Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ | Madrasa
    ಧಾರ್ಮಿಕ

    ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ | Madrasa

    vartha chakraBy vartha chakraಆಗಷ್ಟ್ 28, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ಧಾರ್ಮಿಕ ಶಿಕ್ಷಣ ಬೋಧಿಸುವ ಮದರಸಾಗಳಲ್ಲಿ (Madrasa) ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳು ಸೇರಿದಂತೆ ವಿಜ್ಞಾನ, ಗಣಿತ ವಿಷಯಗಳನ್ನು ಬೋಧಿಸುವಙತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮದರಸಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸೇರಿ ಇತರೆ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

    ರಾಜ್ಯದ ವಖ್ಫ್ ಮಂಡಳಿಯಲ್ಲಿ ನೋಂದಣಿಯಾದ 1265 ಮದರಸಗಳಿದ್ದು ಆ ಪೈಕಿ 100 ಮದರಸಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕವಾಗಿ ಕಲಿಕೆ ಆರಂಭಿಸಿ. ಮುಂದಿನ ವರ್ಷದಿಂದ ಎಲ್ಲ ಮದರಸಗಳಲ್ಲಿ ಆರಂಭಿಸಲು ಪ್ರಸ್ತಾವನೆ ಸಿದ್ದಪಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
    ಮದರಸಗಳಲ್ಲಿ ಕನ್ನಡ, ಇಂಗ್ಲಿಷ್ ಸೇರಿ ಇತರೆ ವಿಷಯ ಕಲಿಕೆಯಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಭವಿಷ್ಯ ದಲ್ಲಿ ಉತ್ತಮ ಅವಕಾಶ ಸಿಗಲಿದೆ ಎಂದು ಹೇಳಿದರು.

    ಅಲ್ಪಸಂಖ್ಯಾತರ ನಿರ್ದೇಶನಾಲಯ ವ್ಯಾಪ್ತಿಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ನೀಡುವ ಪ್ರೋತ್ಸಾಹ ಧನ ಮೊತ್ತ 20 ಲಕ್ಷ ರೂ. ನಿಂದ 30 ಲಕ್ಷ ರೂ. ಗಳಿಗೆ ಹೆಚ್ಚಿಸಲು ಹಾಗೂ ಐ ಐ ಟಿ, ಎನ್ ಐ ಟಿ ಸೇರಿದಂತೆ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಲಿ ನೀಡುತ್ತಿರುವ ಎರಡು ಲಕ್ಷ ರೂ. ಪ್ರೋತ್ಸಾಹ ಧನ ಮೊತ್ತ ನಾಲ್ಕು ಲಕ್ಷ ರೂ. ಗಳಿಗೆ ಹೆಚ್ಚಿಸಲು ಇದೇ ಸಂದರ್ಭದಲ್ಲಿ ಸಚಿವರು ಸೂಚಿಸಿದರು.
    ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಮತ್ತು ಮೌಲಾನಾ ಅಜಾದ್ ಮಾದಾರಿ ಶಾಲೆಗಳ 9,10 ಹಾಗೂ 12 ನೇ ತರಗತಿಯ ಒಂದು ಲಕ್ಷ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿ ಹಾಗೂ ನಿರ್ದೇಶನಾಲಯದ ಯೋಜನೆಗಳ ಕೈಪಿಡಿಯನ್ನು ಸಚಿವರು ಇದೇ ವೇಳೆ ಬಿಡುಗಡೆ ಮಾಡಿದರು.

    ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ 9,10 ಹಾಗೂ 12 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿಯಲ್ಲಿ ಪ್ರತಿ ವಿಷಯದ ಬಗ್ಗೆ ಕ್ಯೂ ಆರ್ ಕೋಡ್ ಸಹ ಮುದ್ರಿಸಿದ್ದು ವಿದ್ಯಾರ್ಥಿಗಳಿಗೆ ಯಾವುದಾದರೂ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದರೆ ಕ್ಯೂ ಆರ್ ಕೋಡ್ ಸ್ಕಾನ್ ಮಾಡಿದರೆ ವಿಡಿಯೋ ಸಮೇತ ಮಾಹಿತಿ ಲಭ್ಯ ವಾಗಲಿದೆ.
    ಈ ವೇಳೆ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶನಾಲಯ ನಿರ್ದೇಶಕ ಜಿಲಾನಿ ಮೊಕಾಶಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ನಜೀರ್, ವಖ್ಫ್ ಮಂಡಳಿ ಕಾರ್ಯನಿರ್ವಾಹಕ ಖಾನ್ ಫರ್ವಜ್ ಉಪಸ್ಥಿತರಿದ್ದರು.

    Karnataka karnataka madrasas m madrasa News ಕಾಲೇಜು ಧಾರ್ಮಿಕ ವಿದ್ಯಾರ್ಥಿ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಮಾನವೀಯತೆ ಮೆರೆದ ಮಂತ್ರಿ ಹೆಬ್ಬಾಳ್ಕರ್ | Lakshmi Hebbalkar
    Next Article ಸಾಹಿತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದು ಇವನೇ… | Death Threat
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HerbertNub ರಲ್ಲಿ ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • HunterMooda ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • FobertCaR ರಲ್ಲಿ ಯತ್ನಾಳ್, ಸೋಮಣ್ಣನಿಗೆ ಹೈಕಮಾಂಡ್ ಬುಲಾವ್ | Yatnal
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe