Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆಯಲ್ಲಿ Kageri ಗರಂ – ಕಲಾಪ ಮುಂದೂಡಿಕೆ
    ರಾಜಕೀಯ

    ವಿಧಾನಸಭೆಯಲ್ಲಿ Kageri ಗರಂ – ಕಲಾಪ ಮುಂದೂಡಿಕೆ

    vartha chakraBy vartha chakraಫೆಬ್ರವರಿ 16, 202351 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು

    Congress ಕಾರ್ಯಾಧ್ಯಕ್ಷ ಹಾಗೂ ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ (Eshwar Khandre) ಅವರ ಕುರಿತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ‌ಕಾಗೇರಿ (Vishweshwar Hegde Kageri) ವಿಧಾನಸಭೆಯಲ್ಲಿ ನೀಡಿದ ಹೇಳಿಕೆ ಭಾರಿ ಕೋಲಾಹಲವನ್ನೇ ಸೃಷ್ಟಿಸಿ, ಕಲಾಪವನ್ನು ಅಲ್ಪಕಾಲಾವಧಿಗೆ ಮುಂದೂಡಲಾಯಿತು.

    ಶೂನ್ಯವೇಳೆಯ ಕಲಾಪದಲ್ಲಿ ಸಭಾಧ್ಯಕ್ಷರು ಸೂಚನೆ ನೀಡಿದ ನಂತರವೂ ಏರು ದನಿಯಲ್ಲಿ ಖಂಡ್ರೆ ಮಾತನಾಡುವುದನ್ನು ಖಂಡಿಸಿದ ಸಭಾದ್ಯಕ್ಷರು, ‘ನಿಮ್ಮಂಥವರು ಆಯ್ಕೆಯಾಗಿ ಬರುವುದು ಈ ಸದನಕ್ಕೆ ಅವಮಾನ’ ಎಂದು ಹೇಳಿದರು.

    ಸಭಾಧ್ಯಕ್ಷರ ಮಾತಿಗೆ ತೀವ್ರ ಆಕ್ಷೇಪಿಸಿದ ಕಾಂಗ್ರೆಸ್  ‘ಭಾಲ್ಕಿ ಜನರಿಗೆ ಮಾಡಿದ ಅವಮಾನವಿದು’ ಎಂದು ವಿರೋಧಿಸಿ ಸದನದ ಬಾವಿಗಿಳಿದು ಧರಣಿ ನಡೆಸಲು ಮುಂದಾದರು. ಸದನ ಸಹಜ ಸ್ಥಿತಿಗೆ ಬಾರದ ಕಾರಣ ಸಭಾಧ್ಯಕ್ಷರು ಸದನದ ಕಾರ್ಯಕಲಾಪವನ್ನು ಕೆಲಕಾಲ ಕಾಲ ಮುಂದೂಡಿದರು.

    ಆಗಿದ್ದೇನು?

    ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ (U. T. Khader) ಅವರು, ‘ರಾಜ್ಯದಲ್ಲಿ ಇತ್ತೀಚೆಗೆ ಕೇಳಿಬರುತ್ತಿರುವ ದ್ವೇಷಭಾಷಣ ಕುರಿತಂತೆ ಪ್ರಸ್ತಾಪಿಸಿ, ಸಚಿವರು ಹಾಗೂ ಜನಪ್ರತಿನಿಧಿಗಳು ನೀಡುತ್ತಿರುವ ಹೇಳಿಕೆಗಳು ಅಶಾಂತಿಗೆ ಕಾರಣವಾಗುತ್ತಿವೆ’ ಎಂದು ಹೇಳಿದರು.

    ಇದಕ್ಕೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ (Dr C N Ashwath Narayan) ಅವರು ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡರು.

    ‘ನನಗೆ ಯಾರನ್ನೂ ವೈಯಕ್ತಿಕವಾಗಿ ಅಗೌರವಿಸುವ ಹಾಗೂ ಟೀಕೆ ಮಾಡುವ ಉದ್ದೇಶವಿಲ್ಲ. ಕೇವಲ ರಾಜಕೀಯ ಭಾಷಣ ಮಾಡಿದ್ದೇನೆಂದು’ ಸ್ಪಷ್ಟಪಡಿಸಿದರು.

