂಡಲೇ ಎಚ್ಚರಗೊಂಡ ಪೊಲೀಸರು ಟಿಸಿ ಪಾಳ್ಯದ ಕಡೆಗೆ ಹೋಗಿದ್ದು, ಪೊಲೀಸರು ಬರುವುದನ್ನು ಕಂಡ ನಕಲಿ ಅಧಿಕಾರಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಅವರನ್ನು ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾ ಬಂದಿತಸಂಬತ್ ಕುಮಾರ್ ಅಲಿಯಾಸ್ ಸಂಪತ್  ಹಿಂದೆ ಮಂಡ್ಯದಲ್ಲಿ  ಕಳ್ಳತನ ಕೃತ್ಯ‌ ನಡೆಸಿ ಬಂಧಿತನಾಗಿ ಜೈಲು ವಾಸ ಅನುಭವಿಸಿ ಬಿಡುಗಡೆಯಾಗಿದ್ದನು. ಅದಾದ ಬಳಿಕ ತಮಿಳುನಾಡು ಮೂಲದ ಓರ್ವ ವ್ಯಕ್ತಿಯ ಸಂರ್ಪಕಕ್ಕೆ ಬಂದಿದ್ದಾನೆ. ಆತನ ನಿರ್ದೇಶನದಂತೆ ಈ ಕೃತ್ಯಕ್ಕೆ ಕೈ ಹಾಕಿದ್ದಾನೆ.

    ಆರೋಪಿಗಳು ಬಂಧಿತರಾಗುತ್ತಿದ್ದಂತೆ ತಮಿಳುನಾಡು ಮೂಲದ ಮಾಸ್ಟರ್ ಮೈಂಡ್ ನಾಪತ್ತೆಯಾಗಿದ್ದಾನೆ. ಕೆಆರ್ಪುರಂ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
    ಕಳ್ಳತನವಾಗಿದ್ದ ಸಂಪೂರ್ಣ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿರುವ ಕೆಆರ್ ಪುರಂ ಪೊಲೀಸ್ ಇನ್ಸ್‌ಪೆಕ್ಟರ್  ಮಂಜುನಾಥ್ ಮತ್ತವರ ಸಿಬ್ಬಂದಿ ಮುಂದಿನ. ತನಿಖೆಯನ್ನು ಕೈಗೊಂಡಿದ್ದಾರೆ ಎಂದು‌ ಡಿಸಿಪಿ ಶಿವಕುಮಾರ್ ತಿಳಿಸಿದರು.

    Verbattle
    Verbattle
    Verbattle
    ಅಪಘಾತ ಕಳ್ಳತನ ಕಾನೂನು ಚಿನ್ನ ಡಿಕ್ಕಿ ಬೈಕ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣೆ ಅಖಾಡಕ್ಕೆ ಮೊದಲ ಎನ್ ಡಿ ಎ ಅಭ್ಯರ್ಥಿ | JDS
    Next Article ಬುಡುಬುಡಿಕೆಯವನು ಹೀಗಾ ಮಾಡೋದು | Budbudki
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • LinwoodGah ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Glennhof ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.