ಭ್ರಷ್ಟರಿಗೆ ಮಣೆ ಹಾಕ್ತಾರೆ. ಮೂರು ಪಕ್ಷಗಳಲ್ಲೂ ಭ್ರಷ್ಟಾಚಾರಿಗಳಿದ್ದಾರೆ. ಮೂರು ಪಕ್ಷದವರು ಲೋಕಾಯುಕ್ತಕ್ಕೆ ವಿರೋಧಿಯಾಗಿದ್ದಾರೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಿಡಿಕಾರಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಂತೋಷ್ ಹೆಗ್ಡೆ, ಜೈಲಿಗೆ ಹೋಗಿ ಬಂದವರಿಗೆ ಸೇಬಿನ ಹಾರ ಹಾಕುತ್ತಾರೆ. ಭ್ರಷ್ಟರಿಗೆ, ಭ್ರಷ್ಟಾಚಾರರಿಗೆ ಜೈಕಾರ ಹಾಕ್ತಾರೆ. ಏರ್ಪೋರ್ಟ್ ಹೊರಗೆ ಹೋಗಿ ಸ್ವಾಗತ ಕೋರುತ್ತಾರೆ. ಸದ್ಯ ಜನರ ಮನಃಸ್ಥಿತಿ ಹಣ, ಅಧಿಕಾರದ ಹಿಂದೆ ಸಾಗಿದೆ. ಅದಕ್ಕಾಗಿ ಹಂಬಲಿಸುತ್ತಾರೆ ಹಾತೋರೆಯುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಭ್ರಷ್ಟರಿಗೆ ಮಣೆ ಹಾಕ್ತಾರೆ. ಮೂರು ಪಕ್ಷಗಳಲ್ಲೂ ಭ್ರಷ್ಟಾಚಾರಿಗಳಿದ್ದು, ಮೂರು ಪಕ್ಷದವರು ಲೋಕಾಯುಕ್ತಕ್ಕೆ ವಿರೋಧಿಯಾಗಿದ್ದಾರೆ. ಚುನಾವಣೆಯ ಕಾರಣದಿಂದ ಗಿಮಿಕ್ ಮಾಡ್ತಿದ್ದಾರೆ. ಒಂದು ವೇಳೆ ಸುಪ್ರೀಂ ಕೋರ್ಟ್ ಮೊರೆ ಹೋದರೆ ಅಧಿಕಾರ ಕಳೆದುಕೊಳ್ಳುವ ಭಯ ಇದೆ. ಚುನಾವಣೆ ಸಮಿಪಿಸುತ್ತಿರುವ ಹಿನ್ನಲೆ ನೇರವಾಗಿ ಅಪೀಲು ಹೋಗ್ತಿಲ್ಲ. ಹಿಂಬಾಲಕರು ಹಿಂಬಾಗಿಲ ಮೂಲಕ ಸುಪ್ರೀಂ ಮೊರೆ ಹೋಗಬಹುದು ಅದಕ್ಕೆ ಅವಕಾಶ ಇದೆ. ಸದ್ಯಕ್ಕೆ ಚುನಾವಣೆ ಇರುವ ಕಾರಣ ಗೌಣವಾಗಿದ್ದಾರೆ. ರಾಜ್ಯದಲ್ಲಿ ಪ್ರವಾಹ ಉಂಟಾಗಿ ಸಾವಿರರು ಕೋಟಿ ನಷ್ಠ ಉಂಟಾಗಿದೆ. ಆದ್ರೇ ೪೦% ಕಮಿಷನ್ ಆಸೆಗಾಗಿ ಜನಪ್ರತಿನಿಧಿಗಳು ಅಧಿಕಾರಿಗಳು ಸೈಲೆಂಟ್ ಆಗಿದ್ದಾರೆ ಎಂದು ಆರೋಪಿಸಿದರು.
ಲೋಕಾಯುಕ್ತಕ್ಕೆ ಮತ್ತೆ ಬಲ: ಭ್ರಷ್ಟಾಚಾರಿಗಳಿಗೆ ನಡುಕ
ಲೋಕಾಯುಕ್ತಕ್ಕೆ ಮತ್ತೆ ಬಲ ಬಂದಿದೆ. ಭ್ರಷ್ಟಾಚಾರಿಗಳಿಗೆ ನಡುಕ ಹುಟ್ಟಿದೆ. ಮೂರು ಪಕ್ಷದಲ್ಲೂ ಕೂಡ ಈ ತೀರ್ಪುನ್ನ ವಿರೋಧಿಸಬಹುದು. ಕಾರಣ ಲೋಕಾಯುಕ್ತ ಇದ್ದ ವೇಳೆ ಸಾಕಷ್ಟು ಪ್ರಕರಣಗಳಲ್ಲಿ ಶಿಕ್ಷೆ ಆಗಿತ್ತು. ಎಸಿಬಿ ಬಂದ ಬಳಿಕ ಯಾವೊಬ್ಬ ರಾಜಕಾರಣಿ ಮೇಲೆ, ಅಧಿಕಾರಿಯ ಮೇಲೆ ಕ್ರಮ ಜರುಗಿಸರಲಿಲ್ಲ. ಲೋಕಾಯುಕ್ತಕ್ಕೆ ಸ್ವಾತಂತ್ರ್ಯವಾದ ಅಧಿಕಾರ ಹಾಗೂ ಸವಲತ್ತುಗಳನ್ನ ನೀಡಬೇಕು. ಈ ಮೂಲಕ ಲೋಕಾಯುಕ್ತವನ್ನ ಬಲ ಪಡಿಸಬೇಕು.ಎಸಿಬಿಯಲ್ಲಿ ಈವರಗೆ ಸಾವಿರಾರು ಕೇಸ್ ಗಳು ದಾಖಲಾಗಿವೆ ಆದರೆ ಯಾರಿಗೂ ಶಿಕ್ಷೆ ಆಗಿಲ್ಲ ಎಂಬುದೆ ಬೇಸರ. ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಶಿಕ್ಷಯೇ ಆಗಿಲ್ಲ. ಮಂತ್ರಿ ಇರಲಿ ಒಬ್ಬ ಶಾಸಕನನ್ನು ಕೂಡ ಎಸಿಬಿ ವಿಚಾರಣೆ ಮಾಡಿಲ್ಲ ಎಂದು ಕಿಡಿಕಾರಿದರು.