    ಸಚಿವರ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಯು.ಟಿ.ಖಾದರ್, ಕೃಷ್ಣಬೈರೇಗೌಡ (Krishna Byre Gowda), ತನ್ವೀರ್ ಸೇಠ್ (Tanveer Seth), ಪ್ರಿಯಾಂಕ ಖರ್ಗೆ (Priyank M. Kharge), ಈಶ್ವರಖಂಡ್ರೆ ಮತ್ತಿತರರು, ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

    ಸಚಿವರ ಉತ್ತರ ಹಾರಿಕೆಯಾಗಿದೆ. ಆರೋಪಿ ಸ್ಥಾನದಲ್ಲಿ ಇರುವವರಿಂದ ಇನ್ನೇನು ಉತ್ತರ ನಿರೀಕ್ಷಿಸಲು ಸಾಧ್ಯ ಎಂದು ವಾಗ್ದಾಳಿ ಆರಂಭಿಸಿದರು. ಆಗ ಸದನದಲ್ಲಿ ಗದ್ದಲದ ವಾತಾವರಣ ಉಂಟಾಯಿತು.

    ಗದ್ದಲದ ನಡುವೆಯೇ ಅಶ್ವತ್ಥನಾರಾಯಣ ತಮ್ಮ ನಿಲುವನ್ನು ಸಮರ್ಥಿಸುತ್ತಾ,  ಉತ್ತರಿಸುತ್ತಿದ್ದಾಗ ಈಶ್ವರ ಖಂಡ್ರೆ ಏರಿದ ಧ್ವನಿಯಲ್ಲಿ ಮಾತನಾಡಿದರು. ಇದು ಸಭಾಧ್ಯಕ್ಷರನ್ನು ಕೆರಳಿಸಿತು. ಮಾತು ನಿಲ್ಲಿಸಿ ಕೂರುವಂತೆ ಅವರಿಗೆ ತಾಕೀತು ಮಾಡಿದರೂ, ಪದೇ ಪದೇ ಕುಳಿತುಕೊಳ್ಳಿ ಎಂದು ಸೂಚನೆ ನೀಡಿದ ಹೊರತಾಗಿಯೂ, ಖಂಡ್ರೆ ಮಾತನಾಡುವುದನ್ನು ನಿಲ್ಲಿಸಲಿಲ್ಲ.

    ಇದರಿಂದ ಸಹನೆ ಕಳೆದುಕೊಂಡ ಕಾಗೇರಿ ಅವರು, ‘ನೀವು ಹಿರಿಯರು, ಈ ರೀತಿ ನಡೆದುಕೊಳ್ಳುವುದು ನಿಮಗೆ ಶೋಭೆ ತರುವುದಿಲ್ಲ. ಸಚಿವರಾಗಿ ಕೆಲಸ ಮಾಡಿದ ಅನುಭವವಿದೆ. ಸಭಾಧ್ಯಕ್ಷರು ಹೇಳಿದ ಮೇಲೂ ನೀವು ಪೀಠಕ್ಕೆ ಗೌರವ ಕೊಡದೆ ಮಾತನಾಡುತ್ತಿದ್ದೀರಿ. ಇದೇನಾ ನೀವು ಸಭಾಧ್ಯಕ್ಷರಿಗೆ ಕೊಡುವ ಗೌರವ’ ಎಂದು ಪ್ರಶ್ನಿಸಿದರು.

    ‘ನಾನು ಇದುವರೆಗೆ ಸಹನೆ ಕಳೆದುಕೊಳ್ಳದೇ ಮಾತನಾಡಿದ್ದೇನೆ. ಪೂರ್ಣ ಅಧಿಕಾರ ಚಲಾಯಿಸುವ ಅವಕಾಶ ಮಾಡಿಕೊಡಬೇಡಿ. ನನ್ನನ್ನು ಅನಗತ್ಯವಾಗಿ ಎಳೆದು ಮಾತನಾಡಿಸುತ್ತೀರಿ. ಕೇಳುವ ಸೌಜನ್ಯವಿಲ್ಲವೆ? ಪದೇ ಪದೇ ಇದೇ ರೀತಿ ಮುಂದುವರೆದರೆ, ಸದನದಿಂದ ಹೊರ ಹಾಕಬೇಕಾಗುತ್ತದೆ’ ಎಂದು ಸಭಾಧ್ಯಕ್ಷರು ಎಚ್ಚರಿಕೆ ನೀಡಿದರು.

    assemly proceedings Congress Dr C N Ashwath Narayan Eshwar Khandre Government Karnataka m Politics Vishweshwar Hegde Kageri war ಕಾಂಗ್ರೆಸ್ ಕಾನೂನು ರಾಜಕೀಯ ವಿಧಾನಸಭೆ ಕಲಾಪ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    Next Article Vote ನ ಮೇಲೆ ಕಣ್ಣು- budget ನಲ್ಲಿ ಸರ್ವರಿಗೂ ಹೊನ್ನು
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • GordonIninc ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • "Lemon Casino Bonus" ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 777bet_risn ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe